AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಮುಖ್ಯಸ್ಥ ಮೋಹನ್​ ಭಾಗವತ್​ಗೆ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ತೋರಿಸಲಿರುವ ಅಕ್ಷಯ್​ ಕುಮಾರ್​

RSS Chief Mohan Bhagwat: ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾವನ್ನು ಮೋಹನ್​ ಭಾಗವತ್​ ನೋಡಲಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ಇಂದು (ಜೂನ್​ 3) ದೆಹಲಿಯಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗುತ್ತಿದೆ.

RSS ಮುಖ್ಯಸ್ಥ ಮೋಹನ್​ ಭಾಗವತ್​ಗೆ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ತೋರಿಸಲಿರುವ ಅಕ್ಷಯ್​ ಕುಮಾರ್​
ಮೋಹನ್ ಭಾಗವತ್, ಅಕ್ಷಯ್ ಕುಮಾರ್
TV9 Web
| Edited By: |

Updated on: Jun 03, 2022 | 1:22 PM

Share

ಸತತ ಸೋಲಿನಿಂದ ಕಂಗೆಟ್ಟಿದ್ದ ಬಾಲಿವುಡ್​ಗೆ ಹೊಸ ಚೈತನ್ಯ ನೀಡಲು ‘ಸಾಮ್ರಾಟ್​ ಪೃಥ್ವಿರಾಜ್​’ (Samrat Prithviraj) ಸಿನಿಮಾ ರಿಲೀಸ್​ ಆಗಿದೆ. ಅಕ್ಷಯ್​ ಕುಮಾರ್​ (Akshay Kumar) ಅಭಿನಯದ ಈ ಚಿತ್ರದ ಬಗ್ಗೆ ಅನೇಕ ಗಣ್ಯರು ಆಸಕ್ತಿ ತೋರಿಸುತ್ತಿದ್ದಾರೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸೇರಿದಂತೆ ಅನೇಕ ರಾಜಕಾರಣಿಗಳು ಈ ಚಿತ್ರವನ್ನು ವೀಕ್ಷಿಸಿ ಭೇಷ್​ ಎಂದಿದ್ದಾರೆ. ಈಗ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ (Mohan Bhagwat) ಅವರು ಕೂಡ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರವನ್ನು ವೀಕ್ಷಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಸಿನಿಮಾದಲ್ಲಿ ಐತಿಹಾಸಿಕ ಕಥಾಹಂದರ ಇದೆ. ಅಕ್ಷಯ್​ ಕುಮಾರ್​ ಅವರಿಗೆ ಜೋಡಿಯಾಗಿ ಮಾನುಷಿ ಚಿಲ್ಲರ್​ ನಟಿಸಿದ್ದಾರೆ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿದ್ದು, ಉತ್ತಮ ಓಪನಿಂಗ್​ ಪಡೆಯುವಲ್ಲಿ ಈ ಸಿನಿಮಾ ಯಶಸ್ವಿ ಆಗಿದೆ.

ದೇಶಭಕ್ತಿ ಕಥಾಹಂದರ ಸಿನಿಮಾಗಳಿಂದ ಅಕ್ಷಯ್​ ಕುಮಾರ್​ ಅವರು ಈ ಹಿಂದೆ ಕೂಡ ಗೆಲುವು ಕಂಡಿದ್ದರು. ಈಗ ಅವರಿಗೆ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರದ ಮೂಲಕ ಅಂಥದ್ದೇ ಯಶಸ್ಸು ಸಿಗುವ ಸಾಧ್ಯತೆ ದಟ್ಟವಾಗಿದೆ. ಐತಿಹಾಸಿಕ ಕಥಾಹಂದರ ಇರುವ ಈ ಚಿತ್ರವನ್ನು ಮೋಹನ್​ ಭಾಗವತ್​ ನೋಡಲಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ಇಂದು (ಜೂನ್​ 3) ದೆಹಲಿಯಲ್ಲಿ ಅವರಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಲಾಗುತ್ತಿದೆ.

ಇದನ್ನೂ ಓದಿ: ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು

ಇದನ್ನೂ ಓದಿ
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಕಿಂಚಿತ್ತೂ ಚೆನ್ನಾಗಿಲ್ಲ ಎಂದು ನೆಗೆಟಿವ್​ ಪ್ರಚಾರ; ಇದರ ಹಿಂದೆ ಯಾರ ಹುನ್ನಾರ?
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ ಪತ್ನಿ ಎದುರು ಅಕ್ಷಯ್​ ಕುಮಾರ್​ ರೀತಿ ಡೈಲಾಗ್​ ಹೊಡೆದ ಅಮಿತ್​ ಶಾ
Image
ಅಕ್ಷಯ್​​ ಬಳಿಕ ಯಶ್​ಗೆ ಪಾನ್​ ಮಸಾಲ ಆಫರ್; ಎಷ್ಟು ಕೋಟಿ ಕೊಟ್ರೂ ಈ ಕೆಲಸ ಮಾಡಲ್ಲ ಎಂದ ನಟ​
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು

‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ತೆರಿಗೆ ವಿನಾಯಿತಿ:

ಯೋಗಿ ಆದಿತ್ಯನಾಥ್​ ಅವರು ಈ ಸಿನಿಮಾವನ್ನು ನೋಡಿ ಇಷ್ಟಪಟ್ಟಿದ್ದಾರೆ. ಹಾಗಾಗಿ ಅವರು ಉತ್ತರ ಪ್ರದೇಶದಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದಾರೆ. ಇದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ಫಸ್ಟ್​ ಡೇ ಫಸ್ಟ್ ಶೋ ನೋಡಿದ ಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಉತ್ತಮ ವಿಮರ್ಶೆ ವ್ಯಕ್ತವಾಗುತ್ತಿದೆ.

ಅಮಿತ್​ ಶಾ ಮೆಚ್ಚಿದ ‘ಸಾಮ್ರಾಟ್​ ಪೃಥ್ವಿರಾಜ್​’:

ತಮ್ಮ ಕುಟುಂಬದ ಸದಸ್ಯರ ಜೊತೆ ಕುಳಿತು ಅಮಿತ್​ ಶಾ ಅವರು ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ. ‘ಇತಿಹಾಸದ ವಿದ್ಯಾರ್ಥಿ ಆದ ನಾನು ಈ ಸಿನಿಮಾ ನೋಡಿ ಕೇವಲ ಎಂಜಾಯ್​ ಮಾಡಲಿಲ್ಲ. ಭಾರತೀಯರಿಗೆ ಈ ಚಿತ್ರ ಎಷ್ಟು ಮುಖ್ಯ ಎಂಬುದನ್ನು ಕೂಡ ಅರ್ಥ ಮಾಡಿಕೊಂಡೆ’ ಎಂದು ಅಮಿತ್​ ಶಾ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ