ಸೈಫ್​ ಅಲಿ ಖಾನ್​ಗೆ ಯಾಕೆ ಈ ಗತಿ? ಕಳೆದೇ ಹೋಯ್ತು ಫಿಟ್​ನೆಸ್​​

ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಮಾಡಿರುವ ‘ಬಂಟಿ ಔರ್​ ಬಬ್ಲಿ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸೈಫ್​ ಅವರು ರಾಕೇಶ್​ ಅಲಿಯಾಸ್​ ಬಂಟಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸೈಫ್​ ಅಲಿ ಖಾನ್​ಗೆ ಯಾಕೆ ಈ ಗತಿ? ಕಳೆದೇ ಹೋಯ್ತು ಫಿಟ್​ನೆಸ್​​
ಸೈಫ್​ ಅಲಿ ಖಾನ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 23, 2021 | 2:51 PM

ಸಿನಿಮಾಗಾಗಿ ತೂಕ ಹೆಚ್ಚಿಸಿಕೊಳ್ಳೋಕೆ ಎಲ್ಲಾ ನಟರು ಒಪ್ಪುವುದಿಲ್ಲ. ಏಕೆಂದರೆ, ಅದಕ್ಕಾಗಿ ಹೆಚ್ಚು ಶ್ರಮ ಹಾಕಬೇಕು. ಈ ರೀತಿಯ ಪಾತ್ರಗಳಲ್ಲಿ ನಟಿಸುವಾಗ ಬೇರೆ ಸಿನಿಮಾಗಳಲ್ಲಿ ನಟಿಸೋಕೆ ಸಾಧ್ಯವಾಗುವುದಿಲ್ಲ. ಆದರೆ, ಈಗ ಸೈಫ್​ ಅಲಿ ಖಾನ್ ಹೀಗೊಂದು ಚಾಲೆಂಜಿಂಗ್​ ಪಾತ್ರ ಒಪ್ಪಿಕೊಂಡು ನಟಿಸಿದ್ದಾರೆ. ಈ ಫೋಟೋ ಈಗ ವೈರಲ್​ ಆಗಿದೆ. ಇದನ್ನು ನೋಡಿ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ.

‘ಹಮ್​ ತುಮ್’​, ‘ತಾ ರಾ ರಮ್​ ಪಮ್​’ ಸಿನಿಮಾದಲ್ಲಿ ಸೈಫ್​ ಅಲಿ ಖಾನ್​ ಹಾಗೂ ರಾಣಿ ಮುಖರ್ಜಿ ಒಟ್ಟಾಗಿ ನಟಿಸಿದ್ದರು. ಈ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು. ಈಗ ಈ ಜೋಡಿ ಮತ್ತೆ ಒಂದಾಗಿದೆ. ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಮಾಡಿರುವ ‘ಬಂಟಿ ಔರ್​ ಬಬ್ಲಿ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸೈಫ್​ ಅವರು ರಾಕೇಶ್​ ಅಲಿಯಾಸ್​ ಬಂಟಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಕಾಮಿಡಿ ಕಥಾ ಹಂದರ ಹೊಂದಿದ್ದು, ಸೈಫ್​ ಅವರು ರೈಲ್ವೇ ಟಿಕೆಟ್​ ಕಲೆಕ್ಟರ್​ ಆಗಿ ಕಾಣಿಸಿಕೊಂಡಿದ್ದಾರೆ. ಫುರಸತ್​ಗಂಜ್​ನಲ್ಲಿ ಈ ಸಿನಿಮಾದ ಕಥೆ ಸಾಗಲಿದೆ.

ಸೈಫ್​ ಅವರು ಈ ಸಿನಿಮಾಗಾಗಿ ಸಾಕಷ್ಟು ದೇಹದ ತೂಕ ಹೆಚ್ಚಿಸಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್​ ರಿಲೀಸ್​ ಆಗಿದೆ. ಫ್ಯಾಮಿಲಿ ಡ್ರಾಮಾ ಕೂಡ ಈ ಸಿನಿಮಾದಲ್ಲಿ ಇರಲಿದೆ.  ಅವರ ವೃತ್ತಿ ಬದುಕಿನಲ್ಲಿ ಇದು ಭಿನ್ನ ಸಿನಿಮಾ ಆಗಿರಲಿದೆ. ‘ಈ ಚಿತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡೆ. ನಂತರ ಉಳಿದ ಸಿನಿಮಾ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವ ಕಾರಣಕ್ಕೆ ಬೇಗನೆ ತೂಕ ಇಳಿಸಿಕೊಂಡೆ. ಇದು ಕಷ್ಟದ ಪ್ರಕ್ರಿಯೆ​ ಆಗಿತ್ತು’ ಎಂದಿದ್ದಾರೆ ಅವರು.

‘ಬಂಟಿ ಔರ್​ ಬಬ್ಲಿ 2’ ಸೈಫ್​ ಜತೆಗೆ ರಾಣಿ ಮುಖರ್ಜಿ ನಟಿಸಿದ್ದಾರೆ. ನವೆಂಬರ್​ 19ರಂದು ಸಿನಿಮಾ ತೆರೆಗೆ ಬರುತ್ತಿದೆ. ವರುಣ್​ ವಿ. ಶರ್ಮಾ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಸುಲ್ತಾನ್​’ ಮತ್ತು ಟೈಗರ್​ ಜಿಂದಾ ಹೈ ಸಿನಿಮಾಗೆ ವರುಣ್​ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅಕ್ಟೋಬರ್ 25ರಂದು ಸಿನಿಮಾದ ಟ್ರೇಲರ್ ರಿಲೀಸ್​ ಆಗಲಿದೆ.

ಇದನ್ನೂ ಓದಿ: ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​

ಯಶ್​ ರಿಜೆಕ್ಟ್​ ಮಾಡಿದ್ದ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟಿಸಿ ಹೀನಾಯವಾಗಿ ಸೋತರು; ಯಾವುದು ಆ ಸಿನಿಮಾ?

Published On - 2:48 pm, Sat, 23 October 21

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ