ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಮುಂದಾದ ಆಮಿರ್ ಮಗ; ಮುಂದಾಯ್ತು ಯಾರು ಊಹಿಸದ ಘಟನೆ

ಸಾಯಿ ಪಲ್ಲವಿ ಹಿಂದಿ ಚಿತ್ರ 'ಏಕ್ ದಿನ್' ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಾಯಿ ಪಲ್ಲವಿ ಹೆಗಲಮೇಲೆ ಜುನೈದ್ ಖಾನ್ ಕೈ ಹಾಕಲು ಮುಂದಾದ ಘಟನೆ ವೈರಲ್ ಆಗಿದೆ. ಆಮಿರ್ ಖಾನ್ ಮಗನ ನಡೆ ಹಲವು ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕವಾಗಿ ನಟಿಯರ ಜೊತೆಗಿನ ವರ್ತನೆ ಬಗ್ಗೆ ಪ್ರಶ್ನೆ ಎತ್ತಿದೆ. ಸಾಯಿ ಪಲ್ಲವಿ ಗೌರವಕ್ಕೆ ಧಕ್ಕೆ ತರದೆ ಜುನೈದ್ ನಡೆದುಕೊಂಡ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಮುಂದಾದ ಆಮಿರ್ ಮಗ; ಮುಂದಾಯ್ತು ಯಾರು ಊಹಿಸದ ಘಟನೆ
ಸಾಯಿ ಪಲ್ಲವಿ

Updated on: Apr 28, 2026 | 6:54 AM

ನಟಿ ಸಾಯಿ ಪಲ್ಲವಿ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ಈಗ ಹಿಂದಿಯಿಂದಲೂ ಆಫರ್​​ಗಳು ಬರೋಕೆ ಆರಂಭ ಆಗಿವೆ. ಹಿಂದಿಯಲ್ಲಿ ಅವರು ನಟಿಸಿರುವ ‘ಏಕ್ ದಿನ್’ ಸಿನಿಮಾ ರಿಲೀಸ್​​ಗೆ ರೆಡಿ ಆಗಿದೆ. ಈ ಚಿತ್ರದ ವಿಶೇಷ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಈ ವೇಳೆ ನಡೆದ ಘಟನೆ ಒಂದು ಚರ್ಚೆಗೆ ಕಾರಣ ಆಗಿದೆ. ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಆಮಿರ್ ಖಾನ್ (Aamir Khan) ಮಗ ಜುನೈದ್ ಖಾನ್ ಮುಂದಾಗಿದ್ದರು. ಆ ಬಳಿಕ ಅವರು ನಡೆದುಕೊಂಡ ರೀತಿ ಎಲ್ಲರ ಗಮನ ಸೆಳೆದಿದೆ.

ಸಾಯಿ ಪಲ್ಲವಿ ಹಾಗೂ ಜುನೈದ್ ಖಾನ್ ಅವರ ‘ಏಕ್ ದಿನ್’ ಸಿನಿಮಾಗೆ ಸುನೀಲ್ ಪಾಂಡೆ ನಿರ್​ದೇಶನ ಮಾಡಿದ್ದಾರೆ. ಇದು ಥಾಯಿ ಭಾಷೆಯ ‘ಒನ್ ಡೇ’ ಸಿನಿಮಾದ ರಿಮೇಕ್ ಆಗಿದೆ. ಮನ್ಸೂರ್ ಖಾನ್, ಆಮಿರ್ ಖಾನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮೇ 1ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ವಿಶೇಷ ಶೋ ನೋಡಿದ ಬಳಿಕ ಆಮಿರ್ ಖಾನ್ ಅತ್ತಿದ್ದಾರೆ.

ವಿಶೇಷ ಶೋ ಬಳಿಕ ಸುದ್ದಿಗೋಷ್ಠಿ ಒಂದನ್ನು ಆಯೋಜನೆ ಮಾಡಲಾಯಿತು. ಆಗ ಜುನೈದ್ ಖಾನ್ ಅವರು ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಮುಂದಾಗಿದ್ದಾರೆ. ಆ ಬಳಿಕ ಅವರಿಗೆ ಏನನ್ನಿಸಿತೋ ಏನೋ, ಹೆಗಲಮೇಲೆ ಕೈ ಹಾಕದೆ ಹಿಂದಕ್ಕೆ ತೆಗೆದುಕೊಂಡಿದ್ದಾರೆ.ಈ ವಿಡಿಯೋ ವೈರಲ್ ಆಗಿದೆ. ಅನೇಕರು ಇದಕ್ಕೆ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಹುಶಃ ಜುನೈದ್​​ಗೆ ಇವರು ಉಳಿದ ಹೀರೋಯಿನ್​ಗಳಂತೆ ಅಲ್ಲ ಎಂಬುದು ಆ ಬಳಿಕ ಅರಿವಾಗಿರಬಹುದು’ ಹೀಗಾಗಿ, ಕೈ ಹಿಂದಕ್ಕೆ ತೆಗೆದುಕೊಂಡಿದ್ದಾರೆ’ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ನನ್ನ ತಂದೆ ಅಂತ ಹೇಳಿಕೊಳ್ಳಲಿಲ್ಲ ಪುತ್ರ ಜುನೈದ್ ಖಾನ್; ಕಾರಣ ಏನು?

ಇನ್ನು ಕೆಲವರು ಜುನೈದ್ ಪರ ಬ್ಯಾಟ್ ಬೀಸಿದ್ದಾರೆ. ‘ಜುನೈದ್​ ಅವರಿಗೆ ಸಾರ್ವಜನಿಕವಾಗಿ ಹೇಗಿರಬೇಕು, ಯಾವುದು ನಟಿಯರಿಗೆ ಹಿತ ನೀಡುತ್ತದೆ, ಯಾವುದು ಅಹಿತ ಎನಿಸುತ್ತದೆ ಎಂಬುದು ಗೊತ್ತಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:57 pm, Mon, 27 April 26

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us