AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್​ ಅಲಿ ಖಾನ್​ಗೆ ಯಾಕೆ ಈ ಗತಿ? ಕಳೆದೇ ಹೋಯ್ತು ಫಿಟ್​ನೆಸ್​​

ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಮಾಡಿರುವ ‘ಬಂಟಿ ಔರ್​ ಬಬ್ಲಿ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸೈಫ್​ ಅವರು ರಾಕೇಶ್​ ಅಲಿಯಾಸ್​ ಬಂಟಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸೈಫ್​ ಅಲಿ ಖಾನ್​ಗೆ ಯಾಕೆ ಈ ಗತಿ? ಕಳೆದೇ ಹೋಯ್ತು ಫಿಟ್​ನೆಸ್​​
ಸೈಫ್​ ಅಲಿ ಖಾನ್​
TV9 Web
| Edited By: |

Updated on:Oct 23, 2021 | 2:51 PM

Share

ಸಿನಿಮಾಗಾಗಿ ತೂಕ ಹೆಚ್ಚಿಸಿಕೊಳ್ಳೋಕೆ ಎಲ್ಲಾ ನಟರು ಒಪ್ಪುವುದಿಲ್ಲ. ಏಕೆಂದರೆ, ಅದಕ್ಕಾಗಿ ಹೆಚ್ಚು ಶ್ರಮ ಹಾಕಬೇಕು. ಈ ರೀತಿಯ ಪಾತ್ರಗಳಲ್ಲಿ ನಟಿಸುವಾಗ ಬೇರೆ ಸಿನಿಮಾಗಳಲ್ಲಿ ನಟಿಸೋಕೆ ಸಾಧ್ಯವಾಗುವುದಿಲ್ಲ. ಆದರೆ, ಈಗ ಸೈಫ್​ ಅಲಿ ಖಾನ್ ಹೀಗೊಂದು ಚಾಲೆಂಜಿಂಗ್​ ಪಾತ್ರ ಒಪ್ಪಿಕೊಂಡು ನಟಿಸಿದ್ದಾರೆ. ಈ ಫೋಟೋ ಈಗ ವೈರಲ್​ ಆಗಿದೆ. ಇದನ್ನು ನೋಡಿ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ.

‘ಹಮ್​ ತುಮ್’​, ‘ತಾ ರಾ ರಮ್​ ಪಮ್​’ ಸಿನಿಮಾದಲ್ಲಿ ಸೈಫ್​ ಅಲಿ ಖಾನ್​ ಹಾಗೂ ರಾಣಿ ಮುಖರ್ಜಿ ಒಟ್ಟಾಗಿ ನಟಿಸಿದ್ದರು. ಈ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು. ಈಗ ಈ ಜೋಡಿ ಮತ್ತೆ ಒಂದಾಗಿದೆ. ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಮಾಡಿರುವ ‘ಬಂಟಿ ಔರ್​ ಬಬ್ಲಿ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸೈಫ್​ ಅವರು ರಾಕೇಶ್​ ಅಲಿಯಾಸ್​ ಬಂಟಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಕಾಮಿಡಿ ಕಥಾ ಹಂದರ ಹೊಂದಿದ್ದು, ಸೈಫ್​ ಅವರು ರೈಲ್ವೇ ಟಿಕೆಟ್​ ಕಲೆಕ್ಟರ್​ ಆಗಿ ಕಾಣಿಸಿಕೊಂಡಿದ್ದಾರೆ. ಫುರಸತ್​ಗಂಜ್​ನಲ್ಲಿ ಈ ಸಿನಿಮಾದ ಕಥೆ ಸಾಗಲಿದೆ.

ಸೈಫ್​ ಅವರು ಈ ಸಿನಿಮಾಗಾಗಿ ಸಾಕಷ್ಟು ದೇಹದ ತೂಕ ಹೆಚ್ಚಿಸಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್​ ರಿಲೀಸ್​ ಆಗಿದೆ. ಫ್ಯಾಮಿಲಿ ಡ್ರಾಮಾ ಕೂಡ ಈ ಸಿನಿಮಾದಲ್ಲಿ ಇರಲಿದೆ.  ಅವರ ವೃತ್ತಿ ಬದುಕಿನಲ್ಲಿ ಇದು ಭಿನ್ನ ಸಿನಿಮಾ ಆಗಿರಲಿದೆ. ‘ಈ ಚಿತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡೆ. ನಂತರ ಉಳಿದ ಸಿನಿಮಾ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವ ಕಾರಣಕ್ಕೆ ಬೇಗನೆ ತೂಕ ಇಳಿಸಿಕೊಂಡೆ. ಇದು ಕಷ್ಟದ ಪ್ರಕ್ರಿಯೆ​ ಆಗಿತ್ತು’ ಎಂದಿದ್ದಾರೆ ಅವರು.

‘ಬಂಟಿ ಔರ್​ ಬಬ್ಲಿ 2’ ಸೈಫ್​ ಜತೆಗೆ ರಾಣಿ ಮುಖರ್ಜಿ ನಟಿಸಿದ್ದಾರೆ. ನವೆಂಬರ್​ 19ರಂದು ಸಿನಿಮಾ ತೆರೆಗೆ ಬರುತ್ತಿದೆ. ವರುಣ್​ ವಿ. ಶರ್ಮಾ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಸುಲ್ತಾನ್​’ ಮತ್ತು ಟೈಗರ್​ ಜಿಂದಾ ಹೈ ಸಿನಿಮಾಗೆ ವರುಣ್​ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅಕ್ಟೋಬರ್ 25ರಂದು ಸಿನಿಮಾದ ಟ್ರೇಲರ್ ರಿಲೀಸ್​ ಆಗಲಿದೆ.

ಇದನ್ನೂ ಓದಿ: ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​

ಯಶ್​ ರಿಜೆಕ್ಟ್​ ಮಾಡಿದ್ದ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟಿಸಿ ಹೀನಾಯವಾಗಿ ಸೋತರು; ಯಾವುದು ಆ ಸಿನಿಮಾ?

Published On - 2:48 pm, Sat, 23 October 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್