AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲಿ ಬಸ್ಸು, ಕಾರು ಉಡೀಸ್ ಮಾಡಿದ ರೋಹಿತ್ ಶೆಟ್ಟಿ; ಇಲ್ಲಿದೆ ಝಲಕ್

ರೋಹಿತ್ ಶೆಟ್ಟಿ ಅವರ ‘ಸಿಂಗಂ’ ಹಾಗೂ ‘ಸಿಂಗಂ’ ರಿಟರ್ನ್ ಸಿನಿಮಾಗಳು ಗಮನ ಸೆಳೆದಿವೆ. ಈಗ ಈ ಸರಣಿಯಲ್ಲಿ ಮೂರನೇ ಸಿನಿಮಾ ರಿಲೀಸ್ ಆಗುತ್ತಿದೆ. ರೋಹಿತ್ ಶೆಟ್ಟಿ ಅವರು ಕಾಪ್ ಯೂನಿವರ್ಸ್ ಮಾಡಿದ್ದು, ಇದರಡಿಯಲ್ಲಿ ‘ಸಿಂಗಂ’, ‘ಸಿಂಗಂ ರಿಟರ್ನ್ಸ್’, ‘ಸಿಂಬ’, ‘ಸೂರ್ಯವಂಶಿ’ ಚಿತ್ರಗಳಿವೆ.

ಸೆಟ್​ನಲ್ಲಿ ಬಸ್ಸು, ಕಾರು ಉಡೀಸ್ ಮಾಡಿದ ರೋಹಿತ್ ಶೆಟ್ಟಿ; ಇಲ್ಲಿದೆ ಝಲಕ್
ರೋಹಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Oct 27, 2023 | 8:17 AM

Share

ರೋಹಿತ್ ಶೆಟ್ಟಿ (Rohit Shetty) ನಿರ್ದೇಶನದ ಸಿನಿಮಾಗಳಲ್ಲಿ ಆ್ಯಕ್ಷನ್​ಗೆ ಬರ ಇರುವುದಿಲ್ಲ. ಅವರ ಸಿನಿಮಾಗಳಲ್ಲಿ ಮಾಸ್ ಮಸಾಲ ಅಂಶಗಳು ಹೇರಳವಾಗಿ ಇರುತ್ತವೆ. ಅದರಲ್ಲೂ, ಕಾರು, ಬಸ್ಸುಗಳನ್ನು ಉಡೀಸ್ ಮಾಡೋದು ಎಂದರೆ ಅವರಿಗೆ ಸಖತ್ ಇಷ್ಟ. ಹೀಗಾಗಿ, ಅವರ ನಿರ್ದೇಶನದ ಎಲ್ಲಾ ಚಿತ್ರಗಳಲ್ಲೂ ಈ ರೀತಿಯ ಒಂದು ದೃಶ್ಯವಾದರೂ ಇದ್ದೇ ಇರುತ್ತದೆ. ಈಗ ರೋಹಿತ್ ಶೆಟ್ಟಿ ಅವರು ‘ಸಿಂಗಂ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಆ್ಯಕ್ಷನ್ ದೃಶ್ಯ ಶೂಟ್ ಮಾಡೋ ಸಂದರ್ಭ ಹೇಗಿತ್ತು ಎಂಬುದನ್ನು ಅವರು ಫೋಟೋ ಮೂಲಕ ತೋರಿಸಿದ್ದಾರೆ.

ರೋಹಿತ್ ಶೆಟ್ಟಿ ಅವರ ‘ಸಿಂಗಂ’ ಹಾಗೂ ‘ಸಿಂಗಂ’ ರಿಟರ್ನ್ ಸಿನಿಮಾಗಳು ಗಮನ ಸೆಳೆದಿವೆ. ಈಗ ಈ ಸರಣಿಯಲ್ಲಿ ಮೂರನೇ ಸಿನಿಮಾ ರಿಲೀಸ್ ಆಗುತ್ತಿದೆ. ರೋಹಿತ್ ಶೆಟ್ಟಿ ಅವರು ಕಾಪ್ ಯೂನಿವರ್ಸ್ ಮಾಡಿದ್ದು, ಇದರಡಿಯಲ್ಲಿ ‘ಸಿಂಗಂ’, ‘ಸಿಂಗಂ ರಿಟರ್ನ್ಸ್’, ‘ಸಿಂಬ’, ‘ಸೂರ್ಯವಂಶಿ’ ಚಿತ್ರಗಳಿವೆ. ಈಗ ಇದಕ್ಕೆ ‘ಸಿಂಗಂ 3’ ಕೂಡ ಸೇರ್ಪಡೆ ಆಗುತ್ತಿದೆ.

‘ಸಿಂಗಂ 3’ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಅಜಯ್ ದೇವಗನ್ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ದೀಪಿಕಾ ಪಡುಕೋಣೆ, ಟೈಗರ್ ಶ್ರಾಫ್ ಮೊದಲಾದವರು ನಟಿಸಿದ್ದಾರೆ. ಇನ್ನೂ ಕೆಲ ಪ್ರಮುಖರು ಅತಿಥಿ ಪಾತ್ರ ಮಾಡಲಿದ್ದಾರಂತೆ. ಈ ಚಿತ್ರದ ಸೆಟ್​ನಲ್ಲಿ ಬಾಂಬ್ ಇಟ್ಟು ಬಸ್ಸು ಹಾಗೂ ಕಾರುಗಳನ್ನು ಸಿಡಿಸುತ್ತಿರುವ ದೃಶ್ಯ ಇದೆ.  ‘ಕೆಲಸ ಪ್ರಗತಿಯಲ್ಲಿದೆ’ ಎಂದು ರೋಹಿತ್ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rohit Shetty: ಸೆಟ್​​ನಲ್ಲಿ ನಡೆಯಿತು ಅವಘಡ; ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿಗೆ ಗಾಯ

2021ರಲ್ಲಿ ರಿಲೀಸ್ ಆದ ‘ಸೂರ್ಯವಂಶಿ’ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರ ನೂರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಹೀಗಾಗಿ, ‘ಸಿಂಗಂ 3’ ಕೂಡ ಭರ್ಜರಿ ನಿರೀಕ್ಷೆ ಮೂಡಿಸಿದೆ. ಇನ್ನು, ‘ಇಂಡಿಯನ್ ಪೊಲೀಸ್ ಫೋರ್ಸ್’ ಹೆಸರಿನ ವೆಬ್ ಸೀರಿಸ್ ಕೂಡ ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್. ಇದರ ಕೆಲಸ ಪ್ರಗತಿಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Fri, 27 October 23

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ