AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತಕ್ಕೆ ಒಳಗಾದ ನಂತರ ಮೊದಲ ಬಾರಿಗೆ ಅಭಿಮಾನಿಗಳ ಜತೆ ಮಾತನಾಡಿದ ಸಾಯಿ ಧರಮ್​ ತೇಜ್​

ಸಾಯಿ ಧರಮ್​ ತೇಜ್​ ಅವರ ಸ್ಥಿತಿ ಈಗ ಕೊಂಚ ಚೇತರಿಕೆ ಕಂಡಿದೆ. ಇಷ್ಟು ದಿನಾ ಕೋಮದಲ್ಲಿದ್ದ ಅವರು ಚೇತರಿಸಿಕೊಂಡಿದ್ದಾರೆ. ಟ್ವಿಟರ್​ ಥಂಬ್​​ ಅಪ್​ ಮಾಡಿರುವ ಫೋಟೋವನ್ನು ಹಾಕಿದ್ದಾರೆ.

ಅಪಘಾತಕ್ಕೆ ಒಳಗಾದ ನಂತರ ಮೊದಲ ಬಾರಿಗೆ ಅಭಿಮಾನಿಗಳ ಜತೆ ಮಾತನಾಡಿದ ಸಾಯಿ ಧರಮ್​ ತೇಜ್​
ಸಾಯಿ ಧರಮ್​ ತೇಜ್​
TV9 Web
| Edited By: |

Updated on: Oct 03, 2021 | 6:49 PM

Share

ನಟ ಸಾಯಿ ಧರಮ್​ ತೇಜ್​ ಅವರು ಬೈಕ್​ ಅಪಘಾತಕ್ಕೆ ಒಳಗಾಗಿ ಒಂದು ತಿಂಗಳಾಗುತ್ತಾ ಬಂದಿದೆ. ಹೈದರಾಬಾದ್​ನಲ್ಲಿ ಸೆ.10ರಂದು ಸ್ಪೋರ್ಟ್ಸ್​ ಬೈಕ್​ನಲ್ಲಿ ಚಲಿಸುತ್ತಿದ್ದ ಅವರು ಅಪಘಾತಕ್ಕೆ ಒಳಗಾದ ಬಳಿಕ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಅಭಿಮಾನಿಗಳು ಅಪ್​ಡೇಟ್​ ಕೇಳುತ್ತಿದ್ದರು. ಆ ಕುರಿತು ಈಗ ಸಾಯಿ ಧರಮ್​ ಅವರೇ ಉತ್ತರ ನೀಡಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಒಂದನ್ನು ಮಾಡಿದ್ದಾರೆ.

ಸಾಯಿ ಧರಮ್​ ತೇಜ್​ ಅವರ ಸ್ಥಿತಿ ಈಗ ಕೊಂಚ ಚೇತರಿಕೆ ಕಂಡಿದೆ. ಇಷ್ಟು ದಿನ ಕೋಮದಲ್ಲಿದ್ದ ಅವರು ಚೇತರಿಸಿಕೊಂಡಿದ್ದಾರೆ. ಟ್ವಿಟರ್​ ಥಂಬ್​​ ಅಪ್​ ಮಾಡಿರುವ ಫೋಟೋವನ್ನು ಹಾಕಿದ್ದಾರೆ. ‘ನನ್ನ ಮೇಲೆ ಮತ್ತು ನನ್ನ ಸಿನಿಮಾ ‘ರಿಪಬ್ಲಿಕ್’ ಮೇಲೆ ನೀವು ತೋರಿಸಿದ ನಿಮ್ಮ ಪ್ರೀತಿ ಮತ್ತು ವಾತ್ಸಲ್ಯಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಧನ್ಯವಾದ ಎಂಬುದು ಸಣ್ಣ ಪದ, ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ’ ಎಂದು ಅವರು ಬರೆದಿದ್ದಾರೆ.

ಸಾಯಿ ಧರಮ್​ ತೇಜ್​ ಅವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂದು ಇತ್ತೀಚೆಗೆ ಅವರ ಮಾವ ಪವನ್​ ಕಲ್ಯಾಣ್​ ಅವರು ಮಾಹಿತಿ ಹಂಚಿಕೊಂಡಿದ್ದರು. ‘ಸಾಯಿ ಧರಮ್​ ತೇಜ್​ ಇನ್ನೂ ಕಣ್ಣು ಬಿಟ್ಟಿಲ್ಲ. ಆತ ಇನ್ನೂ ಕೋಮಾ ಸ್ಥಿತಿಯಲ್ಲೇ ಇದ್ದಾನೆ. ಅವನಿಗೆ ಆದ ಆ್ಯಕ್ಸಿಡೆಂಟ್​ ನಿಜಕ್ಕೂ ದುರದೃಷ್ಟಕರ. ಅವನು ಅತಿ ವೇಗದಲ್ಲಿ ಬೈಕ್​ ಓಡಿಸುತ್ತಿದ್ದ ಎಂಬ ವರದಿಯನ್ನು ಮಾಧ್ಯಮಗಳಲ್ಲಿ ನೋಡಿದೆ. ಆದರೆ ಅದು ನಿಜವಲ್ಲ. ಸಾಯಿ ಧರಮ್​ ತೇಜ್​ ಕೇವಲ 45 ಕಿ.ಮೀ. ವೇಗದಲ್ಲಿ ಬೈಕ್​ ಓಡಿಸುತ್ತಿದ್ದ. ಸಿಸಿಟಿವಿ ದೃಶ್ಯದಲ್ಲೂ ಅದು ಗೊತ್ತಾಗುತ್ತದೆ. ಸಾಯಿ ಧರಮ್​ ತೇಜ್​ ಬಗ್ಗೆ ಮಾಧ್ಯಮಗಳು ಮಾತನಾಡಬೇಕಿಲ್ಲ. ರಾಜಕೀಯದಲ್ಲಿನ ಅಪರಾಧಗಳ ಬಗ್ಗೆ ಮಾತನಾಡಬೇಕಿದೆ’ ಎಂದು ಪವನ್​ ಕಲ್ಯಾಣ್​ ಹೇಳಿದ್ದರು.

ಇದನ್ನೂ ಓದಿ: ಬೈಕ್​ ಅಪಘಾತಕ್ಕೆ ಒಳಗಾದ ನಟ ಸಾಯಿ ಧರಮ್​ ತೇಜ್​ ಈಗ ಹೇಗಿದ್ದಾರೆ? ಇಲ್ಲಿದೆ ಶಾಕಿಂಗ್​ ಮಾಹಿತಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್