AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು

Runway 34 | Ajay Devgn: ಅಕ್ಷಯ್​ ಕುಮಾರ್​ ಮತ್ತು ಅಜಯ್​ ದೇವಗನ್​ ನಡುವೆ ಉತ್ತಮ ಸ್ನೇಹ ಇದೆ. ಹಾಗಾಗಿ ಅವರು ಪರಸ್ಪರ ಬೆಂಬಲವಾಗಿ ನಿಂತಿದ್ದಾರೆ.

ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
ಅಜಯ್​ ದೇವಗನ್​, ಅಕ್ಷಯ್​ ಕುಮಾರ್​
TV9 Web
| Edited By: |

Updated on: Apr 29, 2022 | 9:08 AM

Share

ವಿವಾದದ ಕಾರಣದಿಂದಲೇ ನಟ ಅಜಯ್​ ದೇವಗನ್​ (Ajay Devgn) ಅವರು ಕೆಲವು ದಿನಗಳಿಂದ ಭಾರಿ ಸುದ್ದಿ ಆಗುತ್ತಿದ್ದಾರೆ. ‘ಹಿಂದಿ ರಾಷ್ಟ್ರ ಭಾಷೆ’ ಎಂದು ಹೇಳುವ ಮೂಲಕ ಅವರು ಅನೇಕರಿಂದ ತೀವ್ರ ವಿರೋಧ ಎದುರಿಸುತ್ತಿದ್ದಾರೆ. ಕಿಚ್ಚ ಸುದೀಪ್​, ರಮ್ಯಾ, ಸಿದ್ಧರಾಮಯ್ಯ ಸೇರಿದಂತೆ ಅನೇಕರು ಅಜಯ್​ ದೇವಗನ್​ ಮಾತನ್ನು ಖಂಡಿಸಿದರು. ಈಗ ಇನ್ನೊಂದು ಕಾರಣಕ್ಕಾಗಿ ಅವರು ಸುದ್ದಿಯಲ್ಲಿದ್ದಾರೆ. ಅಜಯ್​ ದೇವಗನ್​ ನಟಿಸಿ, ನಿರ್ದೇಶಿಸಿ, ನಿರ್ಮಾಣ ಮಾಡಿರುವ ಹೊಸ ಸಿನಿಮಾ ‘ರನ್​ ವೇ 34’ (Runway 34 Movie) ಇಂದು (ಏ.29) ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಅಕ್ಷಯ್​ ಕುಮಾರ್​ (Akshay Kumar) ಒಂದು ದಿನ ಮುಂಚಿತವಾಗಿ ನೋಡಿದ್ದಾರೆ. ಸಿನಿಮಾದ ಬಗ್ಗೆ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದು, ಅಜಯ್​ ದೇವಗನ್​ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ವಿಮರ್ಶೆ ತಿಳಿಸಿದ್ದಾರೆ. ಆದರೆ ಅವರಿಗೆ ನೆಟ್ಟಿಗರಿಂದ ಮುಖಭಂಗ ಆಗಿದೆ. ‘ನಿಮ್ಮದು ಗುಟ್ಕಾ ಗ್ಯಾಂಗ್​’ ಎಂದು ಜನರು ಟ್ರೋಲ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಮಾಡಿರುವ ಈ ಟ್ವೀಟ್​ ವೈರಲ್​ ಆಗುತ್ತಿದೆ. ದಕ್ಷಿಣದ​ ಸಿನಿಮಾಗಳನ್ನು ಕೆಣಕಿರುವ ಅಜಯ್​ ದೇವಗನ್​ ಈಗ ‘ರನ್​ ವೇ 34’ ಚಿತ್ರದ ಮೂಲಕ ಗಲ್ಲಾ ಪೆಟ್ಟಿಗೆಯಲ್ಲಿ ಏನು ಸಾಧನೆ ಮಾಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಅಕ್ಷಯ್​ ಕುಮಾರ್​ ಮತ್ತು ಅಜಯ್​ ದೇವಗನ್​ ನಡುವೆ ಉತ್ತಮ ಸ್ನೇಹ ಇದೆ. ಆ ಕಾರಣಕ್ಕಾಗಿ ಏ.28ರಂದು ‘ರನ್​ ವೇ 34’ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಅಕ್ಷಯ್​ ಕುಮಾರ್​ ಭಾಗಿ ಆಗಿದ್ದರು. ಸಿನಿಮಾ ನೋಡಿದ ಅವರಿಗೆ ಸಖತ್​ ಇಷ್ಟ ಆಗಿದೆ.

‘ನಾನು ‘ರನ್​ ವೇ 34’ ಚಿತ್ರ ನೋಡಿದೆ. ಅಜಯ್​ ದೇವಗನ್​ ಅವರೇ, ನಿಜವಾಗಿಯೂ ಮಜಾ ಬಂತು. ಎಂಥಾ ಥ್ರಿಲ್ಲರ್​, ಸೂಪರ್​ ಆದಂತಹ ವಿಎಫ್​ಎಕ್ಸ್, ಅತ್ಯುತ್ತಮ ನಟನೆ ಮತ್ತು ನಿರ್ದೇಶನ. ಎಂದಿನಂತೆ ಅಮಿತಾಭ್​ ಬಚ್ಚನ್​ ಅವರದ್ದು ಪ್ರಯಾಸವಿಲ್ಲದ ನಟನೆ. ರಾಕುಲ್​ ಪ್ರೀತ್​ ಸಿಂಗ್​ ಅವರಿಗೂ ಚಪ್ಪಾಳೆ. ಈ ಚಿತ್ರತಂಡಕ್ಕೆ ಶುಭವಾಗಲಿ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದಾರೆ.

ವಿಮಲ್​ ಪಾನ್​ ಮಸಾಲಾ ಜಾಹೀರಾತಿನಲ್ಲಿ ಅಜಯ್​ ದೇವಗನ್​ ಮತ್ತು ಅಕ್ಷಯ್​ ಕುಮಾರ್​ ಅವರು ನಟಿಸಿರುವುದು ನೆಟ್ಟಿಗರ ಅಸಮಾಧಾನಕ್ಕೆ ಕಾರಣ ಆಗಿತ್ತು. ಈಗ ಆ ವಿಚಾರವನ್ನು ನೆಟ್ಟಿಗರು ಮತ್ತೆ ಎಳೆದು ತಂದಿದ್ದಾರೆ. ‘ನಿಮ್ಮದು ಗುಟ್ಕಾ ಗ್ಯಾಂಗ್​. ಹಾಗಾಗಿ ಪರಸ್ಪರ ಪ್ರೀತಿ ತೋರಿಸುತ್ತಿದ್ದೀರಿ’ ಎಂದು ಜನರು ಕಮೆಂಟ್​ ಮಾಡಿದ್ದಾರೆ. ‘ಇದೊಂದು ಪೇಯ್ಡ್​ ಪ್ರಚಾರ. ಅಕ್ಷಯ್​ ಕುಮಾರ್​ ಅವರು ತಮ್ಮ ಮುಂಬರುವ ಚಿತ್ರಕ್ಕಾಗಿ ಇಷ್ಟೆಲ್ಲ ಮಾಡ್ತಾ ಇದ್ದಾರೆ’ ಎಂದು ಕೂಡ ಕೆಲವರು ಆರೋಪ ಮಾಡಿದ್ದಾರೆ.

ವಿಮಲ್​ ಜಾಹೀರಾತಿನಿಂದ ಹೊರಬಂದಿರುವ ಅಕ್ಷಯ್​ ಕುಮಾರ್:

ಕೆಲವೇ ದಿನಗಳ ಹಿಂದೆ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಷಯ್​ ಕುಮಾರ್​ ಅವರು ​ವಿಮಲ್​ ಜಾಹೀರಾತಿನಿಂದ ಹೊರಬಂದರು. ಆ ಕುರಿತು ಇತ್ತೀಚೆಗೆ ಅವರು ಸ್ಪಷ್ಟನೆ ನೀಡಿದ್ದರು. ‘ನನ್ನನ್ನು ಕ್ಷಮಿಸಿ.. ಎಲ್ಲ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ನಾನು ಕ್ಷಮೆ ಕೇಳುತ್ತೇನೆ. ಕಳೆದ ಕೆಲವು ದಿನಗಳಿಂದ ನೀವು ನೀಡಿದ ಪ್ರತಿಕ್ರಿಯೆಗಳು ನನ್ನಲ್ಲಿ ಆಳವಾದ ಪರಿಣಾಮ ಬೀರಿವೆ. ನಾನು ತಂಬಾಕು ಸೇವನೆಯನ್ನು ಉತ್ತೇಜಿಸುವುದಿಲ್ಲ. ವಿಮಲ್​ ಜೊತೆ ನಾನು ಕೈ ಜೋಡಿಸಿರುವುದರ ಕುರಿತು ನಿಮ್ಮ ಪ್ರತಿಕ್ರಿಯೆಗಳನ್ನು ನಾನು ಗೌರವಿಸುತ್ತೇನೆ. ಮಾನವೀಯತೆಯ ಕಾರಣಕ್ಕೆ ನಾನು ಈ ಜಾಹೀರಾತಿನಿಂದ ಹಿಂದೆ ಸರಿಯುತ್ತೇನೆ. ಒಳ್ಳೆಯ ಉದ್ದೇಶಕ್ಕೆ ಇದರ ಸಂಭಾವನೆಯನ್ನು ನೀಡಲು ನಿರ್ಧರಿಸಿದ್ದೇನೆ. ಈಗಾಗಲೇ ಮಾಡಿಕೊಂಡ ಒಪ್ಪಂದದ ಅವಧಿ ಮುಗಿಯುವವರೆಗೂ ಬ್ರ್ಯಾಂಡ್​ನವರು ಆ ಜಾಹೀರಾತನ್ನು ಪ್ರಸಾರ ಮಾಡಬಹುದು. ಆದರೆ ಮುಂಬರುವ ದಿನಗಳಲ್ಲಿ ನಾನು ಜಾಹೀರಾತುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ವಹಿಸುತ್ತೇನೆ. ಸದಾ ನಿಮ್ಮ ಪ್ರೀತಿ ಮತ್ತು ಹಾರೈಕೆ ಬಯಸುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದರು.

ಇದನ್ನೂ ಓದಿ:

ಹಿಂದಿ ವಿವಾದ: ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ? ಇಲ್ಲಿದೆ ವಿವರ..

ಹಿಂದಿ ಹೇರಿಕೆ ಎಂಬ ದೊಡ್ಡ ಹುನ್ನಾರ: ಇದು ಬರೀ ಭಾಷೆಯ ವಿಷಯ ಅಲ್ಲ, ಭವಿಷ್ಯದ ವಿಷಯ

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು