AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್ ಅಲಿ ಖಾನ್ ಪ್ರಕರಣ: ಬೆಳ್ಳಂಬೆಳಿಗ್ಗೆ ಆರೋಪಿಯೊಬ್ಬನ ಬಂಧನ

Saif Ali Khan case: ಬಾಲಿವುಡ್ ನಟ ಸೈಫ್ ಅಲಿ ಖಾನ್​ಗೆ ಚಾಕು ಇರಿತ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಛತ್ತೀಸ್​ಘಡ ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮುಂಬೈನಲ್ಲಿಯೇ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೈಫ್ ಅಲಿ ಖಾನ್ ಪ್ರಕರಣ: ಬೆಳ್ಳಂಬೆಳಿಗ್ಗೆ ಆರೋಪಿಯೊಬ್ಬನ ಬಂಧನ
Saif Ali Khan
ಮಂಜುನಾಥ ಸಿ.
|

Updated on: Jan 19, 2025 | 8:03 AM

Share

ಸೈಫ್ ಅಲಿ ಖಾನ್ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಬೆಳ್ಳಂಬೆಳಿಗ್ಗೆ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಹೋಟೆಲ್ ಒಂದರಲ್ಲಿ ವೇಯಿಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ್ ದಾಸ್ ಹೆಸರಿನ ವ್ಯಕ್ತಿಯನ್ನು ಭಾನುವಾರ (ಜನವರಿ 19) ಬೆಳ್ಳಂಬೆಳಿಗ್ಗೆ ಪೊಲೀಸರು ಬಂಧಿಸಿರುವುದಾಗಿ ಎಎನ್ಐ ವರದಿ ಮಾಡಿದೆ. ಆರೋಪಿಯ ಚಿತ್ರವೂ ಬಹಿರಂಗಗೊಂಡಿದೆ. ಆದರೆ ಈತ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಆದರೆ ದಾಳಿ ಕೋರನಿಗೆ ಸಹಾಯ ಮಾಡಿದ ಹಾಗೂ ದಾಳಿಕೋರನ ಜೊತೆಗೆ ಸಂಪರ್ಕದಲ್ಲಿ ಇದ್ದ ವ್ಯಕ್ತಿ ಈತ ಎನ್ನಲಾಗಿದೆ.

ಸೈಫ್ ಅಲಿ ಖಾನ್​ ಮನೆಯಿಂದ 35 ಕಿ.ಮೀ ದೂರದಲ್ಲಿರುವ ಕಾಸರ್ವಾದಲಿಯ ಹೀರಾನಂದಾನಿ ಎಸ್ಟೇಟ್ ಬಳಿಯಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಆರೋಪಿ ವಿಜಯ್ ದಾಸ್ ಅನ್ನು ಬಂಧಿಸಲಾಗಿದೆ. ಸಿಕ್ಕಿ ಬೀಳುವ ಭಯದಲ್ಲಿ ಈತ ಹೆಸರು ಬದಲಾವಣೆ ಮಾಡಿಕೊಂಡಿದ್ದ ಹಾಗೂ ಮುಂಬೈನಿಂದ ಪರಾರಿಯಾಗುವ ಯತ್ನದಲ್ಲಿದ್ದ ಎನ್ನಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್​ಘಡದ ರೈಲ್ವೆ ನಿಲ್ದಾಣದಲ್ಲಿ ಆಕಾಶ ಕೈಲಾಶ್ ಕನ್ನೋಜಿಯಾ ಹೆಸರಿನ ಆರೋಪಿಯನ್ನು ಸಹ ಬಂಧಿಸಲಾಗಿದೆ. ಈಗ ಮುಂಬೈನಲ್ಲಿ ಒಬ್ಬಾತನ ಬಂಧನ ಆಗಿದೆ.

ಇದನ್ನೂ ಓದಿ:ಟ್ರೋಲ್ ಆದ ಬಳಿಕ ಸೈಫ್ ಅಲಿ ಖಾನ್ ಕ್ಷಮೆ ಕೇಳಿದ ಊರ್ವಶಿ ರೌಟೆಲಾ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶದಲ್ಲಿಯೂ ಆರೋಪಿಯೊಬ್ಬನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಆದರೆ ಮಧ್ಯ ಪ್ರದೇಶದಲ್ಲಿ ವಶಕ್ಕೆ ಪಡೆದ ವ್ಯಕ್ತಿಯನ್ನು ಬಂಧಿಸಲಾಗಿಲ್ಲ ಬದಲಿಗೆ ವಶಕ್ಕೆ ಪಡೆದು ವಿಚಾರಣೆಯನ್ನಷ್ಟೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಬುಧವಾರ ತಡರಾತ್ರಿ ಮುಂಬೈ ಬಾಂದ್ರಾದಲ್ಲಿನ ಸೈಫ್ ಅಲಿ ಖಾನ್​ರ ನಿವಾಸಕ್ಕೆ ನುಗ್ಗಿದ್ದ ಅಗಂತುಕನೊಬ್ಬ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದ. ಸೈಫ್ ಮೇಲೆ ಆರು ಬಾರಿ ಚಾಕುವಿನಿಂದ ದಾಳಿ ಮಾಡಿ ಗಾಯಗೊಳಿಸಿದ್ದ. ಕೂಡಲೇ ಸೈಫ್ ಅಲಿ ಖಾನ್ ಅನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ