AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೂರಿ ಇರಿತದ ಬಳಿಕ ಆಸ್ಪತ್ರೆಯಿಂದ ಸೈಫ್ ಅಲಿ ಖಾನ್ ಡಿಸ್ಚಾರ್ಜ್; ಫ್ಯಾನ್ಸ್ ನಿಟ್ಟುಸಿರು

ಚೂರಿ ಇರಿತದಲ್ಲಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರು ಬಹುತೇಕ ಚೇತರಿಸಿಕೊಂಡಿದ್ದಾರೆ. ಹಾಗಾಗಿ ಅಭಿಮಾನಿಗಳು ಆತಂಕಪಡುವ ಅಗತ್ಯ ಇಲ್ಲ. ಆಸ್ಪತ್ರೆಯಿಂದ ಹೊರಬರುವಾಗ ಸೈಫ್ ಅಲಿ ಖಾನ್ ಅವರು ನಗುತ್ತಾ ಜನರ ಕಡೆಗೆ ಕೈ ಬೀಸಿದ್ದಾರೆ. ಅವರ ಮುಖದಲ್ಲಿ ನಗು ನೋಡಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಚೂರಿ ಇರಿತದ ಬಳಿಕ ಆಸ್ಪತ್ರೆಯಿಂದ ಸೈಫ್ ಅಲಿ ಖಾನ್ ಡಿಸ್ಚಾರ್ಜ್; ಫ್ಯಾನ್ಸ್ ನಿಟ್ಟುಸಿರು
Saif Ali Khan
ಮದನ್​ ಕುಮಾರ್​
|

Updated on: Jan 21, 2025 | 6:05 PM

Share

ಕೆಲವೇ ದಿನಗಳ ಹಿಂದೆ ಸೈಫ್ ಅಲಿ ಖಾನ್ ಅವರ ಅಭಿಮಾನಿಗಳಿಗೆ ಕಹಿ ಸುದ್ದಿ ಕೇಳಿಬಂದಿತ್ತು. ಜನವರಿ 16ರಂದು ಸೈಫ್ ಮನೆಗೆ ಕಳ್ಳರು ನುಗ್ಗಿದ್ದರು. ಆ ವೇಳೆ ಸೈಫ್ ಅಲಿ ಖಾನ್​ಗೆ ಚಾಕು ಹಾಕಲಾಗಿತ್ತು. ಆ ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು (ಜನವರಿ 21) ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಮನೆಗೆ ಮರಳುತ್ತಿರುವ ವಿಡಿಯೋ ವೈರಲ್ ಆಗಿದೆ. ಸೈಫ್ ಅಲಿ ಖಾನ್ ಅವರ ಮನೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಸೈಫ್ ಅಲಿ ಖಾನ್ ಅವರಿಗೆ ಎರಡು ಮುಖ್ಯವಾದ ಸರ್ಜರಿ ಮಾಡಲಾಗಿದೆ. ಅವರ ಬೆನ್ನಿನಲ್ಲಿ ಇದ್ದ ಚಾಕು ಹೊರಗೆ ತೆಗೆಯಲಾಗಿದೆ. ಕುತ್ತಿಗೆ ಭಾಗದ ಗಾಯಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ ಎಂಬ ಮಾಹಿತಿ ಕೂಡ ಇದೆ. ಈ ಎಲ್ಲ ಚಿಕಿತ್ಸೆಗಳ ಸಲುವಾಗಿ ಸೈಫ್ ಅಲಿ ಖಾನ್ ಅವರು 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇದ್ದರು. ಈಗ ಅವರು ಬಹುತೇಕ ಚೇತರಿಸಿಕೊಂಡಿದ್ದು, ಮನೆಗೆ ಬಂದಿದ್ದಾರೆ.

ಚೂರಿ ಇರಿತದ ವಿವರಗಳನ್ನು ಕೇಳಿದ ಬಳಿಕ ಎಲ್ಲರಿಗೂ ಆತಂಕ ಆಗಿತ್ತು. ಸೈಫ್ ಅಲಿ ಖಾನ್ ಚೇತರಿಸಿಕೊಳ್ಳಲು ಇನ್ನೂ ಎಷ್ಟು ದಿನಗಳು ಬೇಕಾಗಬಹುದೋ ಎಂದು ಅಭಿಮಾನಿಗಳು ಚಿಂತಿಸಿದ್ದರು. ಅಲ್ಲದೇ, ಗಂಭೀರ ಸರ್ಜರಿ ಆಗಿರುವುದರಿಂದ ಅವರು ಮಾನಸಿಕವಾಗಿ ಕುಗ್ಗಿರಬಹುದು ಎಂದು ಕೂಡ ಊಹಿಸಲಾಗಿತ್ತು. ಆದರೆ ಸೈಫ್ ಅಲಿ ಖಾನ್ ಅವರು ನಗುಮುಖದೊಂದಿಗೆ ಆಸ್ಪತ್ರೆಯಿಂದ ಹೊರಗೆ ಬಂದಿದ್ದಾರೆ. ಪಾಪರಾಜಿಗಳ ಕಡೆಗೆ ಅವರು ಕೈ ಬೀಸಿದ್ದಾರೆ. ‘ಸೈಫ್ ಅವರು ಆಸ್ಪತ್ರೆಯಿಂದ ಅಲ್ಲ, ಶೂಟಿಂಗ್ ಮುಗಿಸಿ ಬಂದಂತೆ ಇದೆ’ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಸೈಫ್ ಆಸ್ಪತ್ರೆ ಸೇರಿಸಿದ ಆಟೋ ಚಾಲಕನಿ​ಗೆ ಸಿಕ್ತು ದೊಡ್ಡ ರಿವಾರ್ಡ್​

ಮುಂಬೈನ ಬಾಂದ್ರಾದಲ್ಲಿ ಇರುವ ಅಪಾರ್ಟ್​ಮೆಂಟ್​ನಲ್ಲಿ ಸೈಫ್ ಅಲಿ ಖಾನ್ ಅವರ ಕುಟುಂಬ ವಾಸವಾಗಿದೆ. ಸೆಲೆಬ್ರಿಟಿಯ ಮನೆಗೆ ಕಳ್ಳರು ನುಗ್ಗಿ ಈ ರೀತಿ ಅಟ್ಯಾಕ್ ಮಾಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಘಟನೆ ನಡೆದ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದರು. ಆತ ಬಾಂಗ್ಲಾದೇಶ ಮೂಲದವನು ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಪೂರ್ತಿ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ