AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್ ಕೇಸ್: ತಪ್ಪು ವ್ಯಕ್ತಿ ಬಂಧಿಸಿದ್ರಾ ಮುಂಬೈ ಪೊಲೀಸರು? ಹೋಲಿಕೆ ಆಗುತ್ತಿಲ್ಲ ಬೆರಳಚ್ಚು

ನಟ ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ನಡೆದ ದರೋಡೆ ಯತ್ನದ ಬಗ್ಗೆ ಮುಂಬೈ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಆ ವ್ಯಕ್ತಿಯ ಫಿಂಗರ್​ಪ್ರಿಂಟ್ ಹೋಲಿಕೆ ಆಗುತ್ತಿಲ್ಲ ಎಂಬುದು ಈಗ ತಿಳಿದು ಬಂದಿದೆ. ಹಾಗಾದರೆ ಮುಂಬೈ ಪೊಲೀಸರು ದಾರಿ ತಪ್ಪಿದ್ದಾರಾ ಎಂಬ ಅನುಮಾನ ಮೂಡಿದೆ.

ಸೈಫ್ ಕೇಸ್: ತಪ್ಪು ವ್ಯಕ್ತಿ ಬಂಧಿಸಿದ್ರಾ ಮುಂಬೈ ಪೊಲೀಸರು? ಹೋಲಿಕೆ ಆಗುತ್ತಿಲ್ಲ ಬೆರಳಚ್ಚು
Mohammad Shariful Islam Shehzad, Saif Ali Khan
Follow us
ಮದನ್​ ಕುಮಾರ್​
|

Updated on: Jan 26, 2025 | 7:48 PM

ಬಾಲಿವುಡ್​ನ ಜನಪ್ರಿಯ ನಟ ಸೈಫ್ ಅಲಿ ಖಾನ್ ಅವರಿಗೆ ಚೂರಿ ಇರಿತ ಆದಾಗ ಎಲ್ಲರಿಗೂ ಆತಂಕ ಆಗಿತ್ತು. ಮುಂಬೈನ ಬಾಂದ್ರಾದಲ್ಲಿ ಇರುವ ಸೈಫ್ ಅಲಿ ಖಾನ್ ಅವರ ಅಪಾರ್ಟ್​ಮೆಂಟ್​ಗೆ ಕಳ್ಳರು ನುಗ್ಗಿದ್ದರು. ಆ ವೇಳೆ ಸೈಫ್ ಅಲಿ ಖಾನ್ ಮೇಲೆ ಚೂಕು ಹಾಕಲಾಗಿತ್ತು. ಆ ಘಟನೆ ನಡೆದ ಕೂಡಲೇ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ಸೈಫ್ ನಿವಾಸದಲ್ಲಿ ಫಿಂಗರ್​ಪ್ರಿಂಟ್​ ಸಂಗ್ರಹ ಮಾಡಲಾಗಿತ್ತು. ಬಳಿಕ ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್ ಎಂಬ ಆರೋಪಿಯನ್ನು ಬಂಧಿಸಲಾಗಿತ್ತು. ಅಚ್ಚರಿ ಏನೆಂದರೆ, ಈ ವ್ಯಕ್ತಿಯ ಜೊತೆಗೆ ಫಿಂಗರ್​ಪ್ರಿಂಟ್ ಹೋಲಿಕೆ ಆಗುತ್ತಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ವರದಿಗಳ ಪ್ರಕಾರ, ಮುಂಬೈ ಪೊಲೀಸರು ಸೈಫ್ ಅಲಿ ಖಾನ್ ಅವರ ಅಪಾರ್ಟ್​ಮೆಂಟ್​ನಲ್ಲಿ 19 ಬಗೆಯ ಬೆರಳಚ್ಚು ಸಂಗ್ರಹ ಮಾಡಿದ್ದರು. ಅವುಗಳನ್ನು ಪರಿಶೀಲಿಸಲು ಹಾಗೂ ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್​ನ ಬೆರಳಚ್ಚಿನ ಜೊತೆ ಮ್ಯಾಚ್ ಆಗುತ್ತೋ ಇಲ್ಲವೋ ಎಂಬುದನ್ನು ತಿಳಿಯಲು ಕ್ರಿಮಿನಲ್ ಇನ್​ವೆಸ್ಟಿಗೇಷನ್ ಡಿಪಾರ್ಟ್​ಮೆಂಟ್​ಗೆ ಕಳಿಸಲಾಗಿತ್ತು. ಅಲ್ಲಿಂದ ಬಂದ ವರದಿ ನೋಡಿ ಎಲ್ಲರಿಗೂ ಶಾಕ್ ಆಗಿದೆ.

ಕಂಪ್ಯೂಟರ್​ ಮೂಲಕ ಬೆರಳಚ್ಚು ಪರಿಶೀಲನೆ ಮಾಡಲಾಗಿದೆ. ಈ ವರದಿ ಪ್ರಕಾರ, ಮುಂಬೈ ಪೊಲೀಸರು ಸೈಫ್ ಮನೆಯಲ್ಲಿ ಸಂಗ್ರಹಿಸಿದ ಬೆರಳಚ್ಚಿಗೂ, ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್​ನ ಬೆರಳಚ್ಚಿಗೂ ತಾಳೆ ಆಗುತ್ತಿಲ್ಲ. ಹಾಗಾದರೆ ಪೊಲೀಸರು ಬಂಧಿಸಿರುವುದು ಬೇರೆಯದೇ ವ್ಯಕ್ತಿಯನ್ನಾ ಎಂಬ ಅನುಮಾನ ಸೃಷ್ಟಿಯಾಗಿದೆ. ಆದ್ದರಿಂದ ಹೆಚ್ಚಿನ ಪರೀಕ್ಷೆ ಮಾಡಲು ಇನ್ನಷ್ಟು ಫಿಂಗರ್​ಪ್ರಿಂಟ್ ಸ್ಯಾಂಪಲ್​ಗಳನ್ನು ಕಳಿಸಿಕೊಡಲಾಗಿದೆ.

ಇದನ್ನೂ ಓದಿ: ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್

ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್​ ಬಾಂಗ್ಲಾದೇಶ ಮೂಲದವನು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ಅದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಆರೋಪಿ ಪರ ವಕೀಲರು ವಾದ ಮಾಡಿದ್ದಾರೆ. ಇನ್ನೊಂದು ಪ್ರಮುಖ ಅಂಶ ಏನೆಂದರೆ, ಸೈಫ್ ಮನೆಯ ಸಿಸಿಟಿವಿಯಲ್ಲಿ ಕಾಣಿಸಿದ ವ್ಯಕ್ತಿಯ ಮುಖಕ್ಕೂ, ಮುಂಬೈ ಪೊಲೀಸರು ಅರೆಸ್ಟ್​ ಮಾಡಿದ ವ್ಯಕ್ತಿಯ ಮಖಕ್ಕೂ ಸಾಮ್ಯತೆಯೇ ಇಲ್ಲ ಎಂದು ನೆಟ್ಟಿಗರು ಹೇಳಿದ್ದಾರೆ. ಇದರಿಂದಾಗಿ ಮುಂಬೈ ಪೊಲೀಸರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಎದ್ದಿದೆ. ನಿಜವಾದ ಆರೋಪಿ ಎಲ್ಲಿದ್ದಾನೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ