Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಬಾಲಿವುಡ್​ಗೆ ಕಾಲಿಡೋ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಾಯಿ ಪಲ್ಲವಿ

ಸಾಯಿ ಪಲ್ಲವಿ ಅವರು ಸಿನಿಮಾ ಆಯ್ಕೆ ಮಾಡಿಕೊಳ್ಳುವುದಕ್ಕೂ ಮೊದಲು ಪಾತ್ರ, ಕಥೆ ಎಲ್ಲದಕ್ಕೂ ಪ್ರಾಮುಖ್ಯತೆ ಕೊಡುತ್ತಾರೆ. ಈಗ ಬಾಲಿವುಡ್​ಗೆ ಕಾಲಿಡೋಕು ಅವರು ಇದೇ ಮಾನ ದಂಡ ಇಟ್ಟುಕೊಂಡಿದ್ದಾರೆ

Sai Pallavi: ಬಾಲಿವುಡ್​ಗೆ ಕಾಲಿಡೋ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಾಯಿ ಪಲ್ಲವಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 27, 2021 | 3:19 PM

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿ ನಂತರ ಬಾಲಿವುಡ್​ಗೆ ಕಾಲಿಟ್ಟು ಯಶಸ್ಸು ಕಂಡ ಸಾಕಷ್ಟು ನಟಿಯರಿದ್ದಾರೆ. ಪೂಜಾ ಹೆಗ್ಡೆ (Pooja Hegde) ಮಂಗಳೂರು ಮೂಲದವರು. ಅವರು ಬಾಲಿವುಡ್​ನಲ್ಲಿ ನೆಲೆಕಂಡುಕೊಂಡಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರು ಒಳ್ಳೆಯ ಬೇಡಿಕೆ ಇಟ್ಟುಕೊಂಡಿದ್ದಾರೆ. ದಕ್ಷಿಣದಲ್ಲಿ ದೊಡ್ಡ ಮಟ್ಟದಲ್ಲಿ ಮಿಂಚಿರುವ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್​ನಲ್ಲಿ ಖಾತೆ ತೆರೆದಿದ್ದಾರೆ. ಇನ್ನು, ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆಗೆ ಮುಂದಾಗಿ ಸೋತವರ ಸಂಖ್ಯೆ ಕೂಡ ದೊಡ್ಡದಿದೆ. ಈಗ ಸಾಯಿ ಪಲ್ಲವಿ (Sai Pallavi) ಕೂಡ ಬಾಲಿವುಡ್​ನಲ್ಲಿ ನಟಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆ ಸೃಷ್ಟಿ ಮಾಡಿಕೊಂಡಿದ್ದಾರೆ. ಬಾಲಿವುಡ್​ಗೆ ಹೋದರೆ ಅವರಿಗೆ ಗೆಲುವು ಪಕ್ಕಾ ಎನ್ನುವ ಅಭಿಪ್ರಾಯ ಅಭಿಮಾನಿ ವಲಯದಲ್ಲಿ ವ್ಯಕ್ತವಾಗಿದೆ.

ಸಾಯಿ ಪಲ್ಲವಿ ಸಿನಿಮಾಗಳ ಆಯ್ಕೆ ವಿಚಾರದಲ್ಲಿ ಸಾಕಷ್ಟು ಚ್ಯೂಸಿ. ಅವರು ಸಿನಿಮಾ ಆಯ್ಕೆ ಮಾಡಿಕೊಳ್ಳುವುದಕ್ಕೂ ಮೊದಲು ಪಾತ್ರ, ಕಥೆ ಎಲ್ಲದಕ್ಕೂ ಪ್ರಾಮುಖ್ಯತೆ ಕೊಡುತ್ತಾರೆ. ಈಗ ಬಾಲಿವುಡ್​ಗೆ ಕಾಲಿಡೋಕು ಅವರು ಇದೇ ಮಾನ ದಂಡ ಇಟ್ಟುಕೊಂಡಿದ್ದಾರೆ. ‘ನಾನು ನಟಿಸುವ ಪಾತ್ರ ಚೆನ್ನಾಗಿರಬೇಕು. ಸ್ಟ್ರಾಂಗ್ ರೋಲ್ ಸಿಕ್ಕರೆ ಈಗ ಹಿಂದಿ ಸಿನಿಮಾ ಮಾಡೋಕೂ ನಾನು ರೆಡಿ’ ಎಂದಿದ್ದಾರೆ ಸಾಯಿ ಪಲ್ಲವಿ. ಅವರಿಗೆ ಒಪ್ಪುವಂತಹ ಪಾತ್ರವನ್ನು ಯಾರಾದರೂ ಹಿಂದಿಯಲ್ಲಿ ನೀಡುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಸಾಯಿ ಪಲ್ಲವಿ ತಮ್ಮ ಅದ್ಭುತ ನಟನೆಯ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಾಲಿವುಡ್​ಗೆ ತೆರಳೋಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಇತ್ತೀಚೆಗೆ ಸುದ್ದಿಯಾಗಿತ್ತು. ಈಗ ಅವರು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಡೋ ಬಗ್ಗೆ ನೀಡಿದ ಹೇಳಿಕೆ ಸಹಜವಾಗಿಯೇ ಕುತೂಹಲ ಮೂಡಿಸಿದೆ.

ನಾನಿ ಅಭಿನಯದ ‘ಶ್ಯಾಮ್​ ಸಿಂಘ ರಾಯ್’​ ಇತ್ತೀಚೆಗೆ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ರಾನಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಮ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ನಾಗ ಚೈತನ್ಯ ನಟನೆಯ ‘ಲವ್​ ಸ್ಟೋರಿ’ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಿದ್ದರು. ಈ ಸಿನಿಮಾ ತೆರೆಗೆ ಬಂದ ಬೆನ್ನಲ್ಲೇ ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ಪಡೆದುಕೊಂಡಿದ್ದರು. ಆ ಬಳಿಕ ಸಾಯಿ ಪಲ್ಲವಿ ಅವರನ್ನು ಮದುವೆ ಆಗುವಂತೆ ನಾಗ ಚೈತನ್ಯಗೆ ಕೆಲ ಅಭಿಮಾನಿಗಳು ಒತ್ತಾಯಿಸಿದ್ದರು.

ಇದನ್ನೂ ಓದಿ: 7 ಸಾವಿರ ಕೋಟಿ ದಾಟಿದ ‘ಸ್ಪೈಡರ್ ಮ್ಯಾನ್’​ ಕಲೆಕ್ಷನ್​; ಭಾರತದಲ್ಲೂ ಮ್ಯಾಜಿಕ್​ ಮಾಡಿದ ಸಿನಿಮಾ

ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ