AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲಿ ಬಸ್ಸು, ಕಾರು ಉಡೀಸ್ ಮಾಡಿದ ರೋಹಿತ್ ಶೆಟ್ಟಿ; ಇಲ್ಲಿದೆ ಝಲಕ್

ರೋಹಿತ್ ಶೆಟ್ಟಿ ಅವರ ‘ಸಿಂಗಂ’ ಹಾಗೂ ‘ಸಿಂಗಂ’ ರಿಟರ್ನ್ ಸಿನಿಮಾಗಳು ಗಮನ ಸೆಳೆದಿವೆ. ಈಗ ಈ ಸರಣಿಯಲ್ಲಿ ಮೂರನೇ ಸಿನಿಮಾ ರಿಲೀಸ್ ಆಗುತ್ತಿದೆ. ರೋಹಿತ್ ಶೆಟ್ಟಿ ಅವರು ಕಾಪ್ ಯೂನಿವರ್ಸ್ ಮಾಡಿದ್ದು, ಇದರಡಿಯಲ್ಲಿ ‘ಸಿಂಗಂ’, ‘ಸಿಂಗಂ ರಿಟರ್ನ್ಸ್’, ‘ಸಿಂಬ’, ‘ಸೂರ್ಯವಂಶಿ’ ಚಿತ್ರಗಳಿವೆ.

ಸೆಟ್​ನಲ್ಲಿ ಬಸ್ಸು, ಕಾರು ಉಡೀಸ್ ಮಾಡಿದ ರೋಹಿತ್ ಶೆಟ್ಟಿ; ಇಲ್ಲಿದೆ ಝಲಕ್
ರೋಹಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Oct 27, 2023 | 8:17 AM

Share

ರೋಹಿತ್ ಶೆಟ್ಟಿ (Rohit Shetty) ನಿರ್ದೇಶನದ ಸಿನಿಮಾಗಳಲ್ಲಿ ಆ್ಯಕ್ಷನ್​ಗೆ ಬರ ಇರುವುದಿಲ್ಲ. ಅವರ ಸಿನಿಮಾಗಳಲ್ಲಿ ಮಾಸ್ ಮಸಾಲ ಅಂಶಗಳು ಹೇರಳವಾಗಿ ಇರುತ್ತವೆ. ಅದರಲ್ಲೂ, ಕಾರು, ಬಸ್ಸುಗಳನ್ನು ಉಡೀಸ್ ಮಾಡೋದು ಎಂದರೆ ಅವರಿಗೆ ಸಖತ್ ಇಷ್ಟ. ಹೀಗಾಗಿ, ಅವರ ನಿರ್ದೇಶನದ ಎಲ್ಲಾ ಚಿತ್ರಗಳಲ್ಲೂ ಈ ರೀತಿಯ ಒಂದು ದೃಶ್ಯವಾದರೂ ಇದ್ದೇ ಇರುತ್ತದೆ. ಈಗ ರೋಹಿತ್ ಶೆಟ್ಟಿ ಅವರು ‘ಸಿಂಗಂ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಆ್ಯಕ್ಷನ್ ದೃಶ್ಯ ಶೂಟ್ ಮಾಡೋ ಸಂದರ್ಭ ಹೇಗಿತ್ತು ಎಂಬುದನ್ನು ಅವರು ಫೋಟೋ ಮೂಲಕ ತೋರಿಸಿದ್ದಾರೆ.

ರೋಹಿತ್ ಶೆಟ್ಟಿ ಅವರ ‘ಸಿಂಗಂ’ ಹಾಗೂ ‘ಸಿಂಗಂ’ ರಿಟರ್ನ್ ಸಿನಿಮಾಗಳು ಗಮನ ಸೆಳೆದಿವೆ. ಈಗ ಈ ಸರಣಿಯಲ್ಲಿ ಮೂರನೇ ಸಿನಿಮಾ ರಿಲೀಸ್ ಆಗುತ್ತಿದೆ. ರೋಹಿತ್ ಶೆಟ್ಟಿ ಅವರು ಕಾಪ್ ಯೂನಿವರ್ಸ್ ಮಾಡಿದ್ದು, ಇದರಡಿಯಲ್ಲಿ ‘ಸಿಂಗಂ’, ‘ಸಿಂಗಂ ರಿಟರ್ನ್ಸ್’, ‘ಸಿಂಬ’, ‘ಸೂರ್ಯವಂಶಿ’ ಚಿತ್ರಗಳಿವೆ. ಈಗ ಇದಕ್ಕೆ ‘ಸಿಂಗಂ 3’ ಕೂಡ ಸೇರ್ಪಡೆ ಆಗುತ್ತಿದೆ.

‘ಸಿಂಗಂ 3’ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಅಜಯ್ ದೇವಗನ್ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ದೀಪಿಕಾ ಪಡುಕೋಣೆ, ಟೈಗರ್ ಶ್ರಾಫ್ ಮೊದಲಾದವರು ನಟಿಸಿದ್ದಾರೆ. ಇನ್ನೂ ಕೆಲ ಪ್ರಮುಖರು ಅತಿಥಿ ಪಾತ್ರ ಮಾಡಲಿದ್ದಾರಂತೆ. ಈ ಚಿತ್ರದ ಸೆಟ್​ನಲ್ಲಿ ಬಾಂಬ್ ಇಟ್ಟು ಬಸ್ಸು ಹಾಗೂ ಕಾರುಗಳನ್ನು ಸಿಡಿಸುತ್ತಿರುವ ದೃಶ್ಯ ಇದೆ.  ‘ಕೆಲಸ ಪ್ರಗತಿಯಲ್ಲಿದೆ’ ಎಂದು ರೋಹಿತ್ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rohit Shetty: ಸೆಟ್​​ನಲ್ಲಿ ನಡೆಯಿತು ಅವಘಡ; ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿಗೆ ಗಾಯ

2021ರಲ್ಲಿ ರಿಲೀಸ್ ಆದ ‘ಸೂರ್ಯವಂಶಿ’ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರ ನೂರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಹೀಗಾಗಿ, ‘ಸಿಂಗಂ 3’ ಕೂಡ ಭರ್ಜರಿ ನಿರೀಕ್ಷೆ ಮೂಡಿಸಿದೆ. ಇನ್ನು, ‘ಇಂಡಿಯನ್ ಪೊಲೀಸ್ ಫೋರ್ಸ್’ ಹೆಸರಿನ ವೆಬ್ ಸೀರಿಸ್ ಕೂಡ ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್. ಇದರ ಕೆಲಸ ಪ್ರಗತಿಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Fri, 27 October 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ