AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕಿರುತೆರೆ ನಟಿಯನ್ನು ರೆಡ್​ಹ್ಯಾಂಡ್​ ಆಗಿ ಹಿಡಿದ ಪೊಲೀಸರು

ಆರತಿ ಅವರು ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂತು. ಹೀಗಾಗಿ, ಪೊಲೀಸರು ಮಾರುವೇಶದಲ್ಲಿ ಅವರ ಬಳಿ ತೆರಳಿದ್ದರು.

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕಿರುತೆರೆ ನಟಿಯನ್ನು ರೆಡ್​ಹ್ಯಾಂಡ್​ ಆಗಿ ಹಿಡಿದ ಪೊಲೀಸರು
ಆರತಿ
ರಾಜೇಶ್ ದುಗ್ಗುಮನೆ
|

Updated on:Apr 18, 2023 | 1:08 PM

Share

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಕಿರುತೆರೆ ನಟಿ ಆರತಿ ಹರೀಶ್​ಚಂದ್ರ ಮಿತ್ತಲ್ (Aarti Mittal) ಅವರನ್ನು ಪೊಲೀಸರು ಬಂಧಿಸಿದ್ದಾರೆ. ರೆಡ್ ಹ್ಯಾಂಡ್​ ಆಗಿ ಅವರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಮಾಡೆಲ್​​ಗಳನ್ನು ಬಳಕೆ ಮಾಡಿಕೊಂಡು ಈ ದಂಧೆಯನ್ನು ನಡೆಸುತ್ತಿದ್ದರು ಎಂಬುದನ್ನು ಪೊಲೀಸರು ಹೇಳಿದ್ದಾರೆ. ಇತ್ತೀಚೆಗೆ ಅವರು ಕಾಸ್ಟಿಂಗ್ ಡೈರೆಕ್ಟರ್​ ಆಗಿಯೂ ಕೆಲಸ ಮಾಡುತ್ತಿದ್ದರು. ಸದ್ಯ ಅವರ ಬಂಧನ ಬಾಲಿವುಡ್​ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಸದ್ಯ ಪ್ರಕರಣ ತನಿಖೆಯಲ್ಲಿದೆ.

‘ಅಪ್ನಾಪನ್’ ಸೇರಿ ಕೆಲವು ಧಾರಾವಾಹಿಗಳಲ್ಲಿ ಆರತಿ ಕಾಣಿಸಿಕೊಂಡಿದ್ದರು. ಅವರು ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂತು. ಹೀಗಾಗಿ, ಪೊಲೀಸರು ಮಾರುವೇಶದಲ್ಲಿ ಅವರ ಬಳಿ ತೆರಳಿದ್ದರು. ತಾವು ಗ್ರಾಹಕರು ಎಂದು ಪೊಲೀಸರು ತಮ್ಮನ್ನು ತಾವು ಪರಿಚಯಿಸಿಕೊಂಡಿದ್ದರು. ಇದನ್ನು ರೆಕಾರ್ಡ್ ಮಾಡಲಾಗಿತ್ತು. ಎರಡು ಮಾಡೆಲ್​ಗಳು ಈ ರಾಕೆಟ್​ನಲ್ಲಿ ಸಿಕ್ಕಿ ಬಿದ್ದಿದ್ದಾರೆ. ಈ ಮಾಡೆಲ್​​ಗಳಿಗೆ ಆರತಿ ಅವರು ಭರ್ಜರಿಯಾಗಿ ಹಣ ನೀಡುತ್ತಿದ್ದರು. ಹಣದ ಆಸೆಗೆ ಅವರು ಗ್ರಾಹಕರ ಬಳಿ ತೆರಳುತ್ತಿದ್ದರು.

ಇನ್​ಸ್ಪೆಕ್ಟರ್ ಮನೋಜ್ ಸುತಾರ್ ಅವರಿಗೆ ಈ ವೇಶ್ಯಾವಾಟಿಕೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಅವರು ಆರತಿ ಬಳಿ ತೆರಳಿ ತಾವು ಗ್ರಾಹಕರು ಎಂದು ಹೇಳಿಕೊಂಡರು. ಇಬ್ಬರು ಹುಡುಗಿಯರು ಬೇಕು ಮತ್ತು ಅವರನ್ನು ಹೋಟೆಲ್​ಗೆ ಕಳುಹಿಸುವಂತೆ ಮನೋಜ್ ಕೇಳಿದ್ದರು. ಇದಕ್ಕೆ ಪ್ರತಿಯಾಗಿ 60 ಸಾವಿರ ರೂಪಾಯಿ ನೀಡುವಂತೆ ಆರತಿ ಬೇಡಿಕೆ ಇಟ್ಟಿದ್ದರು. ಇದಕ್ಕೆ ಮನೋಜ್ ಒಪ್ಪಿದರು.

ಇದನ್ನೂ ಓದಿ: ವೇಶ್ಯಾವಾಟಿಕೆ ಜಾಲದಲ್ಲಿ ಸಿಕ್ಕಿಬಿದ್ದ ನಟಿಯರು ಇವರೇ; ವೃತ್ತಿಜೀವನವೇ ಹಾಳಾಯ್ತು

ಹೋಟೆಲ್ ರೂಂ ಒಳಗೆ ತೆರಳುವುದಕ್ಕೂ ಮುನ್ನ ತನ್ನ ಗ್ರಾಹಕರಿಗೆ ಆರತಿ ಕಾಂಡೋಂಮ್ ನೀಡಿದ್ದರು. ಇದೆಲ್ಲವನ್ನೂ ಪೊಲೀಸರು ಶೂಟ್ ಮಾಡಿಕೊಂಡಿದ್ದಾರೆ. ಪ್ರತಿ ಮಾಡೆಲ್​ಗೆ 15 ಸಾವಿರ ರೂಪಾಯಿ ಹಣವನ್ನು ಆರತಿ ನೀಡುತ್ತಿದ್ದರು. ಉಳಿದ ಹಣವನ್ನು ತಾವೇ ಇಟ್ಟುಕೊಳ್ಳುತ್ತಿದ್ದರು. ಸದ್ಯ ಆರತಿ ವಿರುದ್ಧ ಕೇಸ್ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಆರತಿ ಅವರು ನಟಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಕೆಲ ಧಾರಾವಾಹಿಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಇತ್ತೀಚೆಗೆ ಆರ್​ ಮಾಧವನ್ ಜೊತೆ ಬಣ್ಣ ಹಚ್ಚುತ್ತಿರುವುದಾಗಿ ಅವರು ಹೇಳಿಕೊಂಡಿದ್ದರು. ಈಗ ಅವರು ಇಷ್ಟು ದೊಡ್ಡ ದಂಧೆ ನಡೆಸುತ್ತಿರುವ ವಿಚಾರ ಸಾಕಷ್ಟು ಸಂಚಲನ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Tue, 18 April 23

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್