AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇತರಿಕೆ ಕಾಣದ ಸಾಯಿ ಪಲ್ಲವಿ ಸಿನಿಮಾ; ನಿರ್ಮಾಪಕ ಆಮಿರ್​ಗೆ ನಷ್ಟ?

ಸಾಯಿ ಪಲ್ಲವಿ ಹಾಗೂ ಜುನೈದ್ ಖಾನ್ ಅಭಿನಯದ 'ಏಕ್ ದಿನ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಮಟ್ಟದ ಗಳಿಕೆ ಕಾಣುತ್ತಿಲ್ಲ. ಉತ್ತಮ ರೇಟಿಂಗ್‌ಗಳ ಹೊರತಾಗಿಯೂ, ಕಲೆಕ್ಷನ್ ಕುಸಿತದಿಂದ ನಿರ್ಮಾಪಕ ಆಮಿರ್ ಖಾನ್‌ಗೆ ನಷ್ಟದ ಭೀತಿ ಎದುರಾಗಿದೆ. ಸಾಯಿ ಪಲ್ಲವಿ ಬಾಲಿವುಡ್‌ನಲ್ಲಿ ಪರಿಚಿತರಲ್ಲದಿರುವುದು ಮತ್ತು ಚಿತ್ರದ ಬಜೆಟ್-ಗಳಿಕೆ ನಡುವಿನ ಅಂತರ ಸವಾಲಾಗಿದೆ.

ಚೇತರಿಕೆ ಕಾಣದ ಸಾಯಿ ಪಲ್ಲವಿ ಸಿನಿಮಾ; ನಿರ್ಮಾಪಕ ಆಮಿರ್​ಗೆ ನಷ್ಟ?
ಏಕ್ ದಿನ್
ರಾಜೇಶ್ ದುಗ್ಗುಮನೆ
|

Updated on: May 04, 2026 | 7:45 AM

Share

ಸಾಯಿ ಪಲ್ಲವಿ ಹಾಗೂ ಆಮಿರ್ ಖಾನ್ ಮಗ ಜುನೈದ್ ಖಾನ್ ನಟನೆಯ ‘ಏಕ್ ದಿನ್’ ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಹೆಚ್ಚಿನ ಏಳ್ಗೆ ಕಾಣುತ್ತಿಲ್ಲ. ಬುಕ್ ಮೈ ಶೋನಲ್ಲಿ ಸಿನಿಮಾ ಉತ್ತಮ ರೇಟಿಂಗ್ ಪಡೆದುಕೊಂಡ ಹೊರತಾಗಿಯೂ ಚಿತ್ರಕ್ಕೆ ಕಡಿಮೆ ಕಲೆಕ್ಷನ್ ಆಗುತ್ತಿದೆ. ದೇಶಾದ್ಯಂತ ಚಿತ್ರಕ್ಕೆ ಸಾವಿರಾರು ಶೋಗಳನ್ನು ನೀಡಲಾಗಿತ್ತು. ಇದರ ಮಧ್ಯೆಯೂ ಸಿನಿಮಾ ಚೇತರಿಕೆ ಕಾಣುತ್ತಿಲ್ಲ. ಇದರಿಂದ ನಿರ್ಮಾಪಕರಿಗೆ ನಷ್ಟದ ಭೀತಿ ಎದುರಾಗಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ.

‘ಏಕ್ ದಿನ್’ ಸಿನಿಮಾ ಮೇ 1ರಂದು ರಿಲೀಸ್ ಆಯಿತು. ಈ ಚಿತ್ರವನ್ನು ಜನರು ಮೆಚ್ಚಿಕೊಂಡರು. ಸಿನಿಮಾಗೆ ಎಲ್ಲ ಕಡೆಗಳಲ್ಲೂ ಪಾಸಿಟಿವ್ ಟಾಕ್ ಇದೆ. ಆದರೆ, ಸಾಯಿ ಪಲ್ಲವಿ ಪರಿಚಯ ಬಾಲಿವುಡ್​​ನಲ್ಲಿ ಅನೇಕರಿಗೆ ಇಲ್ಲ ಎಂದರೂ ತಪ್ಪಾಗಲಾರದು. ಈ ಕಾರಣಕ್ಕೆ ಸಿನಿಮಾ ನಿಧಾನಗತಿಯಲ್ಲಿ ಸಾಗುತ್ತಿದೆ.

‘ಏಕ್ ದಿನ್’ ಚಿತ್ರದಲ್ಲಿ ಜುನೈದ್ ಖಾನ್ ನಟಿಸಿದ್ದಾರೆ. ಮಗನ ಸಿನಿಮಾ ಎಂಬ ಕಾರಣಕ್ಕೆ ಆಮಿರ್ ಖಾನ್ ಬಂಡವಾಳ ಹೂಡಿದ್ದಾರೆ. ಮೊದಲೆರಡು ದಿನ ತಲಾ 1.20 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದ ಈ ಚಿತ್ರ, ಭಾನುವಾರ (ಮೇ 4) ಸುಮಾರು 2 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರಕ್ಕೆ 3.85 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಆಗಿದೆ. ಚಿತ್ರದ ಬಜೆಟ್ 15 ಕೋಟಿ ರೂಪಾಯಿ. ಈ ಸಿನಿಮಾ ಲಾಭ ಕಾಣಬೇಕು ಎಂದರೆ ಏನಿಲ್ಲ ಎಂದರೂ 30 ಕೋಟಿ ರೂಪಾಯಿ ಗಳಿಕೆ ಮಾಡಬೇಕು. ಸದ್ಯದ ಪರಿಸ್ಥಿತಿ ನೋಡಿದರೆ ಅದು ಅಸಾಧ್ಯ. ಇನ್ನು, ಒಟಿಟಿ, ಸ್ಯಾಟಲೈಟ್ ರೈಟ್ ಹಕ್ಕುಗಳ ಮಾರಾಟದಿಂದ ನಿರ್ಮಾಪಕರಿಗೆ ಸ್ವಲ್ಪ ಹಣ ಬರಬಹುದು. ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದರೆ ಮಾತ್ರ ಆಮಿರ್ ಖಾನ್ ಲಾಭ ಕಾಣುತ್ತಾರೆ.

ಇದನ್ನೂ ಓದಿ: ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್?

ಅಂದಹಾಗೆ, ಆಮಿರ್ ಖಾನ್ ಅವರಿಗೆ ಸಿನಿಮಾ ನಿರ್ಮಾಣದಿಂದ ದುಡ್ಡು ಮಾಡಬೇಕು ಎನ್ನುವ ಉದ್ದೇಶ ಇಲ್ಲ. ಅವರ ಉದ್ದೇಶ ಏನಿದ್ದರೂ ಒಳ್ಳೆಯ ಸಿನಿಮಾ ನೀಡಬೇಕು ಎಂಬುದು. ಹೀಗಾಗಿ, ಒಳ್ಳೆಯ ಕಥೆ ಸಿಕ್ಕರೆ ಅವರು ಸಿನಿಮಾ ಮಾಡುತ್ತಾರೆ. ಅವರು ಲಾಭ-ನಷ್ಟದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?