AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶೆಟ್ಟಿ-ಶಾರುಖ್ ಮಧ್ಯೆ ಯಾವುದೂ ಸರಿ ಇಲ್ಲ? ನಿರ್ದೇಶಕನ ಸ್ಪಷ್ಟನೆ

ರೋಹಿತ್ ಶೆಟ್ಟಿ ಮತ್ತು ಶಾರುಖ್ ಖಾನ್ ಅವರ ನಡುವಿನ ಜಗಳದ ಸುದ್ದಿಗಳಿಗೆ ರೋಹಿತ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. 2015ರ ದಿಲ್ವಾಲೆ ಚಿತ್ರದ ಬಾಕ್ಸ್ ಆಫೀಸ್ ಸೋಲು ಇಬ್ಬರ ನಡುವಿನ ಕಿರಿಕ್‌ಗೆ ಕಾರಣವಲ್ಲ ಎಂದು ಹೇಳಿದ್ದಾರೆ. ಅವರ ನಡುವೆ ಗೌರವದ ಸಂಬಂಧವಿದೆ ಎಂದೂ ಹೇಳಿದ್ದಾರೆ. ದಿಲ್ವಾಲೆ ವಿದೇಶಗಳಲ್ಲಿ ಉತ್ತಮ ಪ್ರದರ್ಶನ ನೀಡಿತ್ತು ಎಂದೂ ತಿಳಿಸಿದ್ದಾರೆ.

ರೋಹಿತ್ ಶೆಟ್ಟಿ-ಶಾರುಖ್ ಮಧ್ಯೆ ಯಾವುದೂ ಸರಿ ಇಲ್ಲ? ನಿರ್ದೇಶಕನ ಸ್ಪಷ್ಟನೆ
ರೋಹಿತ್-ಶಾರುಖ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Apr 23, 2025 | 8:01 AM

Share

‘ಬಾಲಿವುಡ್​ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty)  ಹಾಗೂ ಶಾರುಖ್ ಖಾನ್ ಮಧ್ಯೆ ಯಾವುದೂ ಸರಿ ಇಲ್ಲ’- ಹೀಗೊಂದು ಸುದ್ದಿ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಇದಕ್ಕೆ ರೋಹಿತ್ ಶೆಟ್ಟಿ ಅವರು ಈಗ ಸ್ಪಷ್ಟನೆ ನೀಡಿದ್ದಾರೆ. 2015ರಲ್ಲಿ ರಿಲೀಸ್ ಆದ ‘ದಿಲ್​ವಾಲೆ’ ಸಿನಿಮಾದ ಬಾಕ್ಸ್ ಆಫೀಸ್​ ಹೀನಾಯ ಸೋಲು ಇವರ ಮಧ್ಯೆ ಕಿರಿಕ್ ಆಗಲು ಪ್ರಮುಖ ಕಾರಣ ಎಂದು ಹೇಳಲಾಗಿತ್ತು. ಆದರೆ ಆ ರೀತಿ ಇಲ್ಲ ಎಂದಿದ್ದಾರೆ ಅವರು.

2015ರಲ್ಲಿ ‘ದಿಲ್​ವಾಲೆ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರವನ್ನು ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದರು. ರೋಹಿತ್ ಶೆಟ್ಟಿ ಚಿತ್ರಗಳಲ್ಲಿ ಮಲ್ಟಿ ಸ್ಟಾರರ್​ಗಳು ಸಾಮಾನ್ಯವಾಗಿದ್ದವು. ಅದೇ ರೀತಿ ಈ ಚಿತ್ರದಲ್ಲಿ ಶಾರುಖ್ ಖಾನ್, ಕಾಜೋಲ್, ವರುಣ್ ಧವನ್ ಮೊದಲಾದವರು ನಟಿಸಿದ್ದರು. ಆದರೆ, ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿತು. ಇದು ಇಬ್ಬರ ಮಧ್ಯೆ ಕಿರಿಕ್ ಆಗಲು ಕಾರಣ ಆಯಿತು ಎನ್ನುವ ಮಾತಿದೆ.

ಆದರೆ, ಇದನ್ನು ರೋಹಿತ್ ಶೆಟ್ಟಿ ಅವರು ನೇರವಾಗಿ ಅಲ್ಲಗಳೆಯುತ್ತಾರೆ. ‘ಆ ರೀತಿ ಏನೂ ಇಲ್ಲ’ ಎಂದಿದ್ದಾರೆ ರೋಹಿತ್ ಶೆಟ್ಟಿ. ‘ನಮ್ಮಿಬ್ಬರ ಮಧ್ಯೆ ಒಂದು ಗೌರವ ಇದೆ. ದಿಲ್​ವಾಲೇ ಸಿನಿಮಾ ಬಳಿಕ ನಾನು ನನ್ನದೇ ಪ್ರೊಡಕ್ಷನ್ ಹೌಸ್ ಆರಂಭಿಸಿದೆ. ಈ ಮೂಲಕ ಬೇರೆ ಸಿನಿಮಾಗಳ ನಿರ್ಮಾಣ ಮಾಡಿದೆ’ ಎಂದಿದ್ದಾರೆ ಅವರು. ‘ದಿಲ್​ವಾಲೆ’ ಸಿನಿಮಾ ವಿದೇಶಗಳಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ ಎಂದು ಅವರು ಹೇಳಿದ್ದಾರೆ. ಚಿತ್ರದ ನಿರ್ಮಾಪಕ ಶಾರುಖ್ ಖಾನ್​ಗೆ ಯಾವುದೇ ನಷ್ಟ ಆಗಿಲ್ಲ ಎನ್ನಬಹುದು.

ಇದನ್ನೂ ಓದಿ
Image
ಪಾಕ್ ಟಿಕ್​ ಟಾಕರ್ ಖಾಸಗಿ ವಿಡಿಯೋ ಲೀಕ್; ಹರಿದು ಹಂಚೋಯ್ತು 
Image
ಶಿವಮೊಗ್ಗದ ಮಂಜುನಾಥ್ ಪತ್ನಿ ಮಾತು ಕೇಳಿ ರವೀನಾ ಟಂಡನ್ ರಕ್ತ ಕೊತ ಕೊತ
Image
ಮಹೇಶ್ ಬಾಬುಗೆ ಸಂಕಷ್ಟ; ಖ್ಯಾತ ನಟನಿಗೆ ಬಂತು ಇಡಿ ನೋಟಿಸ್
Image
ಶ್ರೀದೇವಿನ ಕನ್ನಡಕ್ಕೆ ತರಲು ಹೋಗಿದ್ದ ರವಿಚಂದ್ರನ್; ಆಮೇಲೆ ಆಗಿದ್ದೇನು?

ಇದನ್ನೂ ಓದಿ: ಬ್ಲಾಕ್​ಬಸ್ಟರ್ ಲವ್​ಸ್ಟೋರಿಯಲ್ಲಿ ಸಾರಾ-ರಣವೀರ್: ರೋಹಿತ್ ಶೆಟ್ಟಿ ನಿರ್ದೇಶನ

ರೋಹಿತ್ ಶೆಟ್ಟಿ ಅವರು ಮಲ್ಟಿ ಸ್ಟಾರರ್​ ಸಿನಿಮಾ ಮಾಡುತ್ತಾರೆ. ಅದರಲ್ಲೂ ಪೊಲೀಸ್ ಪಾತ್ರಗಳನ್ನು ಆಧರಿಸಿ ಅವರು ಸಿನಿಮಾ ಮಾಡುತ್ತಾರೆ. ಈ ರೀತಿಯ ಪಾತ್ರಗಳಿಗೆ ಶಾರುಖ್ ಖಾನ್ ಅವರನ್ನು ಕೂಡ ಸೇರ್ಪಡೆ ಮಾಡಿಕೊಳ್ಳಬೇಕು ಎಂಬುದು ಅನೇಕರ ಕೋರಿಕೆ. ಈಗಾಗಲೇ ಅವರು ಕಾಪ್ ಯೂನಿವರ್ಸ್ ಮಾಡಿದ್ದಾರೆ. ಇದರಲ್ಲಿ ಶಾರುಖ್ ಖಾನ್ ಅವರಿಗೂ ಅವಕಾಶ ನೀಡಿ ಎಂದು ಅನೇಕರು ಕೋರಿದ್ದಾರೆ. ಈ ಯೂನಿವರ್ಸ್​ನಲ್ಲಿ ಅಜಯ್ ದೇವಗನ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್, ದೀಪಿಕಾ ಪಡುಕೋಣೆ ಮೊದಲಾದವರು ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?