AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಆಗ್ರಾದಲ್ಲಿ ಶೂಟರ್ ಬಂಧನ

ಸುಲಿಗೆ ಮಾಡುವ ಉದ್ದೇಶದಿಂದ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ಆ ಘಟನೆಗೆ ಸಂಬಂಧಿಸಿದ ಪ್ರಮುಖ ಆರೋಪಿ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈವರೆಗೂ 9 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಆಗ್ರಾದಲ್ಲಿ ಶೂಟರ್ ಬಂಧನ
Rohit ShettyImage Credit source: PTI
ಮದನ್​ ಕುಮಾರ್​
|

Updated on: Apr 17, 2026 | 3:05 PM

Share

ಬಾಲಿವುಡ್‌ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರ ಮುಂಬೈ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದ ಪ್ರಮುಖ ಆರೋಪಿಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಮತ್ತು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಫೆಬ್ರವರಿ 1ರಂದು ಮುಂಬೈನ ಜುಹು ಉಪನಗರದಲ್ಲಿರುವ ರೋಹಿತ್ ಶೆಟ್ಟಿ ಅವರ ‘ಶೆಟ್ಟಿ ಟವರ್’ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ (Firing) ನಡೆಸಿದ್ದರು. ಈ ದಾಳಿಯಲ್ಲಿ ಅವರ ಮನೆಯ ಬಾಲ್ಕನಿಯ ಗಾಜಿಗೆ ಹಾನಿಯಾಗಿತ್ತು.

ಚಿತ್ರರಂಗದಲ್ಲಿ ಭೀತಿ ಹುಟ್ಟಿಸಲು ಮತ್ತು ಹಣ ಸುಲಿಗೆ ಮಾಡುವ ಉದ್ದೇಶದಿಂದ ಕುಖ್ಯಾತ ಶುಭಂ ಲೋಂಕರ್ ಗ್ಯಾಂಗ್ ಈ ಕೃತ್ಯ ಎಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಆಗ್ರಾ ನಿವಾಸಿ ಪ್ರದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ರಾದ ಅಶೋಕ್ ನಗರದಲ್ಲಿ ಗುರುವಾರ ಸಂಜೆ 3.56ಕ್ಕೆ ಈತನನ್ನು ಸೆರೆಹಿಡಿಯಲಾಗಿದೆ.

ಆಗ್ರಾದ ಎಸ್‌ಟಿಎಫ್ ಫೀಲ್ಡ್ ಯುನಿಟ್‌ನ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಕೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪ್ರಾಥಮಿಕ ವಿಚಾರಣೆಯ ವೇಳೆ, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಮೂಲಕ ಲೋಂಕರ್ ಗ್ಯಾಂಗ್‌ನ ಸಂಪರ್ಕಕ್ಕೆ ಬಂದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಭೂಗತ ಲೋಕದಲ್ಲಿ ತನ್ನ ಪ್ರಾಬಲ್ಯ ಸ್ಥಾಪಿಸಲು ಸನ್ನಿ, ದೀಪು ಮತ್ತು ಸೋನು ಎಂಬ ಸಹಚರರೊಂದಿಗೆ ಸೇರಿ ಈ ಕೃತ್ಯ ಎಸಗಿರುವುದಾಗಿ ಆತ ತಿಳಿಸಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರದೀಪ್ ಶರ್ಮಾ ಅಲಿಯಾಸ್ ಗೋಲು, ದೀಪಕ್ ಮತ್ತು ವಿಷ್ಣು ಕುಶ್ವಾಹ ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS), ಶಸ್ತ್ರಾಸ್ತ್ರ ಕಾಯ್ದೆ ಮತ್ತು ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ನಿರ್ದೇಶಕ ರೋಹಿತ್ ಶೆಟ್ಟಿ ಖಾಸಗಿ ಕಾರಿನ ಮೇಲೆ ಪೊಲೀಸ್ ಸ್ಟಿಕ್ಕರ್: ವಿವಾದಕ್ಕೆ ಸ್ಪಷ್ಟನೆ

ಗುಂಡಿನ ದಾಳಿ ನಡೆದ ಬಳಿಕ ನಿರ್ದೇಶಕ ರೋಹಿತ್ ಶೆಟ್ಟಿ ಅವರಿಗೆ ಮುಂಬೈ ಪೊಲೀಸರು ಹೆಚ್ಚಿನ ಭದ್ರತೆ ನೀಡಿದರು. ಆ ಸಂದರ್ಭದಲ್ಲಿ ರೋಹಿತ್ ಶೆಟ್ಟಿ ಅವರ ಖಾಸಗಿ ಕಾರುಗಳ ಮೇಲೆ ಪೊಲೀಸ್ ಸ್ಟಿಕ್ಕರ್ ಅಂಟಿಸಲಾಗಿತ್ತು. ಅದರಿಂದ ವಿವಾದ ಸೃಷ್ಟಿ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ