ಸೈಫ್ ಕೇಸ್: ತಪ್ಪು ವ್ಯಕ್ತಿ ಬಂಧಿಸಿದ್ರಾ ಮುಂಬೈ ಪೊಲೀಸರು? ಹೋಲಿಕೆ ಆಗುತ್ತಿಲ್ಲ ಬೆರಳಚ್ಚು

ನಟ ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ನಡೆದ ದರೋಡೆ ಯತ್ನದ ಬಗ್ಗೆ ಮುಂಬೈ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಆ ವ್ಯಕ್ತಿಯ ಫಿಂಗರ್​ಪ್ರಿಂಟ್ ಹೋಲಿಕೆ ಆಗುತ್ತಿಲ್ಲ ಎಂಬುದು ಈಗ ತಿಳಿದು ಬಂದಿದೆ. ಹಾಗಾದರೆ ಮುಂಬೈ ಪೊಲೀಸರು ದಾರಿ ತಪ್ಪಿದ್ದಾರಾ ಎಂಬ ಅನುಮಾನ ಮೂಡಿದೆ.

ಸೈಫ್ ಕೇಸ್: ತಪ್ಪು ವ್ಯಕ್ತಿ ಬಂಧಿಸಿದ್ರಾ ಮುಂಬೈ ಪೊಲೀಸರು? ಹೋಲಿಕೆ ಆಗುತ್ತಿಲ್ಲ ಬೆರಳಚ್ಚು
Mohammad Shariful Islam Shehzad, Saif Ali Khan

Updated on: Jan 26, 2025 | 7:48 PM

ಬಾಲಿವುಡ್​ನ ಜನಪ್ರಿಯ ನಟ ಸೈಫ್ ಅಲಿ ಖಾನ್ ಅವರಿಗೆ ಚೂರಿ ಇರಿತ ಆದಾಗ ಎಲ್ಲರಿಗೂ ಆತಂಕ ಆಗಿತ್ತು. ಮುಂಬೈನ ಬಾಂದ್ರಾದಲ್ಲಿ ಇರುವ ಸೈಫ್ ಅಲಿ ಖಾನ್ ಅವರ ಅಪಾರ್ಟ್​ಮೆಂಟ್​ಗೆ ಕಳ್ಳರು ನುಗ್ಗಿದ್ದರು. ಆ ವೇಳೆ ಸೈಫ್ ಅಲಿ ಖಾನ್ ಮೇಲೆ ಚೂಕು ಹಾಕಲಾಗಿತ್ತು. ಆ ಘಟನೆ ನಡೆದ ಕೂಡಲೇ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ಸೈಫ್ ನಿವಾಸದಲ್ಲಿ ಫಿಂಗರ್​ಪ್ರಿಂಟ್​ ಸಂಗ್ರಹ ಮಾಡಲಾಗಿತ್ತು. ಬಳಿಕ ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್ ಎಂಬ ಆರೋಪಿಯನ್ನು ಬಂಧಿಸಲಾಗಿತ್ತು. ಅಚ್ಚರಿ ಏನೆಂದರೆ, ಈ ವ್ಯಕ್ತಿಯ ಜೊತೆಗೆ ಫಿಂಗರ್​ಪ್ರಿಂಟ್ ಹೋಲಿಕೆ ಆಗುತ್ತಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ವರದಿಗಳ ಪ್ರಕಾರ, ಮುಂಬೈ ಪೊಲೀಸರು ಸೈಫ್ ಅಲಿ ಖಾನ್ ಅವರ ಅಪಾರ್ಟ್​ಮೆಂಟ್​ನಲ್ಲಿ 19 ಬಗೆಯ ಬೆರಳಚ್ಚು ಸಂಗ್ರಹ ಮಾಡಿದ್ದರು. ಅವುಗಳನ್ನು ಪರಿಶೀಲಿಸಲು ಹಾಗೂ ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್​ನ ಬೆರಳಚ್ಚಿನ ಜೊತೆ ಮ್ಯಾಚ್ ಆಗುತ್ತೋ ಇಲ್ಲವೋ ಎಂಬುದನ್ನು ತಿಳಿಯಲು ಕ್ರಿಮಿನಲ್ ಇನ್​ವೆಸ್ಟಿಗೇಷನ್ ಡಿಪಾರ್ಟ್​ಮೆಂಟ್​ಗೆ ಕಳಿಸಲಾಗಿತ್ತು. ಅಲ್ಲಿಂದ ಬಂದ ವರದಿ ನೋಡಿ ಎಲ್ಲರಿಗೂ ಶಾಕ್ ಆಗಿದೆ.

ಕಂಪ್ಯೂಟರ್​ ಮೂಲಕ ಬೆರಳಚ್ಚು ಪರಿಶೀಲನೆ ಮಾಡಲಾಗಿದೆ. ಈ ವರದಿ ಪ್ರಕಾರ, ಮುಂಬೈ ಪೊಲೀಸರು ಸೈಫ್ ಮನೆಯಲ್ಲಿ ಸಂಗ್ರಹಿಸಿದ ಬೆರಳಚ್ಚಿಗೂ, ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್​ನ ಬೆರಳಚ್ಚಿಗೂ ತಾಳೆ ಆಗುತ್ತಿಲ್ಲ. ಹಾಗಾದರೆ ಪೊಲೀಸರು ಬಂಧಿಸಿರುವುದು ಬೇರೆಯದೇ ವ್ಯಕ್ತಿಯನ್ನಾ ಎಂಬ ಅನುಮಾನ ಸೃಷ್ಟಿಯಾಗಿದೆ. ಆದ್ದರಿಂದ ಹೆಚ್ಚಿನ ಪರೀಕ್ಷೆ ಮಾಡಲು ಇನ್ನಷ್ಟು ಫಿಂಗರ್​ಪ್ರಿಂಟ್ ಸ್ಯಾಂಪಲ್​ಗಳನ್ನು ಕಳಿಸಿಕೊಡಲಾಗಿದೆ.

ಇದನ್ನೂ ಓದಿ: ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್

ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್​ ಬಾಂಗ್ಲಾದೇಶ ಮೂಲದವನು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ಅದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಆರೋಪಿ ಪರ ವಕೀಲರು ವಾದ ಮಾಡಿದ್ದಾರೆ. ಇನ್ನೊಂದು ಪ್ರಮುಖ ಅಂಶ ಏನೆಂದರೆ, ಸೈಫ್ ಮನೆಯ ಸಿಸಿಟಿವಿಯಲ್ಲಿ ಕಾಣಿಸಿದ ವ್ಯಕ್ತಿಯ ಮುಖಕ್ಕೂ, ಮುಂಬೈ ಪೊಲೀಸರು ಅರೆಸ್ಟ್​ ಮಾಡಿದ ವ್ಯಕ್ತಿಯ ಮಖಕ್ಕೂ ಸಾಮ್ಯತೆಯೇ ಇಲ್ಲ ಎಂದು ನೆಟ್ಟಿಗರು ಹೇಳಿದ್ದಾರೆ. ಇದರಿಂದಾಗಿ ಮುಂಬೈ ಪೊಲೀಸರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಎದ್ದಿದೆ. ನಿಜವಾದ ಆರೋಪಿ ಎಲ್ಲಿದ್ದಾನೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us