Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್​​-ಸಬಾ ಬಗ್ಗೆ ಹೊರಬಿತ್ತು ಮತ್ತೊಂದು ರಹಸ್ಯ​; ಇವರ ಸಂಬಂಧ ಇಷ್ಟೊಂದು ಮುಂದುವರಿದಿದೆಯಾ?

ಹೃತಿಕ್​ಗೆ ಗೆಳೆಯರೊಬ್ಬರ ಮೂಲಕ ಸಬಾ ಪರಿಚಯ ಆಗಿದೆ. ಇಬ್ಬರ ಟೇಸ್ಟ್​ ಒಂದೇ ರೀತಿ ಇದ್ದಿದ್ದರಿಂದ ಬೇಗ ಹತ್ತಿರವಾಗಿದ್ದಾರೆ. ಆ ಬಳಿಕ ಅನೇಕ ಬಾರಿ ಇವರು ಭೇಟಿ ಆಗಿದ್ದಾರೆ. ಆ ಬಳಿಕ ಇವರು ಡೇಟಿಂಗ್​ ಶುರುಹಚ್ಚಿಕೊಂಡಿದ್ದಾರೆ.

ಹೃತಿಕ್​​-ಸಬಾ ಬಗ್ಗೆ ಹೊರಬಿತ್ತು ಮತ್ತೊಂದು ರಹಸ್ಯ​; ಇವರ ಸಂಬಂಧ ಇಷ್ಟೊಂದು ಮುಂದುವರಿದಿದೆಯಾ?
ಸಬಾ-ಹೃತಿಕ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 01, 2022 | 1:25 PM

ಬಾಲಿವುಡ್​ನ ಖ್ಯಾತ ಹೃತಿಕ್​ ರೋಷನ್ (Hrithik Roshan)​ ಹಾಗೂ ನಟಿ ಸಬಾ ಆಜಾದ್ (Saba Azad)​ ಬಗ್ಗೆ ಕೇಳಿ ಬರುತ್ತಿರುವ ಸುದ್ದಿಗಳು ಒಂದೆರಡಲ್ಲ. ಇತ್ತೀಚೆಗೆ ಇಬ್ಬರೂ ಸುತ್ತಾಡುತ್ತಿರುವ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿತ್ತು. ಆಗಲೇ ಹೃತಿಕ್​ ಮತ್ತು ಸಬಾ ಮಧ್ಯೆ (Hrithik Roshan And Saba Azad Dating) ಏನೋ ನಡೆಯುತ್ತಿದೆ ಎನ್ನುವ ಸುದ್ದಿ ಹುಟ್ಟಿಕೊಂಡಿತ್ತು. ಇವರ ಸಂಬಂಧ ತುಂಬಾನೇ ಮುಂದುವರಿದಿದೆ ಎನ್ನುವ ಮಾತು ಈಗ ಕೇಳಿ ಬರುತ್ತಿದೆ. ಇವರ ಬಗ್ಗೆ ಈಗ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಈ ವಿಚಾರ ಕೇಳಿ ಅನೇಕ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ. ಹಾಗಾದರೆ, ಅವರ ರಿಲೇಷನ್​ಶಿಪ್​ ಯಾವ ಹಂತದಲ್ಲಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸುಸಾನೆ ಖಾನ್ ಹಾಗೂ ಹೃತಿಕ್​ ರೋಷನ್​ ಮದುವೆ ಆಗಿದ್ದರು. ಇವರಿಗೆ ಇಬ್ಬರು ಮಕ್ಕಳು. 2000ರಲ್ಲಿ ಮದುವೆ ಆಗಿದ್ದ ಈ ಜೋಡಿ 2014ರಲ್ಲಿ ವಿಚ್ಛೇದನ ಪಡೆದಿತ್ತು. ಆ ಬಳಿಕ ಇಬ್ಬರೂ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಮಕ್ಕಳನ್ನು ಟ್ರಿಪ್​ಗೆ ಕರೆದುಕೊಂಡು ಹೋಗಿದ್ದಿದೆ. ಆದರೆ, ಹೃತಿಕ್​ ಸಂಪೂರ್ಣವಾಗಿ ಮೂವ್​ಆನ್​ ಆಗಿದ್ದಾರೆ. ಹಾಗಂತ ಹೃತಿಕ್ ಅವರು ರಿಲೇಷನ್​ಶಿಪ್​ ವಿಚಾರದಲ್ಲಿ ಸುಮ್ಮನೆ ಕೂತಿಲ್ಲ. ಅವರು ಸಬಾ ಜತೆ ಡೇಟಿಂಗ್​ ಮಾಡುತ್ತಿದ್ದಾರೆ.

ಹೃತಿಕ್​ಗೆ ಗೆಳೆಯರೊಬ್ಬರ ಮೂಲಕ ಸಬಾ ಪರಿಚಯ ಆಗಿದೆ. ಇಬ್ಬರ ಟೇಸ್ಟ್​ ಒಂದೇ ರೀತಿ ಇದ್ದಿದ್ದರಿಂದ ಬೇಗ ಹತ್ತಿರವಾಗಿದ್ದಾರೆ. ಆ ಬಳಿಕ ಅನೇಕ ಬಾರಿ ಇವರು ಭೇಟಿ ಆಗಿದ್ದಾರೆ. ಆ ಬಳಿಕ ಇವರು ಡೇಟಿಂಗ್​ ಶುರುಹಚ್ಚಿಕೊಂಡಿದ್ದಾರೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಎಂದರೆ ಹೊಸ ವರ್ಷವನ್ನು ಈ ಜೋಡಿ ಗೋವಾದಲ್ಲಿ ಒಟ್ಟಾಗಿ ಆಚರಿಸಿದೆಯಂತೆ. ರೆಸಾರ್ಟ್​ ಒಂದರಲ್ಲಿ ಇಬ್ಬರೇ ಸಮಯ ಕಳೆದಿದ್ದಾರೆ ಎನ್ನುತ್ತಿವೆ ಮೂಲಗಳು. ಈ ವಿಚಾರ ಕೇಳಿ ಫ್ಯಾನ್ಸ್​ ಅಚ್ಚರಿ ಹೊರ ಹಾಕಿದ್ದಾರೆ. ಇವರ ಸಂಬಂಧ ಇಷ್ಟೊಂದು ಮುಂದುವರಿದಿದೆಯೇ ಎಂದು ಅಚ್ಚರಿ ಹೊರಹಾಕುತ್ತಿದ್ದಾರೆ.

ನಟ ಹೃತಿಕ್​ ರೋಷನ್​ ಅವರು ವೈಯಕ್ತಿಕ ವಿಚಾರವನ್ನು ಹೆಚ್ಚು ಗುಟ್ಟಾಗಿ ಇಡೋಕೆ ನೋಡುತ್ತಾರೆ. ಏನೇ ಇದ್ದರೂ ಅವರು ಮಾಧ್ಯಮದ ಮುಂದೆ ಬಾಯ್ಬಿಡುವುದಿಲ್ಲ. ಇದು ಇಂದು ನಿನ್ನೆಯ ವಿಚಾರ ಅಲ್ಲ. ಹೃತಿಕ್​ ಈ ಮೊದಲಿನಿಂದಲೂ ಇದೇ ನಿಯಮ ಪಾಲಿಸಿಕೊಂಡು ಬಂದಿದ್ದಾರೆ. ಆದರೆ, ಅವರು ದೊಡ್ಡ ಸೆಲೆಬ್ರಿಟಿ. ಎಲ್ಲಾ ವಿಚಾರವನ್ನು ಗುಟ್ಟಾಗಿ ಇಡೋಕೆ ಸಾಧ್ಯವಿಲ್ಲ. ಕೆಲ ವಿಚಾರಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್​ ಆಗಿ ಬಿಡುತ್ತವೆ. ಹೃತಿಕ್​ ಮನೆಯಿಂದ ಹೊರಬಿದ್ದರೆ ಸಾಕು ಪಾಪರಾಜಿಗಳು ಅವರನ್ನು ಹಿಂಬಾಲಿಸುತ್ತಾರೆ. ಈಗ ಹೃತಿಕ್​ ಪ್ರೀತಿ ಪ್ರೇಮದ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ.

ಮೌನ ತಾಳಿದ್ದ ಸಬಾ 

ಮಾಧ್ಯಮವೊಂದರ ಸಂದರ್ಶನಕ್ಕೆ ಸಬಾ ಸಿಕ್ಕಿದ್ದರು. ಈ ವೇಳೆ ನೇರವಾಗಿ ಅವರ ಎದುರು ಈ ಪ್ರಶ್ನೆಯನ್ನು ಇಡಲಾಯಿತು. ಅವರು ಈ ವೇಳೆ ಜಾಣತನ ತೋರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಏನೇ ಹೇಳಿದರೂ ನಾನಾ ರೀತಿಯ ಕಥೆಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ, ಸಬಾ ಈ ಪ್ರಶ್ನೆಗೆ ಮೌನ ತಾಳಿದ್ದಾರೆ. ಈ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ.

ಇದನ್ನೂ ಓದಿ:  ಒಂದೇ ಸಿನಿಮಾದಲ್ಲಿ ಸಲ್ಮಾನ್​, ಶಾರುಖ್​, ಹೃತಿಕ್​; ‘ಅವೆಂಜರ್ಸ್​ ಎಂಡ್​ಗೇಮ್​’ ರೀತಿ ಬಾಲಿವುಡ್​ ಪ್ಲ್ಯಾನ್​

‘ಹೃತಿಕ್​ ರೋಷನ್​ ಜತೆ ನೀವು ಡೇಟಿಂಗ್​ ಮಾಡ್ತಾ ಇದ್ದೀರಾ?’; ನೇರ ಪ್ರಶ್ನೆಗೆ ಸಬಾ ಉತ್ತರ ಏನಿತ್ತು?

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ