AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೂರಿ ಇರಿತದ ಬಳಿಕ ಆಸ್ಪತ್ರೆಯಿಂದ ಸೈಫ್ ಅಲಿ ಖಾನ್ ಡಿಸ್ಚಾರ್ಜ್; ಫ್ಯಾನ್ಸ್ ನಿಟ್ಟುಸಿರು

ಚೂರಿ ಇರಿತದಲ್ಲಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರು ಬಹುತೇಕ ಚೇತರಿಸಿಕೊಂಡಿದ್ದಾರೆ. ಹಾಗಾಗಿ ಅಭಿಮಾನಿಗಳು ಆತಂಕಪಡುವ ಅಗತ್ಯ ಇಲ್ಲ. ಆಸ್ಪತ್ರೆಯಿಂದ ಹೊರಬರುವಾಗ ಸೈಫ್ ಅಲಿ ಖಾನ್ ಅವರು ನಗುತ್ತಾ ಜನರ ಕಡೆಗೆ ಕೈ ಬೀಸಿದ್ದಾರೆ. ಅವರ ಮುಖದಲ್ಲಿ ನಗು ನೋಡಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಚೂರಿ ಇರಿತದ ಬಳಿಕ ಆಸ್ಪತ್ರೆಯಿಂದ ಸೈಫ್ ಅಲಿ ಖಾನ್ ಡಿಸ್ಚಾರ್ಜ್; ಫ್ಯಾನ್ಸ್ ನಿಟ್ಟುಸಿರು
Saif Ali Khan
ಮದನ್​ ಕುಮಾರ್​
|

Updated on: Jan 21, 2025 | 6:05 PM

Share

ಕೆಲವೇ ದಿನಗಳ ಹಿಂದೆ ಸೈಫ್ ಅಲಿ ಖಾನ್ ಅವರ ಅಭಿಮಾನಿಗಳಿಗೆ ಕಹಿ ಸುದ್ದಿ ಕೇಳಿಬಂದಿತ್ತು. ಜನವರಿ 16ರಂದು ಸೈಫ್ ಮನೆಗೆ ಕಳ್ಳರು ನುಗ್ಗಿದ್ದರು. ಆ ವೇಳೆ ಸೈಫ್ ಅಲಿ ಖಾನ್​ಗೆ ಚಾಕು ಹಾಕಲಾಗಿತ್ತು. ಆ ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು (ಜನವರಿ 21) ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಮನೆಗೆ ಮರಳುತ್ತಿರುವ ವಿಡಿಯೋ ವೈರಲ್ ಆಗಿದೆ. ಸೈಫ್ ಅಲಿ ಖಾನ್ ಅವರ ಮನೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಸೈಫ್ ಅಲಿ ಖಾನ್ ಅವರಿಗೆ ಎರಡು ಮುಖ್ಯವಾದ ಸರ್ಜರಿ ಮಾಡಲಾಗಿದೆ. ಅವರ ಬೆನ್ನಿನಲ್ಲಿ ಇದ್ದ ಚಾಕು ಹೊರಗೆ ತೆಗೆಯಲಾಗಿದೆ. ಕುತ್ತಿಗೆ ಭಾಗದ ಗಾಯಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ ಎಂಬ ಮಾಹಿತಿ ಕೂಡ ಇದೆ. ಈ ಎಲ್ಲ ಚಿಕಿತ್ಸೆಗಳ ಸಲುವಾಗಿ ಸೈಫ್ ಅಲಿ ಖಾನ್ ಅವರು 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇದ್ದರು. ಈಗ ಅವರು ಬಹುತೇಕ ಚೇತರಿಸಿಕೊಂಡಿದ್ದು, ಮನೆಗೆ ಬಂದಿದ್ದಾರೆ.

ಚೂರಿ ಇರಿತದ ವಿವರಗಳನ್ನು ಕೇಳಿದ ಬಳಿಕ ಎಲ್ಲರಿಗೂ ಆತಂಕ ಆಗಿತ್ತು. ಸೈಫ್ ಅಲಿ ಖಾನ್ ಚೇತರಿಸಿಕೊಳ್ಳಲು ಇನ್ನೂ ಎಷ್ಟು ದಿನಗಳು ಬೇಕಾಗಬಹುದೋ ಎಂದು ಅಭಿಮಾನಿಗಳು ಚಿಂತಿಸಿದ್ದರು. ಅಲ್ಲದೇ, ಗಂಭೀರ ಸರ್ಜರಿ ಆಗಿರುವುದರಿಂದ ಅವರು ಮಾನಸಿಕವಾಗಿ ಕುಗ್ಗಿರಬಹುದು ಎಂದು ಕೂಡ ಊಹಿಸಲಾಗಿತ್ತು. ಆದರೆ ಸೈಫ್ ಅಲಿ ಖಾನ್ ಅವರು ನಗುಮುಖದೊಂದಿಗೆ ಆಸ್ಪತ್ರೆಯಿಂದ ಹೊರಗೆ ಬಂದಿದ್ದಾರೆ. ಪಾಪರಾಜಿಗಳ ಕಡೆಗೆ ಅವರು ಕೈ ಬೀಸಿದ್ದಾರೆ. ‘ಸೈಫ್ ಅವರು ಆಸ್ಪತ್ರೆಯಿಂದ ಅಲ್ಲ, ಶೂಟಿಂಗ್ ಮುಗಿಸಿ ಬಂದಂತೆ ಇದೆ’ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಸೈಫ್ ಆಸ್ಪತ್ರೆ ಸೇರಿಸಿದ ಆಟೋ ಚಾಲಕನಿ​ಗೆ ಸಿಕ್ತು ದೊಡ್ಡ ರಿವಾರ್ಡ್​

ಮುಂಬೈನ ಬಾಂದ್ರಾದಲ್ಲಿ ಇರುವ ಅಪಾರ್ಟ್​ಮೆಂಟ್​ನಲ್ಲಿ ಸೈಫ್ ಅಲಿ ಖಾನ್ ಅವರ ಕುಟುಂಬ ವಾಸವಾಗಿದೆ. ಸೆಲೆಬ್ರಿಟಿಯ ಮನೆಗೆ ಕಳ್ಳರು ನುಗ್ಗಿ ಈ ರೀತಿ ಅಟ್ಯಾಕ್ ಮಾಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಘಟನೆ ನಡೆದ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದರು. ಆತ ಬಾಂಗ್ಲಾದೇಶ ಮೂಲದವನು ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಪೂರ್ತಿ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?