AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀರೋಗಳ ಸಂಭಾವನೆ ಮಾತ್ರ ಹೆಚ್ಚಿಲ್ಲ’; ನಿರ್ಮಾಪಕರ ಹೇಳಿಕೆಗೆ ರೋಹಿತ್ ಶೆಟ್ಟಿ ಖಡಕ್ ಉತ್ತರ

ಕರಣ್ ಜೋಹರ್ ಅವರು ಬಾಲಿವುಡ್​ನ ಹಲವು ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ನಿರ್ಮಾಪಕರಿಂದ ಆಗುತ್ತಿರುವ ಸಮಸ್ಯೆಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ನಟರು ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ರೋಹಿತ್ ಕೌಂಟರ್ ಕೊಟ್ಟಿದ್ದಾರೆ.

‘ಹೀರೋಗಳ ಸಂಭಾವನೆ ಮಾತ್ರ ಹೆಚ್ಚಿಲ್ಲ’; ನಿರ್ಮಾಪಕರ ಹೇಳಿಕೆಗೆ ರೋಹಿತ್ ಶೆಟ್ಟಿ ಖಡಕ್ ಉತ್ತರ
ಕರಣ್-ರೋಹಿತ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jul 25, 2024 | 8:44 AM

Share

ಬಾಲಿವುಡ್​ನಲ್ಲಿ ಸಿನಿಮಾ ನಿರ್ಮಾಣಕ್ಕೆ ದೊಡ್ಡ ಬಜೆಟ್​ಗಳು ಬೇಕಾಗುತ್ತಿವೆ. ಸಿನಿಮಾ ನಿರ್ಮಾಣ ಮಾಡೋದು ಬಲುಕಷ್ಟ ಎಂಬಂತಾಗಿದೆ. ಈ ಬಗ್ಗೆ ಅನೇಕರು ತಕರಾರು ತೆಗೆದಿದ್ದಾರೆ. ಹೀರೋಗಳು ದೊಡ್ಡ ಮೊತ್ತದ ಸಂಭಾವನೆ ಕೇಳೋದೆ ಇದಕ್ಕೆ ಕಾರಣ ಎಂದು ಅನೇಕರು ಕಿಡಿಕಾರಿದ್ದಾರೆ. ಈ ಮಧ್ಯೆ ರೋಹಿತ್ ಶೆಟ್ಟಿ ಅವರು ಹೀರೋಗಳ ಪರ ವಹಿಸಿಕೊಂಡು ಬಂದಿದ್ದಾರೆ. ಕೇವಲ ಹೀರೋಗಳ ಸಂಭಾವನೆ ಮಾತ್ರವಲ್ಲ ಸಿನಿಮಾ ನಿರ್ಮಾಣದ ಸಂಪೂರ್ಣ ವೆಚ್ಛವೇ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ನಿರ್ಮಾಪಕರ ಬಾಯಿ ಮುಚ್ಚಿಸಿದ್ದಾರೆ.

ರೋಹಿತ್ ಶೆಟ್ಟಿ ಅವರು ಬಾಲಿವುಡ್​ನಲ್ಲಿ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನೀಡಿದ್ದಾರೆ. ಅನೇಕವು ಹಿಟ್ ಆಗಿವೆ. ‘ಗೋಲ್​ಮಾಲ್​ ಸೀರಿಸ್’, ‘ಸಿಂಗಂ’, ‘ಸೂರ್ಯವಂಶಿ’ ಹಾಗೂ ‘ಸಿಂಬಾ’ ಸೀರಿಸ್​ಗಳು ಗಮನ ಸೆಳೆದಿವೆ. ಎಲ್ಲಾ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಮೆಚ್ಚುಗೆ ಪಡೆದಿವೆ. ಆದರೆ, ಇತ್ತೀಚೆಗೆ ಯಾವ ಸಿನಿಮಾಗಳೂ ಅಷ್ಟು ಕಲೆಕ್ಷನ್ ಮಾಡುತ್ತಿಲ್ಲ. ಅನೇಕ ನಿರ್ಮಾಪಕರು ಬಾಲಿವುಡ್ ಹೀರೋಗಳನ್ನು ತೆಗಳುತ್ತಿದ್ದಾರೆ. ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಾರೆ ಎಂದಿದ್ದಾರೆ. ನಿರ್ಮಾಪಕ ಕರಣ್ ಜೋಹರ್ ಕೂಡ ಇದೇ ಮಾತನ್ನು ಹೇಳಿದ್ದರು.

ಸೆಲೆಬ್ರಿಟಿಗಳು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಇದು ಚಾಲೆಂಜ್ ಆಗಿದೆಯೇ ಎಂದು ರೋಹಿತ್ ಶೆಟ್ಟಿಗೆ ಕೇಳಲಾಗಿದೆ. ಅವರು ಇಲ್ಲ ಎನ್ನುವ ಉತ್ತರ ಕೊಟ್ಟಿದ್ದಾರೆ. ‘ಸಿನಿಮಾ ಮಾಡೋದು ದುಬಾರಿ ಆಗುತ್ತಿದೆ. ಆದರೆ, ಅದು ಕೇವಲ ಹೀರೋಗಳಿಂದ ಮಾತ್ರವಲ್ಲ. ಪ್ರಯಾಣ ಮಾಡೋದು, ಟಿಕೆಟ್ ದರ, ಹೋಟೆಲ್ ಹೀಗೆ ಎಲ್ಲವೂ ದುಬಾರಿ ಆಗಿವೆ. ಹೀಗಾಗಿ ನಟರನ್ನು ಮಾತ್ರ ದೂರೋದು ಸರಿ ಅಲ್ಲ. ಕಲಾವಿದರಿಗೆ ಹೆಚ್ಚು ಹಣ ನೀಡಲಾಗಿದೆ ಎಂಬುದು ಸರಿ ಅಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಸ್ಟಾರ್ ನಟರು ಸೂರ್ಯ, ಚಂದ್ರರನ್ನೇ ಕೇಳುತ್ತಾರೆ’; ಕರಣ್ ಜೋಹರ್ ಅಸಮಾಧಾನ

ಇತ್ತೀಚೆಗೆ ಮಾತನಾಡಿದ್ದ ಕರಣ್ ಜೋಹರ್ ಅವರು ನಟರ ವಿರುದ್ಧ ಕಿರಿಕಾಡಿದ್ದರು. ‘ಸ್ಟಾರ್ ಹೀರೋಗಳು ಸೂರ್ಯ-ಚಂದ್ರರನ್ನೇ ಕೇಳುತ್ತಾರೆ’ ಎಂದು ಹೇಳಿದ್ದರು. ಇದು ಸಾಕಷ್ಟು ಚರ್ಚೆ ಆಗಿತ್ತು. ಕರಣ್ ಜೋಹರ್ ಅವರಂಥ ನಿರ್ಮಾಪಕರಿಗೆ ಹೀರೋಗಳು ಹೊರೆ ಆಗುತ್ತಿದ್ದಾರೆ ಎಂದಾಗ ಉಳಿದವರ ಪರಿಸ್ಥಿತಿ ಏನು ಎನ್ನುವ ಪ್ರಶ್ನೆ ಮೂಡಿತ್ತು. ಇನ್ನು ಅಕ್ಷಯ್ ಕುಮಾರ್ ಅವರ ಸಿನಿಮಾಗಳನ್ನು ನಿರ್ಮಿಸಿರೋ ‘ಪೂಜಾ ಎಂಟರ್​ಟೇನ್​ಮೆಂಟ್’ ಸಂಕಷ್ಟಕ್ಕೆ ಸಿಲುಕಿದೆ.  ಸಂಬಳ ನೀಡಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ