AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರ್ಟ್​ ಬಟನ್​ ಹಾಕಿಕೊಳ್ಳಲು ಸಲ್ಲುಗೆ ಬೇಕಾಯ್ತು ಆಲಿಯಾ ಭಟ್​ ಸಹಾಯ; ವಿಡಿಯೋ ವೈರಲ್​

Salman Khan: ಸಲ್ಮಾನ್​ ಖಾನ್​ ಧರಿಸಿದ್ದ ಶರ್ಟ್​ ಬಟನ್​ ಓಪನ್​ ಆಗಿತ್ತು. ‘ನನ್ನ ಎದೆ ಭಾಗ ಕಾಣುತ್ತಿದೆ’ ಎಂದು ಅವರು ಹೇಳುತ್ತಿದ್ದಂತೆಯೇ ಆಲಿಯಾ ಭಟ್​ ಅವರು ಬಟನ್​ ಹಾಕಲು ಸಹಾಯ ಮಾಡಿದರು.

ಶರ್ಟ್​ ಬಟನ್​ ಹಾಕಿಕೊಳ್ಳಲು ಸಲ್ಲುಗೆ ಬೇಕಾಯ್ತು ಆಲಿಯಾ ಭಟ್​ ಸಹಾಯ; ವಿಡಿಯೋ ವೈರಲ್​
ಸಲ್ಮಾನ್​ ಖಾನ್​, ಆಲಿಯಾ ಭಟ್​
TV9 Web
| Edited By: |

Updated on: Dec 26, 2021 | 1:45 PM

Share

ನಟಿ ಆಲಿಯಾ ಭಟ್​ (Alia Bhatt) ಅವರು ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾ (RRR Movie) ಮೂಲಕ ಅವರು ದಕ್ಷಿಣ ಭಾರತಕ್ಕೂ ಕಾಲಿಡುತ್ತಿದ್ದಾರೆ. ಜ.7ರಂದು ವಿಶ್ವಾದ್ಯಂತ ಈ ಚಿತ್ರ ರಿಲೀಸ್​ ಆಗಲಿದೆ. ರಾಜಮೌಳಿ (SS Rajamouli) ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಇಡೀ ತಂಡ ಈಗ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ಸಿನಿಮಾದ ಹೀರೋಗಳಾದ ರಾಮ್​ ಚರಣ್​ (Ram Charan) ಮತ್ತು ಜ್ಯೂ. ಎನ್​ಟಿಆರ್​ ((Jr NTR)) ಜೊತೆ ಆಲಿಯಾ ಭಟ್​ ಹಲವು ವೇದಿಕೆಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರತಂಡ ಸಲ್ಮಾನ್​ ಖಾನ್​ (Salman Khan) ನಡೆಸಿಕೊಡುವ ಬಿಗ್​ ಬಾಸ್​ (Bigg Boss) ಶೋಗೆ ಭೇಟಿ ನೀಡಿತ್ತು. ಈ ವೇಳೆ ಕೆಲವು ಫನ್ನಿ ಘಟನೆಗಳು ನಡೆದವು. ತಮ್ಮ ಶರ್ಟ್​ ಬಟನ್​ ಹಾಕಿಕೊಳ್ಳಲು ಸಲ್ಲುಗೆ ಆಲಿಯಾ ಭಟ್​ ಸಹಾಯ ಮಾಡಬೇಕಾಯಿತು. ಆ ವಿಡಿಯೋ ಈಗ ವೈರಲ್​ ಆಗಿದೆ.

ರಾಜಮೌಳಿ, ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​ ಅವರನ್ನು ಸಲ್ಮಾನ್​ ಖಾನ್​ ಅವರು ವೇದಿಕೆಗೆ ಸ್ವಾಗತಿಸಿದರು. ಅನೇಕ ವಿಚಾರಗಳ ಬಗ್ಗೆ ಈ ಸೆಲೆಬ್ರಿಟಿಗಳು ಮಾತನಾಡಿದರು. ‘ಆರ್​ಆರ್​ಆರ್​’ ಚಿತ್ರದ ವಿಶೇಷತೆಗಳ ಬಗ್ಗೆ ವಿಷಯ ವಿನಿಮಯ ಮಾಡಿಕೊಂಡರು. ಈ ವೇಳೆ ಸಲ್ಮಾನ್​ ಖಾನ್​ ಧರಿಸಿದ್ದ ಶರ್ಟ್​ ಬಟನ್​ ಓಪನ್​ ಆಗಿತ್ತು. ‘ನನ್ನ ಎದೆ ಭಾಗ ಕಾಣುತ್ತಿದೆ’ ಎಂದು ಅವರು ಹೇಳುತ್ತಿದ್ದಂತೆಯೇ ಆಲಿಯಾ ಭಟ್​ ಅವರು ಬಟನ್​ ಹಾಕಲು ಸಹಾಯ ಮಾಡಿದರು. ಅದಕ್ಕೆ ಸಲ್ಲು ಕಡೆಯಿಂದ ಧನ್ಯವಾದ ಸಂದಾಯವಾಯಿತು.

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಸಖತ್​ ಫೇಮಸ್​ ಆಗಿದೆ. ಆ ಹಾಡಿಗೆ ಡ್ಯಾನ್ಸ್​ ಮಾಡಲು ಹೋಗಿ ಸಲ್ಲು ಸುಸ್ತಾದರು. ಈ ಹಾಡಿನಲ್ಲಿ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅವರು ಸಖತ್ತಾಗಿ ಡ್ಯಾನ್ಸ್​ ಮಾಡಿದ್ದಾರೆ. ಅದೇ ರೀತಿ ಕುಣಿಯುವಂತೆ ಸಲ್ಲುಗೆ ಹೇಳಲಾಯಿತು. ಆದರೆ ಆ ಸ್ಟೆಪ್​ ಹಾಕಲು ಅವರು ತುಂಬ ಕಷ್ಟಪಟ್ಟರು. ‘ನಾನು ದೊಡ್ಡವನಾದ ಮೇಲೆ ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ರೀತಿ ಡ್ಯಾನ್ಸ್​ ಮಾಡುತ್ತೇನೆ’ ಎಂದು ಅವರು ತಮಾಷೆ ಮಾಡಿದರು. ಇಂಥ ಅನೇಕ ಫನ್ನಿ ಕ್ಷಣಗಳಿಗೆ ಈ ಕಾರ್ಯಕ್ರಮ ಸಾಕ್ಷಿ ಆಗಿತ್ತು.

ಇದನ್ನೂ ಓದಿ:

ಹೀಗೂ ದುಡ್ಡು ಮಾಡಬಹುದು ಅಂತ ತೋರಿಸಿದ್ದೇ ಸಲ್ಮಾನ್​ ಖಾನ್​; ಅನಿಲ್​ ಕಪೂರ್​ ಹೇಳಿದ ಅಚ್ಚರಿ ವಿಷಯ

ಸಲ್ಮಾನ್​ ಖಾನ್​ ಯಾಕಿನ್ನೂ ಮದುವೆ ಆಗಿಲ್ಲ? ಅಸಲಿ ಕಾರಣ ತಿಳಿಸಿದ ಬಾಮೈದ ಆಯುಶ್​ ಶರ್ಮಾ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ