AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್​ ಹೀರೋ ಜತೆಗಿನ ಜಗಳದ ಬಗ್ಗೆ ಮೌನ ಮುರಿದ ಅಜಯ್​ ದೇವಗನ್​: ‘ಇದೆಲ್ಲ ಫ್ಯಾನ್ಸ್​ ಕೆಲಸ’ ಎಂದ ನಟ

‘ಅಭಿಮಾನಿ ಸಂಘಗಳ ನಡುವೆ ಜಗಳ ಆಗುತ್ತದೆ. ಆಗ ಇಬ್ಬರು ಸ್ಟಾರ್ ನಟರ ನಡುವೆಯೇ ಜಗಳ ಆಗಿದೆ ಎಂಬ ರೀತಿಯಲ್ಲಿ ಬಿಂಬಿತ ಆಗುತ್ತದೆ’ ಎಂದು ಅಜಯ್​ ದೇವಗನ್​ ಹೇಳಿದ್ದಾರೆ.

ಸ್ಟಾರ್​ ಹೀರೋ ಜತೆಗಿನ ಜಗಳದ ಬಗ್ಗೆ ಮೌನ ಮುರಿದ ಅಜಯ್​ ದೇವಗನ್​: ‘ಇದೆಲ್ಲ ಫ್ಯಾನ್ಸ್​ ಕೆಲಸ’ ಎಂದ ನಟ
ಅಜಯ್ ದೇವಗನ್
TV9 Web
| Updated By: ಮದನ್​ ಕುಮಾರ್​|

Updated on: May 06, 2022 | 8:00 AM

Share

ಬಾಲಿವುಡ್​ ನಟ ಅಜಯ್​ ದೇವಗನ್​ (Ajay Devgn) ಅವರು ಅನೇಕ ಕಾರಣಗಳಿಂದ ಹೈಲೈಟ್​ ಆಗುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ರಾಷ್ಟ್ರ ಭಾಷೆ ಕುರಿತು ಕಮೆಂಟ್​ ಮಾಡಿ ಸುದ್ದಿ ಆಗಿದ್ದರು. ಅದರಲ್ಲೂ ಕಿಚ್ಚ ಸುದೀಪ್​ಗೆ ಟ್ವಿಟರ್​ನಲ್ಲಿ ಪಾಠ ಮಾಡಲು ಬಂದು, ನಂತರ ತಾವೇ ಪಾಠ ಕಲಿತು ಸೈಲೆಂಟ್​ ಆಗಿದ್ದರು. ಇದರ ಬೆನ್ನಲ್ಲೇ ಅವರು ನಟಿಸಿದ ‘ರನ್​ವೇ 34’ ಸಿನಿಮಾ (Runway 34 Movie) ಬಿಡುಗಡೆ ಆಯಿತು. ಏ.29ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಅಜಯ್​ ದೇವಗನ್​ ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಉತ್ತಮ ವಿಮರ್ಶೆ ಸಿಕ್ಕರೂ ಕೂಡ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಸೋಲುಂಡಿದೆ. ಈ ನಡುವೆ ಅವರು ಶಾರುಖ್​ ಖಾನ್​ (Shah Rukh Khan) ಬಗ್ಗೆ ಮಾತನಾಡಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಸೂಪರ್​ ಸ್ಟಾರ್​ ನಟನಾಗಿ ಗುರುತಿಸಿಕೊಂಡಿರುವ ಶಾರುಖ್​ ಜೊತೆ ಅಜಯ್​ ದೇವಗನ್​ ಅವರಿಗೆ ದುಶ್ಮನಿ ಇದೆ ಎಂದು ಬಹಳ ದಿನಗಳಿಂದಲೂ ಹೇಳಲಾಗುತ್ತಿತ್ತು. ಆ ಕುರಿತು ಈಗ ಅವರು ಮಾತನಾಡಿದ್ದಾರೆ. ಶಾರುಖ್​ ಖಾನ್​ ಮತ್ತು ತಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಅಜಯ್​ ದೇವಗನ್​ ಹೇಳಿದ್ದಾರೆ.

ಸಿನಿಮಾ ವಿಚಾರದಲ್ಲಿ ಅಜಯ್​ ದೇವಗನ್​ ಹಾಗೂ ಶಾರುಖ್​ ಖಾನ್​ ನಡುವೆ ವೈಮನಸ್ಸು ಮೂಡಿತ್ತು. 2012ರಲ್ಲಿ ಅಜಯ್​ ದೇವಗನ್​ ನಟನೆಯ ‘ಸನ್​ ಆಫ್​ ಸರ್ದಾರ್​’ ಹಾಗೂ ಶಾರುಖ್ ಖಾನ್​​ ನಟನೆಯ ‘ಜಬ್​ ತಕ್​ ಹೈ ಜಾನ್​’ ಸಿನಿಮಾಗಳು ಏಕಕಾಲಕ್ಕೆ ತೆರೆಕಂಡವು. ಆ ಸಂದರ್ಭದಲ್ಲಿ ಉಂಟಾದ ರಿಲೀಸ್​ ಕ್ಲ್ಯಾಶ್​ನಿಂದಾಗಿ ಇಬ್ಬರ ನಡುವೆ ಕಿರಿಕ್​ ಶುರುವಾಯಿತು ಎಂದು ಸುದ್ದಿ ಆಗಿತ್ತು. ಆದರೆ ಆ ಎಲ್ಲ ವಿಚಾರಗಳನ್ನು ಅಜಯ್​ ದೇವಗನ್​ ತಳ್ಳಿ ಹಾಕಿದ್ದಾರೆ.

ವಿಮಲ್​ ಪಾನ್​ ಮಸಾಲಾ ಜಾಹೀರಾತಿನಲ್ಲಿ ಅಜಯ್​ ದೇವಗನ್​ ಹಾಗೂ ಶಾರುಖ್​ ಖಾನ್​ ಜೊತೆಯಾಗಿ ನಟಿಸಿದ್ದಾರೆ. ಆ ಮೂಲಕ ತಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂಬುದನ್ನು ಅವರು ಈಗಾಗಲೇ ಹೇಳಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಶಾರುಖ್​ ಖಾನ್​ ಜೊತೆಗಿನ ತಮ್ಮ ಸ್ನೇಹದ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ
Image
‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ಹಿಂದಿ ವಿವಾದ: ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ? ಇಲ್ಲಿದೆ ವಿವರ..
Image
‘ಗಂಗೂಬಾಯಿ..’ ಚಿತ್ರಕ್ಕೆ 20 ಕೋಟಿ ರೂ. ಸಂಬಳ ಪಡೆದ ಆಲಿಯಾ ಭಟ್; ಅಜಯ್​ ದೇವಗನ್​ಗೆ ಸಿಕ್ಕಿದ್ದೆಷ್ಟು?

‘90ರ ದಶಕದಲ್ಲಿ ನಾನು ಮತ್ತು ಶಾರುಖ್​ ಖಾನ್​ ಒಟ್ಟಾಗಿ ವೃತ್ತಿಜೀವನ ಆರಂಭಿಸಿದವರು. ನಮ್ಮಿಬ್ಬರ ನಡುವೆ ಉತ್ತಮ ಬಾಂಧವ್ಯ ಇದೆ. ಮಾಧ್ಯಮದವರು ಬರೆಯುವ ರೀತಿಯಲ್ಲಿ ನಮ್ಮ ಮಧ್ಯೆ ಯಾವುದೇ ಜಗಳ ಆಗಿಲ್ಲ. ನಾವು ಈಗಲೂ ಫೋನ್​ನಲ್ಲಿ ಮಾತನಾಡುತ್ತೇವೆ. ನಾವು ಚೆನ್ನಾಗಿಯೇ ಇದ್ದೇವೆ. ನಮ್ಮಿಬ್ಬರಲ್ಲಿ ಒಬ್ಬರಿಗೆ ಏನೇ ಸಮಸ್ಯೆ ಎದುರಾದರೂ ಇನ್ನೊಬ್ಬರು ಸಹಾಯಕ್ಕೆ ಧಾವಿಸುತ್ತೇವೆ. ಇಬ್ಬರಿಗೂ ಪರಸ್ಪರ ನಂಬಿಕೆ ಇದೆ. ನಮ್ಮ ನಡುವೆ ಯಾವತ್ತೂ ಮನಸ್ತಾಪ ಇರಲೇ ಇಲ್ಲ’ ಎಂದಿದ್ದಾರೆ ಅಜಯ್​ ದೇವಗನ್​.

ಹಾಗಾದರೆ, ಈ ಇಬ್ಬರು ಸ್ಟಾರ್​ ನಟರ ನಡುವೆ ಮನಸ್ತಾಪ ಇದೆ ಎಂದು ಸುದ್ದಿ ಹಬ್ಬಲು ಕಾರಣ ಏನಿರಬಹುದು. ಈ ವಿಚಾರದಲ್ಲಿ ಅಜಯ್​​ ದೇವಗನ್​ ಅವರು ಫ್ಯಾನ್ಸ್​ ಮೇಲೆ ಆರೋಪ ಹೊರಿಸಿದ್ದಾರೆ. ‘ಅಭಿಮಾನಿ ಸಂಘಗಳ ನಡುವೆ ಜಗಳ ಆಗುತ್ತದೆ. ಆಗ ಇಬ್ಬರು ಸ್ಟಾರ್ ನಟರ ನಡುವೆಯೇ ಜಗಳ ಆಗಿದೆ ಎಂಬ ರೀತಿಯಲ್ಲಿ ಬಿಂಬಿತ ಆಗುತ್ತದೆ’ ಎಂದು ಅಜಯ್​ ದೇವಗನ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!