AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರಿಗೂ ಮನೆ ಇದೆ’; ಡ್ರೈವರ್ ಏಕಿರಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸೈಫ್ ಅಲಿ ಖಾನ್

ಸೈಫ್ ಅಲಿ ಖಾನ್ ಅವರ ಮೇಲೆ ನಡೆದ ಚಾಕು ದಾಳಿಯ ಬಳಿಕ ಆಟೋದಲ್ಲಿ ಆಸ್ಪತ್ರೆಗೆ ಹೋದ ಕುರಿತು ಅವರು ಸ್ಪಷ್ಟನೆ ನೀಡಿದ್ದಾರೆ. ಮನೆಯಲ್ಲಿ ಚಾಲಕ ಇಲ್ಲದಿರುವುದು ಮತ್ತು ತುರ್ತು ಪರಿಸ್ಥಿತಿಯಿಂದಾಗಿ ಆಟೋ ಬಳಸಿದ್ದಾಗಿ ಹೇಳಿದ್ದಾರೆ. ಗಾಯದ ತೀವ್ರತೆ ಮತ್ತು ಚೇತರಿಕೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ.

‘ಅವರಿಗೂ ಮನೆ ಇದೆ’; ಡ್ರೈವರ್ ಏಕಿರಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸೈಫ್ ಅಲಿ ಖಾನ್
ಸೈಫ್ ಅಲಿ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 22, 2025 | 9:18 PM

Share

ಸೈಫ್ ಅಲಿ ಖಾನ್ ಅವರ ಮೇಲೆ ಜನವರಿ 16ರಂದು ದಾಳಿ ನಡೆಯಿತು. ಕಳ್ಳತನಕ್ಕೆ ಬಂದ ವ್ಯಕ್ತಿ ದಾಳಿ ಮಾಡಿದ್ದ. ಚಾಕುವಿನಿಂದ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿದ್ದ. ಈ ದಾಳಿ ಬಳಿಕ ಸಾಕಷ್ಟು ಚರ್ಚೆ ಹುಟ್ಟಿತ್ತು. ಸೈಫ್ ಅಲಿ ಖಾನ್ ಅವರ ಬಳಿ ಐಷಾರಾಮಿ ಕಾರಿದ್ದರೂ ಆಟೋದಲ್ಲಿ ತೆರಳಿದ್ದು ಏಕೆ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಈಗ ಸೈಫ್ ಅಲಿ ಖಾನ್ ಅವರು ಉತ್ತರ ನೀಡಿದ್ದಾರೆ.

ಸೈಫ್ ಅಲಿ ಖಾನ್ ಮೇಲೆ ಆರು ಬಾರಿ ಅವರ ಮೇಲೆ ದಾಳಿ ನಡೆದಿತ್ತು. ಇದರಲ್ಲಿ ಎರಡು ಗಾಯ ಗಂಭೀರ ಆಗಿತ್ತು. ಅವರಿಗೆ ಮುಂಬೈನ ಲೀಲಾವತಿ ಹಾಸ್ಪಿಟಲ್​ನಲ್ಲಿ ಸರ್ಜರಿ ನಡೆದಿದೆ. ಈಗ ಘಟನೆ ಬಗ್ಗೆ, ಆಟೋದಲ್ಲಿ ತೆರಳಿದ್ದು ಏಕೆ ಎಂಬ ಬಗ್ಗೆ ಸೈಫ್ ಅಲಿ ಖಾನ್ ಅವರು ದೆಹಲಿ ಟೈಮ್ಸ್​​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.

‘ಸೈಫ್ ಅಲಿ ಖಾನ್ ಬೆನ್ನಿನ್ನಲ್ಲಿ ಒಂದೂವರೆಗೆ ಗಂಟೆ ಚಾಕುವಿನ ಪೀಸ್ ಇಟ್ಟುಕೊಂಡು ಏನು ಮಾಡುತ್ತಿದ್ದರು ಎನ್ನುವ ಪ್ರಶ್ನೆ ಎದ್ದಿದೆ. ನಾನು ಅಷ್ಟೆಲ್ಲಾ ಹೊತ್ತು ಇರಲಿಲ್ಲ. ದಾಳಿ ಬಳಿಕ ಆಸ್ಪತ್ರೆಗೆ ತೆರಳಿದೆ. ಸೈಫ್ ರಿಕ್ಷಾದಲ್ಲಿ ತೆರಳಿದ್ದೇಕೆ ಎನ್ನುವ ಪ್ರಶ್ನೆಯೂ ಎದ್ದಿದೆ’ ಎಂದು ಸೈಫ್ ಅಲಿ ಖಾನ್ ಹೇಳಿದ್ದಾರೆ.

‘ಸೈಫ್ ಅಲಿ ಖಾನ್ ಮನೆಯಲ್ಲಿ ಡ್ರೈವರ್ ಕೂಡ ಇರಲಿಲ್ಲವಾ ಎಂದು ಎಲ್ಲರೂ ಕೇಳುತ್ತಿದ್ದಾರೆ. ನಮ್ಮ ಮನೆಯಲ್ಲಿ ಡ್ರೈವರ್ ಉಳಿದುಕೊಳ್ಳೊದಿಲ್ಲ. ಎಲ್ಲರಿಗೂ ಅವರದ್ದೇ ಆದ ಮನೆ ಇದೆ. ನಮ್ಮ ಮನೆಯಲ್ಲಿ ಕೆಲಸದವರ ಪೈಕಿ ಕೆಲವರು ಉಳಿದುಕೊಳ್ಳುತ್ತಾರೆ. ಆದರೆ, ಕಾರು ಚಾಲಕರು ಇರೋದಿಲ್ಲ. ಕೆಲವೊಮ್ಮೆ ಮಧ್ಯರಾತ್ರಿ ಎಲ್ಲಾದರೂ ಹೋಗೋದಿದ್ದರೆ ಅವರ ಬಳಿ ಉಳಿದುಕೊಳ್ಳಿ ಎಂದು ಹೇಳುತ್ತೇವೆ’ ಎಂದಿದ್ದಾರೆ ಸೈಫ್ ಅಲಿ ಖಾನ್. ಈ ಮೂಲಕ ಎಲ್ಲಾ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ.

‘ನನಗೆ ಕೀ ಸಿಕ್ಕಿದ್ದರೆ ನಾನೇ ಡ್ರೈವ್ ಮಾಡಿಕೊಂಡು ಹೋಗುತ್ತಿದ್ದೆ. ಅದೃಷ್ಟವಾಶತ್ ಕೀ ಸಿಗಲಿಲ್ಲ! ನಾನು ಮೂರು ಗಂಟೆಗೆ ಚಾಲಕರಿಗೆ ಕರೆ ಮಾಡಿ ಬನ್ನಿ ಎಂದು ಹೇಳಬಹುದಿತ್ತು. ಆದರೆ, ಅವರು ಬರೋಕೆ ಸಮಯ ಬೇಕಲ್ಲ. ನಾನು ತುರ್ತಾಗಿ ಆಸ್ಪತ್ರೆಗೆ ಸೇರಬೇಕಿತ್ತು’ ಎಂದು ವಿವರಿಸಿದ್ದಾರೆ ಸೈಫ್ ಅಲಿ ಖಾನ್.

ಇದನ್ನೂ ಓದಿ: ಹಲ್ಲೆ ಬಳಿಕ ಮೊದಲ ಬಾರಿಗೆ ಈವೆಂಟ್​ಗೆ ಬಂದ ಸೈಫ್ ಅಲಿ ಖಾನ್; ಕಾಣಿಸ್ತಿದೆ ಗಾಯದ ಗುರುತು

‘ನಾನು ಬೇಗ ರಿಕವರಿ ಆದ ಬಗ್ಗೆ ಅನೇಕರು ನಂಬುತ್ತಿಲ್ಲ. ಇದರ ಬಗ್ಗೆ ಅನೇಕರು ಫನ್ ಮಾಡುತ್ತಿದ್ದಾರೆ. ಆ ಬಗ್ಗೆ ನನಗೆ ಬೇಸರ ಇಲ್ಲ’ ಎಂದಿದ್ದಾರೆ ಅವರು. ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಐದು ದಿನ ಇದ್ದರು. ಚಿಕಿತ್ಸೆ ಪಡೆದು ಮರಳಿದ ಅವರು ಫಿಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:49 am, Mon, 10 February 25

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?