AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಪಲ್ಲವಿ ಅಥವಾ ಜಾನ್ವಿ ಕಪೂರ್​; ಯಾರಿಗೆ ಒಲಿಯಲಿದೆ ಸೀತಾ ಮಾತೆ ಪಾತ್ರ?

ಜಾನ್ವಿ ಕಪೂರ್​ ಅವರು ಈ ಹಿಂದೆ ‘ಬವಾಲ್​’ ಸಿನಿಮಾದಲ್ಲಿ ನಿರ್ದೇಶಕ ನಿತೇಶ್​ ತಿವಾರಿ ಜೊತೆ ಕೆಲಸ ಮಾಡಿದ್ದರು. ಹಾಗಾಗಿ ರಾಮಾಯಣ ಆಧರಿತ ಸಿನಿಮಾದಲ್ಲಿ ಅವರನ್ನೇ ಈಗ ಸೀತಾ ಮಾತೆಯ ಪಾತ್ರಕ್ಕೆ ಪರಿಗಣಿಸಲಾಗುತ್ತಿದೆ ಎಂಬ ಸುದ್ದಿ ಹಬ್ಬಿದೆ. ಇನ್ನೊಂದೆಡೆ ಸಾಯಿ ಪಲ್ಲವಿ ಅವರು ಹೆಸರ ಕೂಡ ಕೇಳಿಬರುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ.

ಸಾಯಿ ಪಲ್ಲವಿ ಅಥವಾ ಜಾನ್ವಿ ಕಪೂರ್​; ಯಾರಿಗೆ ಒಲಿಯಲಿದೆ ಸೀತಾ ಮಾತೆ ಪಾತ್ರ?
ಜಾನ್ವಿ ಕಪೂರ್​, ಸಾಯಿ ಪಲ್ಲವಿ
ಮದನ್​ ಕುಮಾರ್​
|

Updated on: Feb 07, 2024 | 11:22 AM

Share

ರಾಮಾಯಣದ ಕಥೆಯನ್ನು ಆಧರಿಸಿ ಈಗಾಗಲೇ ಹಲವು ಸಿನಿಮಾಗಳು ಮೂಡಿಬಂದಿವೆ. ಹಾಗಿದ್ದರೂ ಈ ಕಥೆಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಪುರಾಣಗಳನ್ನು ಆಧರಿಸಿದ ಸಿನಿಮಾಗಳನ್ನು ಪ್ರೇಕ್ಷಕರು ಯಾವಾಗಲೂ ಇಷ್ಟಪಡುತ್ತಾರೆ. ಹಾಗಾಗಿ ಬಾಲಿವುಡ್​ನಲ್ಲಿ ಈಗ ರಾಮಾಯಣ (Ramayan) ಕಥೆಯನ್ನು ಇಟ್ಟುಕೊಂಡು ನಿರ್ದೇಶಕ ನಿತೇಶ್​ ತಿವಾರಿ ಅವರು ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಸೀತಾ ಮಾತೆಯ ಪಾತ್ರಕ್ಕೆ ಯಾರು ಆಯ್ಕೆ ಆಗುತ್ತಾರೆ ಎಂಬ ಕೌತುಕ ಮೂಡಿದೆ. ಸಾಯಿ ಪಲ್ಲವಿ (Sai Pallavi) ಮತ್ತು ಜಾನ್ವಿ ಕಪೂರ್ (Janhvi Kapoor) ಅವರ ಹೆಸರುಗಳು ಕೇಳಿಬರುತ್ತಿವೆ.

ರಾಮನ ಪಾತ್ರ ಮಾಡಲು ಈಗಾಗಲೇ ರಣಬೀರ್​ ಕಪೂರ್​ ಆಯ್ಕೆ ಆಗಿದ್ದಾರೆ. ಇನ್ನುಳಿದ ಪಾತ್ರಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಪಾತ್ರವರ್ಗದಲ್ಲಿ ಬದಲಾವಣೆ ಆಗಿದೆ ಎಂಬ ಸುದ್ದಿ ಕೇಳಿಬಂದಿದೆ. ಸಾಯಿ ಪಲ್ಲವಿ ಬದಲಿಗೆ ಜಾನ್ವಿ ಕಪೂರ್​ ಅವರನ್ನು ಆಯ್ಕೆ ಮಾಡಿಕೊಳ್ಳಲು ನಿರ್ದೇಶಕ ನಿತೇಶ್​ ತಿವಾರಿ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾದಲ್ಲಿ ವಿಭೀಷಣನ ಪಾತ್ರ ಮಾಡ್ತಾರಾ ವಿಜಯ್​ ಸೇತುಪತಿ?

ಜಾನ್ವಿ ಕಪೂರ್​ ಮತ್ತು ನಿತೇಶ್​ ತಿವಾರಿ ಅವರು ಈಗಾಗಲೇ ‘ಬವಾಲ್​’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಹಾಗಾಗಿ ಅವರಿಬ್ಬರ ನಡುವೆ ಹೊಂದಾಣಿಕೆ ಇದೆ. ಆ ಕಾರಣದಿಂದಲೇ ನಿತೇಶ್​ ಅವರು ಸೀತಾ ಮಾತೆಯ ಪಾತ್ರಕ್ಕೆ ಜಾನ್ವಿ ಕಪೂರ್​ ಅವರನ್ನು ಆಯ್ಕೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ‘ಪಿಂಕ್​ ವಿಲ್ಲಾ’ ವರದಿ ಮಾಡಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ಹನುಮಂತನ ಪಾತ್ರ ಮಾಡ್ತಾರಾ ಸನ್ನಿ ಡಿಯೋಲ್​? ‘ರಾಮಾಯಣ’ ಚಿತ್ರದ ಬಗ್ಗೆ ಬಿಗ್​ ನ್ಯೂಸ್​

ರಾವಣನ ಪಾತ್ರದಲ್ಲಿ ಯಶ್​ ನಟಿಸುತ್ತಾರೆ ಎಂಬ ಗಾಸಿಪ್​ ಇದೆ. ವಿಭೀಷಣನ ಪಾತ್ರದಲ್ಲಿ ವಿಜಯ್​ ಸೇತುಪತಿ, ಆಂಜನೇಯನಾಗಿ ಸನ್ನಿ ಡಿಯೋಲ್​, ಕೈಕೇಯಿ ಪಾತ್ರದಲ್ಲಿ ಲಾರಾ ದತ್ತ ನಟಿಸುತ್ತಾರೆ ಎಂದು ಸುದ್ದಿ ಹಬ್ಬಿದೆ. ಈ ಯಾವ ವಿಚಾರಗಳ ಬಗ್ಗೆಯೂ ನಿರ್ದೇಶಕ ನಿತೇಶ್​ ತಿವಾರಿ ಅವರು ಬಾಯಿ ಬಿಟ್ಟಿಲ್ಲ. ರಣಬೀರ್​ ಕಪೂರ್​ ಅವರು ರಾಮನ ಪಾತ್ರ ಮಾಡಬಾರದು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಕಂಗನಾ ರಣಾವತ್​ ಅವರು ಈ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!