ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು

Runway 34 | Ajay Devgn: ಅಕ್ಷಯ್​ ಕುಮಾರ್​ ಮತ್ತು ಅಜಯ್​ ದೇವಗನ್​ ನಡುವೆ ಉತ್ತಮ ಸ್ನೇಹ ಇದೆ. ಹಾಗಾಗಿ ಅವರು ಪರಸ್ಪರ ಬೆಂಬಲವಾಗಿ ನಿಂತಿದ್ದಾರೆ.

ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
ಅಜಯ್​ ದೇವಗನ್​, ಅಕ್ಷಯ್​ ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Apr 29, 2022 | 9:08 AM

ವಿವಾದದ ಕಾರಣದಿಂದಲೇ ನಟ ಅಜಯ್​ ದೇವಗನ್​ (Ajay Devgn) ಅವರು ಕೆಲವು ದಿನಗಳಿಂದ ಭಾರಿ ಸುದ್ದಿ ಆಗುತ್ತಿದ್ದಾರೆ. ‘ಹಿಂದಿ ರಾಷ್ಟ್ರ ಭಾಷೆ’ ಎಂದು ಹೇಳುವ ಮೂಲಕ ಅವರು ಅನೇಕರಿಂದ ತೀವ್ರ ವಿರೋಧ ಎದುರಿಸುತ್ತಿದ್ದಾರೆ. ಕಿಚ್ಚ ಸುದೀಪ್​, ರಮ್ಯಾ, ಸಿದ್ಧರಾಮಯ್ಯ ಸೇರಿದಂತೆ ಅನೇಕರು ಅಜಯ್​ ದೇವಗನ್​ ಮಾತನ್ನು ಖಂಡಿಸಿದರು. ಈಗ ಇನ್ನೊಂದು ಕಾರಣಕ್ಕಾಗಿ ಅವರು ಸುದ್ದಿಯಲ್ಲಿದ್ದಾರೆ. ಅಜಯ್​ ದೇವಗನ್​ ನಟಿಸಿ, ನಿರ್ದೇಶಿಸಿ, ನಿರ್ಮಾಣ ಮಾಡಿರುವ ಹೊಸ ಸಿನಿಮಾ ‘ರನ್​ ವೇ 34’ (Runway 34 Movie) ಇಂದು (ಏ.29) ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಅಕ್ಷಯ್​ ಕುಮಾರ್​ (Akshay Kumar) ಒಂದು ದಿನ ಮುಂಚಿತವಾಗಿ ನೋಡಿದ್ದಾರೆ. ಸಿನಿಮಾದ ಬಗ್ಗೆ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದು, ಅಜಯ್​ ದೇವಗನ್​ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ವಿಮರ್ಶೆ ತಿಳಿಸಿದ್ದಾರೆ. ಆದರೆ ಅವರಿಗೆ ನೆಟ್ಟಿಗರಿಂದ ಮುಖಭಂಗ ಆಗಿದೆ. ‘ನಿಮ್ಮದು ಗುಟ್ಕಾ ಗ್ಯಾಂಗ್​’ ಎಂದು ಜನರು ಟ್ರೋಲ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಮಾಡಿರುವ ಈ ಟ್ವೀಟ್​ ವೈರಲ್​ ಆಗುತ್ತಿದೆ. ದಕ್ಷಿಣದ​ ಸಿನಿಮಾಗಳನ್ನು ಕೆಣಕಿರುವ ಅಜಯ್​ ದೇವಗನ್​ ಈಗ ‘ರನ್​ ವೇ 34’ ಚಿತ್ರದ ಮೂಲಕ ಗಲ್ಲಾ ಪೆಟ್ಟಿಗೆಯಲ್ಲಿ ಏನು ಸಾಧನೆ ಮಾಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಅಕ್ಷಯ್​ ಕುಮಾರ್​ ಮತ್ತು ಅಜಯ್​ ದೇವಗನ್​ ನಡುವೆ ಉತ್ತಮ ಸ್ನೇಹ ಇದೆ. ಆ ಕಾರಣಕ್ಕಾಗಿ ಏ.28ರಂದು ‘ರನ್​ ವೇ 34’ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಅಕ್ಷಯ್​ ಕುಮಾರ್​ ಭಾಗಿ ಆಗಿದ್ದರು. ಸಿನಿಮಾ ನೋಡಿದ ಅವರಿಗೆ ಸಖತ್​ ಇಷ್ಟ ಆಗಿದೆ.

‘ನಾನು ‘ರನ್​ ವೇ 34’ ಚಿತ್ರ ನೋಡಿದೆ. ಅಜಯ್​ ದೇವಗನ್​ ಅವರೇ, ನಿಜವಾಗಿಯೂ ಮಜಾ ಬಂತು. ಎಂಥಾ ಥ್ರಿಲ್ಲರ್​, ಸೂಪರ್​ ಆದಂತಹ ವಿಎಫ್​ಎಕ್ಸ್, ಅತ್ಯುತ್ತಮ ನಟನೆ ಮತ್ತು ನಿರ್ದೇಶನ. ಎಂದಿನಂತೆ ಅಮಿತಾಭ್​ ಬಚ್ಚನ್​ ಅವರದ್ದು ಪ್ರಯಾಸವಿಲ್ಲದ ನಟನೆ. ರಾಕುಲ್​ ಪ್ರೀತ್​ ಸಿಂಗ್​ ಅವರಿಗೂ ಚಪ್ಪಾಳೆ. ಈ ಚಿತ್ರತಂಡಕ್ಕೆ ಶುಭವಾಗಲಿ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದಾರೆ.

ವಿಮಲ್​ ಪಾನ್​ ಮಸಾಲಾ ಜಾಹೀರಾತಿನಲ್ಲಿ ಅಜಯ್​ ದೇವಗನ್​ ಮತ್ತು ಅಕ್ಷಯ್​ ಕುಮಾರ್​ ಅವರು ನಟಿಸಿರುವುದು ನೆಟ್ಟಿಗರ ಅಸಮಾಧಾನಕ್ಕೆ ಕಾರಣ ಆಗಿತ್ತು. ಈಗ ಆ ವಿಚಾರವನ್ನು ನೆಟ್ಟಿಗರು ಮತ್ತೆ ಎಳೆದು ತಂದಿದ್ದಾರೆ. ‘ನಿಮ್ಮದು ಗುಟ್ಕಾ ಗ್ಯಾಂಗ್​. ಹಾಗಾಗಿ ಪರಸ್ಪರ ಪ್ರೀತಿ ತೋರಿಸುತ್ತಿದ್ದೀರಿ’ ಎಂದು ಜನರು ಕಮೆಂಟ್​ ಮಾಡಿದ್ದಾರೆ. ‘ಇದೊಂದು ಪೇಯ್ಡ್​ ಪ್ರಚಾರ. ಅಕ್ಷಯ್​ ಕುಮಾರ್​ ಅವರು ತಮ್ಮ ಮುಂಬರುವ ಚಿತ್ರಕ್ಕಾಗಿ ಇಷ್ಟೆಲ್ಲ ಮಾಡ್ತಾ ಇದ್ದಾರೆ’ ಎಂದು ಕೂಡ ಕೆಲವರು ಆರೋಪ ಮಾಡಿದ್ದಾರೆ.

ವಿಮಲ್​ ಜಾಹೀರಾತಿನಿಂದ ಹೊರಬಂದಿರುವ ಅಕ್ಷಯ್​ ಕುಮಾರ್:

ಕೆಲವೇ ದಿನಗಳ ಹಿಂದೆ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಷಯ್​ ಕುಮಾರ್​ ಅವರು ​ವಿಮಲ್​ ಜಾಹೀರಾತಿನಿಂದ ಹೊರಬಂದರು. ಆ ಕುರಿತು ಇತ್ತೀಚೆಗೆ ಅವರು ಸ್ಪಷ್ಟನೆ ನೀಡಿದ್ದರು. ‘ನನ್ನನ್ನು ಕ್ಷಮಿಸಿ.. ಎಲ್ಲ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ನಾನು ಕ್ಷಮೆ ಕೇಳುತ್ತೇನೆ. ಕಳೆದ ಕೆಲವು ದಿನಗಳಿಂದ ನೀವು ನೀಡಿದ ಪ್ರತಿಕ್ರಿಯೆಗಳು ನನ್ನಲ್ಲಿ ಆಳವಾದ ಪರಿಣಾಮ ಬೀರಿವೆ. ನಾನು ತಂಬಾಕು ಸೇವನೆಯನ್ನು ಉತ್ತೇಜಿಸುವುದಿಲ್ಲ. ವಿಮಲ್​ ಜೊತೆ ನಾನು ಕೈ ಜೋಡಿಸಿರುವುದರ ಕುರಿತು ನಿಮ್ಮ ಪ್ರತಿಕ್ರಿಯೆಗಳನ್ನು ನಾನು ಗೌರವಿಸುತ್ತೇನೆ. ಮಾನವೀಯತೆಯ ಕಾರಣಕ್ಕೆ ನಾನು ಈ ಜಾಹೀರಾತಿನಿಂದ ಹಿಂದೆ ಸರಿಯುತ್ತೇನೆ. ಒಳ್ಳೆಯ ಉದ್ದೇಶಕ್ಕೆ ಇದರ ಸಂಭಾವನೆಯನ್ನು ನೀಡಲು ನಿರ್ಧರಿಸಿದ್ದೇನೆ. ಈಗಾಗಲೇ ಮಾಡಿಕೊಂಡ ಒಪ್ಪಂದದ ಅವಧಿ ಮುಗಿಯುವವರೆಗೂ ಬ್ರ್ಯಾಂಡ್​ನವರು ಆ ಜಾಹೀರಾತನ್ನು ಪ್ರಸಾರ ಮಾಡಬಹುದು. ಆದರೆ ಮುಂಬರುವ ದಿನಗಳಲ್ಲಿ ನಾನು ಜಾಹೀರಾತುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ವಹಿಸುತ್ತೇನೆ. ಸದಾ ನಿಮ್ಮ ಪ್ರೀತಿ ಮತ್ತು ಹಾರೈಕೆ ಬಯಸುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದರು.

ಇದನ್ನೂ ಓದಿ:

ಹಿಂದಿ ವಿವಾದ: ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ? ಇಲ್ಲಿದೆ ವಿವರ..

ಹಿಂದಿ ಹೇರಿಕೆ ಎಂಬ ದೊಡ್ಡ ಹುನ್ನಾರ: ಇದು ಬರೀ ಭಾಷೆಯ ವಿಷಯ ಅಲ್ಲ, ಭವಿಷ್ಯದ ವಿಷಯ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ