AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರ್ಟ್​ ಬಟನ್​ ಹಾಕಿಕೊಳ್ಳಲು ಸಲ್ಲುಗೆ ಬೇಕಾಯ್ತು ಆಲಿಯಾ ಭಟ್​ ಸಹಾಯ; ವಿಡಿಯೋ ವೈರಲ್​

Salman Khan: ಸಲ್ಮಾನ್​ ಖಾನ್​ ಧರಿಸಿದ್ದ ಶರ್ಟ್​ ಬಟನ್​ ಓಪನ್​ ಆಗಿತ್ತು. ‘ನನ್ನ ಎದೆ ಭಾಗ ಕಾಣುತ್ತಿದೆ’ ಎಂದು ಅವರು ಹೇಳುತ್ತಿದ್ದಂತೆಯೇ ಆಲಿಯಾ ಭಟ್​ ಅವರು ಬಟನ್​ ಹಾಕಲು ಸಹಾಯ ಮಾಡಿದರು.

ಶರ್ಟ್​ ಬಟನ್​ ಹಾಕಿಕೊಳ್ಳಲು ಸಲ್ಲುಗೆ ಬೇಕಾಯ್ತು ಆಲಿಯಾ ಭಟ್​ ಸಹಾಯ; ವಿಡಿಯೋ ವೈರಲ್​
ಸಲ್ಮಾನ್​ ಖಾನ್​, ಆಲಿಯಾ ಭಟ್​
TV9 Web
| Edited By: |

Updated on: Dec 26, 2021 | 1:45 PM

Share

ನಟಿ ಆಲಿಯಾ ಭಟ್​ (Alia Bhatt) ಅವರು ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾ (RRR Movie) ಮೂಲಕ ಅವರು ದಕ್ಷಿಣ ಭಾರತಕ್ಕೂ ಕಾಲಿಡುತ್ತಿದ್ದಾರೆ. ಜ.7ರಂದು ವಿಶ್ವಾದ್ಯಂತ ಈ ಚಿತ್ರ ರಿಲೀಸ್​ ಆಗಲಿದೆ. ರಾಜಮೌಳಿ (SS Rajamouli) ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಇಡೀ ತಂಡ ಈಗ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ಸಿನಿಮಾದ ಹೀರೋಗಳಾದ ರಾಮ್​ ಚರಣ್​ (Ram Charan) ಮತ್ತು ಜ್ಯೂ. ಎನ್​ಟಿಆರ್​ ((Jr NTR)) ಜೊತೆ ಆಲಿಯಾ ಭಟ್​ ಹಲವು ವೇದಿಕೆಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರತಂಡ ಸಲ್ಮಾನ್​ ಖಾನ್​ (Salman Khan) ನಡೆಸಿಕೊಡುವ ಬಿಗ್​ ಬಾಸ್​ (Bigg Boss) ಶೋಗೆ ಭೇಟಿ ನೀಡಿತ್ತು. ಈ ವೇಳೆ ಕೆಲವು ಫನ್ನಿ ಘಟನೆಗಳು ನಡೆದವು. ತಮ್ಮ ಶರ್ಟ್​ ಬಟನ್​ ಹಾಕಿಕೊಳ್ಳಲು ಸಲ್ಲುಗೆ ಆಲಿಯಾ ಭಟ್​ ಸಹಾಯ ಮಾಡಬೇಕಾಯಿತು. ಆ ವಿಡಿಯೋ ಈಗ ವೈರಲ್​ ಆಗಿದೆ.

ರಾಜಮೌಳಿ, ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​ ಅವರನ್ನು ಸಲ್ಮಾನ್​ ಖಾನ್​ ಅವರು ವೇದಿಕೆಗೆ ಸ್ವಾಗತಿಸಿದರು. ಅನೇಕ ವಿಚಾರಗಳ ಬಗ್ಗೆ ಈ ಸೆಲೆಬ್ರಿಟಿಗಳು ಮಾತನಾಡಿದರು. ‘ಆರ್​ಆರ್​ಆರ್​’ ಚಿತ್ರದ ವಿಶೇಷತೆಗಳ ಬಗ್ಗೆ ವಿಷಯ ವಿನಿಮಯ ಮಾಡಿಕೊಂಡರು. ಈ ವೇಳೆ ಸಲ್ಮಾನ್​ ಖಾನ್​ ಧರಿಸಿದ್ದ ಶರ್ಟ್​ ಬಟನ್​ ಓಪನ್​ ಆಗಿತ್ತು. ‘ನನ್ನ ಎದೆ ಭಾಗ ಕಾಣುತ್ತಿದೆ’ ಎಂದು ಅವರು ಹೇಳುತ್ತಿದ್ದಂತೆಯೇ ಆಲಿಯಾ ಭಟ್​ ಅವರು ಬಟನ್​ ಹಾಕಲು ಸಹಾಯ ಮಾಡಿದರು. ಅದಕ್ಕೆ ಸಲ್ಲು ಕಡೆಯಿಂದ ಧನ್ಯವಾದ ಸಂದಾಯವಾಯಿತು.

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಸಖತ್​ ಫೇಮಸ್​ ಆಗಿದೆ. ಆ ಹಾಡಿಗೆ ಡ್ಯಾನ್ಸ್​ ಮಾಡಲು ಹೋಗಿ ಸಲ್ಲು ಸುಸ್ತಾದರು. ಈ ಹಾಡಿನಲ್ಲಿ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅವರು ಸಖತ್ತಾಗಿ ಡ್ಯಾನ್ಸ್​ ಮಾಡಿದ್ದಾರೆ. ಅದೇ ರೀತಿ ಕುಣಿಯುವಂತೆ ಸಲ್ಲುಗೆ ಹೇಳಲಾಯಿತು. ಆದರೆ ಆ ಸ್ಟೆಪ್​ ಹಾಕಲು ಅವರು ತುಂಬ ಕಷ್ಟಪಟ್ಟರು. ‘ನಾನು ದೊಡ್ಡವನಾದ ಮೇಲೆ ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ರೀತಿ ಡ್ಯಾನ್ಸ್​ ಮಾಡುತ್ತೇನೆ’ ಎಂದು ಅವರು ತಮಾಷೆ ಮಾಡಿದರು. ಇಂಥ ಅನೇಕ ಫನ್ನಿ ಕ್ಷಣಗಳಿಗೆ ಈ ಕಾರ್ಯಕ್ರಮ ಸಾಕ್ಷಿ ಆಗಿತ್ತು.

ಇದನ್ನೂ ಓದಿ:

ಹೀಗೂ ದುಡ್ಡು ಮಾಡಬಹುದು ಅಂತ ತೋರಿಸಿದ್ದೇ ಸಲ್ಮಾನ್​ ಖಾನ್​; ಅನಿಲ್​ ಕಪೂರ್​ ಹೇಳಿದ ಅಚ್ಚರಿ ವಿಷಯ

ಸಲ್ಮಾನ್​ ಖಾನ್​ ಯಾಕಿನ್ನೂ ಮದುವೆ ಆಗಿಲ್ಲ? ಅಸಲಿ ಕಾರಣ ತಿಳಿಸಿದ ಬಾಮೈದ ಆಯುಶ್​ ಶರ್ಮಾ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್