AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್?

ಸಾಯಿ ಪಲ್ಲವಿ ಬಾಲಿವುಡ್ ಪ್ರವೇಶಿಸಿದ 'ಏಕ್ ದಿನ್' ಸಿನಿಮಾ ನಿರೀಕ್ಷೆ ಮೀರಿ ಕಳಪೆ ಪ್ರದರ್ಶನ ನೀಡಿದೆ. ಜುನೈದ್ ಖಾನ್ ಜೊತೆಗಿನ ಈ ಚಿತ್ರ ಮೊದಲ ದಿನ ಕೇವಲ 1 ಕೋಟಿ ರೂ. ಗಳಿಸಿ ಡಲ್ ಓಪನಿಂಗ್ ಕಂಡಿದೆ. ಕೇವಲ 14 ಪರ್ಸೆಂಟ್ ಆಕ್ಯುಪೆನ್ಸಿ ಪಡೆದ ಈ ಚಿತ್ರ ಸಾಯಿ ಪಲ್ಲವಿ ಅವರ ಆಯ್ಕೆಗಳ ಬಗ್ಗೆ ಪ್ರಶ್ನೆ ಮೂಡಿಸಿದೆ.

ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್?
ಏಕ್ ದಿನ್
ರಾಜೇಶ್ ದುಗ್ಗುಮನೆ
|

Updated on: May 02, 2026 | 10:26 AM

Share

ಸಾಯಿ ಪಲ್ಲವಿ (Sai Pallavi) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಸಿನಿಮಾಗಳು ಇಲ್ಲಿ ಅದ್ಭುತ ಕಲೆಕ್ಷನ್ ಮಾಡುತ್ತವೆ. ಈಗ ಅವರು ಬಾಲಿವುಡ್​​ಗೆ ಕಾಲಿಟ್ಟಿದ್ದಾರೆ. ಆಮಿರ್ ಖಾನ್ ಮಗ ಜುನೈದ್ ಖಾನ್ ಅವರ ‘ಏಕ್ ದಿನ್’ ಚಿತ್ರಕ್ಕೆ ಅವರು ನಾಯಕಿ. ಈ ಸಿನಿಮಾ ಮೇ 1ರಂದು ರಿಲೀಸ್ ಆಯಿತು. ಈ ಸಿನಿಮಾ ಕಮಾಲ್ ಮಾಡಲು ವಿಫಲವಾಗಿದೆ. ಈ ಚಿತ್ರ ಡಲ್​ ಓಪನಿಂಗ್ ಕಂಡಿದೆ.

‘ಏಕ್ ದಿನ್’ ರೊಮ್ಯಾಂಟಿಕ್ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಜಪಾನ್‌ ಅಲ್ಲಿ ಶೂಟ್ ಮಾಡಲಾಗಿದೆ. ಸಿನಿಮಾದ ಶೀರ್ಷಿಕೆ ಸೂಚಿಸುವಂತೆ, ಇದು ಇಬ್ಬರು ಅಪರಿಚಿತ ವ್ಯಕ್ತಿಗಳು ಭೇಟಿಯಾಗಿ ಒಂದೇ ದಿನದಲ್ಲಿ ನಡೆಯುವ ಕಥೆ. ಈ ಚಿತ್ರವನ್ನು ಸುನಿಲ್ ಪಾಂಡೆ ನಿರ್ದೇಶಿಸಿದ್ದಾರೆ. ಆಮಿರ್ ಖಾನ್ ಈ ಚಿತ್ರ ನಿರ್ಮಾಣ ಮಾಡಿದ್ದರೆ.

‘ಏಕ್ ದಿನ್’ ಸಿನಿಮಾ ಮೊದಲ ದಿನ 1 ಕೋಟಿ ರೂಪಾಯಿ ಮಾತ್ರ ಗಳಿಸಿದೆ. ಈ ಚಿತ್ರಕ್ಕೆ ದೇಶಾದ್ಯಂತ ಸಿಕ್ಕಿದ್ದು ಬರೋಬ್ಬರಿ 1,710 ಶೋ. ಆದರೂ ಸಿನಿಮಾ ಗಳಿಸಿದ್ದು ಕೇವಲ 1 ಕೋಟಿ ರೂಪಾಯಿ. ಈ ಚಿತ್ರ ಅಕ್ಯುಪೆನ್ಸಿ ಕೇವಲ 14 ಪರ್ಸೆಂಟ್ ಇತ್ತು. ಅಂದರೆ, 100 ಸೀಟ್ ಇರುವ​ ಚಿತ್ರಮಂದಿರದಲ್ಲಿ ತುಂಬಿದ್ದು ಕೇವಲ 14 ಸೀಟ್ ಮಾತ್ರ. ಹೀಗಾಗಿ, ಕೇವಲ 1 ಕೋಟಿ ರೂಪಾಯಿ ಮಾತ್ರ ಗಳಿಸಿದೆ.

ಇದನ್ನೂ ಓದಿ: ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಮುಂದಾದ ಆಮಿರ್ ಮಗ; ಮುಂದಾಯ್ತು ಯಾರು ಊಹಿಸದ ಘಟನೆ

ಸಾಯಿ ಪಲ್ಲವಿ ಅವರು ಸಾಮಾನ್ಯವಾಗಿ ಗ್ಲಾಮರ್ ಪಾತ್ರಗಳಿಗಿಂತ ಕಥೆಗೆ ಪ್ರಾಮುಖ್ಯತೆ ಇರುವ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ‘ಏಕ್ ದಿನ್’ ಕೂಡ ಅದೇ ಸಾಲಿಗೆ ಸೇರುವ ಚಿತ್ರವಾಗಿದೆ. ಸಾಯಿ ಪಲ್ಲವಿ ಪರಿಚಯ ಬಾಲಿವುಡ್​​ನವರಿಗೆ ಇಲ್ಲ. ಅವರು ‘ರಾಮಾಯಣ’ದಲ್ಲಿ ಸೀತೆ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ರಿಲೀಸ್ ಆದ ಬಳಿಕ ‘ಏಕ್ ದಿನ್’ ತೆರೆಗೆ ಬಂದಿದ್ದರೆ ಸಿನಿಮಾಗೆ ಹೆಚ್ಚು ಲಾಭ ಆಗುತ್ತಿತ್ತು. ಆದರೆ, ಆಮಿರ್ ಖಾನ್ ಅವರಿಗೆ ಅಷ್ಟು ಸಮಯ ಕಾಯುವ ತಾಳ್ಮೆ ಇರಲಿಲ್ಲ. ಹೀಗಾಗಿ, ಅವರು ಈ ನಿರ್ಧಾರ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್