AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಮುಖ್ಯಸ್ಥ ಮೋಹನ್​ ಭಾಗವತ್​ಗೆ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ತೋರಿಸಲಿರುವ ಅಕ್ಷಯ್​ ಕುಮಾರ್​

RSS Chief Mohan Bhagwat: ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾವನ್ನು ಮೋಹನ್​ ಭಾಗವತ್​ ನೋಡಲಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ಇಂದು (ಜೂನ್​ 3) ದೆಹಲಿಯಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗುತ್ತಿದೆ.

RSS ಮುಖ್ಯಸ್ಥ ಮೋಹನ್​ ಭಾಗವತ್​ಗೆ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ತೋರಿಸಲಿರುವ ಅಕ್ಷಯ್​ ಕುಮಾರ್​
ಮೋಹನ್ ಭಾಗವತ್, ಅಕ್ಷಯ್ ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Jun 03, 2022 | 1:22 PM

ಸತತ ಸೋಲಿನಿಂದ ಕಂಗೆಟ್ಟಿದ್ದ ಬಾಲಿವುಡ್​ಗೆ ಹೊಸ ಚೈತನ್ಯ ನೀಡಲು ‘ಸಾಮ್ರಾಟ್​ ಪೃಥ್ವಿರಾಜ್​’ (Samrat Prithviraj) ಸಿನಿಮಾ ರಿಲೀಸ್​ ಆಗಿದೆ. ಅಕ್ಷಯ್​ ಕುಮಾರ್​ (Akshay Kumar) ಅಭಿನಯದ ಈ ಚಿತ್ರದ ಬಗ್ಗೆ ಅನೇಕ ಗಣ್ಯರು ಆಸಕ್ತಿ ತೋರಿಸುತ್ತಿದ್ದಾರೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸೇರಿದಂತೆ ಅನೇಕ ರಾಜಕಾರಣಿಗಳು ಈ ಚಿತ್ರವನ್ನು ವೀಕ್ಷಿಸಿ ಭೇಷ್​ ಎಂದಿದ್ದಾರೆ. ಈಗ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ (Mohan Bhagwat) ಅವರು ಕೂಡ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರವನ್ನು ವೀಕ್ಷಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಸಿನಿಮಾದಲ್ಲಿ ಐತಿಹಾಸಿಕ ಕಥಾಹಂದರ ಇದೆ. ಅಕ್ಷಯ್​ ಕುಮಾರ್​ ಅವರಿಗೆ ಜೋಡಿಯಾಗಿ ಮಾನುಷಿ ಚಿಲ್ಲರ್​ ನಟಿಸಿದ್ದಾರೆ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿದ್ದು, ಉತ್ತಮ ಓಪನಿಂಗ್​ ಪಡೆಯುವಲ್ಲಿ ಈ ಸಿನಿಮಾ ಯಶಸ್ವಿ ಆಗಿದೆ.

ದೇಶಭಕ್ತಿ ಕಥಾಹಂದರ ಸಿನಿಮಾಗಳಿಂದ ಅಕ್ಷಯ್​ ಕುಮಾರ್​ ಅವರು ಈ ಹಿಂದೆ ಕೂಡ ಗೆಲುವು ಕಂಡಿದ್ದರು. ಈಗ ಅವರಿಗೆ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರದ ಮೂಲಕ ಅಂಥದ್ದೇ ಯಶಸ್ಸು ಸಿಗುವ ಸಾಧ್ಯತೆ ದಟ್ಟವಾಗಿದೆ. ಐತಿಹಾಸಿಕ ಕಥಾಹಂದರ ಇರುವ ಈ ಚಿತ್ರವನ್ನು ಮೋಹನ್​ ಭಾಗವತ್​ ನೋಡಲಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ಇಂದು (ಜೂನ್​ 3) ದೆಹಲಿಯಲ್ಲಿ ಅವರಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಲಾಗುತ್ತಿದೆ.

ಇದನ್ನೂ ಓದಿ: ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು

ಇದನ್ನೂ ಓದಿ
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಕಿಂಚಿತ್ತೂ ಚೆನ್ನಾಗಿಲ್ಲ ಎಂದು ನೆಗೆಟಿವ್​ ಪ್ರಚಾರ; ಇದರ ಹಿಂದೆ ಯಾರ ಹುನ್ನಾರ?
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ ಪತ್ನಿ ಎದುರು ಅಕ್ಷಯ್​ ಕುಮಾರ್​ ರೀತಿ ಡೈಲಾಗ್​ ಹೊಡೆದ ಅಮಿತ್​ ಶಾ
Image
ಅಕ್ಷಯ್​​ ಬಳಿಕ ಯಶ್​ಗೆ ಪಾನ್​ ಮಸಾಲ ಆಫರ್; ಎಷ್ಟು ಕೋಟಿ ಕೊಟ್ರೂ ಈ ಕೆಲಸ ಮಾಡಲ್ಲ ಎಂದ ನಟ​
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು

‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ತೆರಿಗೆ ವಿನಾಯಿತಿ:

ಯೋಗಿ ಆದಿತ್ಯನಾಥ್​ ಅವರು ಈ ಸಿನಿಮಾವನ್ನು ನೋಡಿ ಇಷ್ಟಪಟ್ಟಿದ್ದಾರೆ. ಹಾಗಾಗಿ ಅವರು ಉತ್ತರ ಪ್ರದೇಶದಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದಾರೆ. ಇದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ಫಸ್ಟ್​ ಡೇ ಫಸ್ಟ್ ಶೋ ನೋಡಿದ ಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಉತ್ತಮ ವಿಮರ್ಶೆ ವ್ಯಕ್ತವಾಗುತ್ತಿದೆ.

ಅಮಿತ್​ ಶಾ ಮೆಚ್ಚಿದ ‘ಸಾಮ್ರಾಟ್​ ಪೃಥ್ವಿರಾಜ್​’:

ತಮ್ಮ ಕುಟುಂಬದ ಸದಸ್ಯರ ಜೊತೆ ಕುಳಿತು ಅಮಿತ್​ ಶಾ ಅವರು ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ. ‘ಇತಿಹಾಸದ ವಿದ್ಯಾರ್ಥಿ ಆದ ನಾನು ಈ ಸಿನಿಮಾ ನೋಡಿ ಕೇವಲ ಎಂಜಾಯ್​ ಮಾಡಲಿಲ್ಲ. ಭಾರತೀಯರಿಗೆ ಈ ಚಿತ್ರ ಎಷ್ಟು ಮುಖ್ಯ ಎಂಬುದನ್ನು ಕೂಡ ಅರ್ಥ ಮಾಡಿಕೊಂಡೆ’ ಎಂದು ಅಮಿತ್​ ಶಾ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ