Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಪಾಡಿಗೆ ನಮ್ಮ ಬಿಟ್ಟು ಬಿಡಿ’; ಕೈ ಮುಗಿದು ಕೋರಿದ ಕರೀನಾ ಕಪೂರ್

ಸೈಫ್ ಅಲಿ ಖಾನ್ ಅವರು ಚಾಕುವಿನಿಂದ ಇರಿತಕ್ಕೆ ಒಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೀನಾ ಕಪೂರ್ ಅವರು ಪಾಪರಾಜಿಗಳ ಕೆಲಸಕ್ಕೆ ಸಿಟ್ಟಾಗಿದ್ದು, ಖಾಸಗಿತನಕ್ಕೆ ಗೌರವ ನೀಡುವಂತೆ ಮನವಿ ಮಾಡಿದ್ದಾರೆ. ಸೈಫ್ ಅವರ ಚೇತರಿಕೆಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ .

‘ನಮ್ಮ ಪಾಡಿಗೆ ನಮ್ಮ ಬಿಟ್ಟು ಬಿಡಿ’; ಕೈ ಮುಗಿದು ಕೋರಿದ ಕರೀನಾ ಕಪೂರ್
ಕರೀನಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jan 21, 2025 | 10:58 AM

ಸೈಫ್ ಅಲಿ ಖಾನ್ ಅವರು ಸದ್ಯ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಕುವಿನಿಂದ ಇರಿತಕ್ಕೆ ಒಳಗಾದ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಕಳ್ಳ ಮಾಡಿದ ಅವಾಂತರದಿಂದ ಸೈಫ್ ಕುಟುಂಬ ಇಷ್ಟೆಲ್ಲ ಸಮಸ್ಯೆ ಎದುರಿಸಬೇಕಾಯಿತು. ಅವರಿಗೆ ಏನಾಗಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇದೆ. ಅವರ ಆರೋಗ್ಯದ ಬಗ್ಗೆ ಪದೇ ಪದೇ ಅಪ್​ಡೇಟ್ ಕೇಳಲಾಗುತ್ತಿದೆ. ಇದನ್ನು ಕೊಡಲು ಪಾಪರಾಜಿಗಳು ಕೂಡ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಕರೀನಾ ಕಪೂರ್ ಸಿಟ್ಟಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಕರೀನಾ ಕಪೂರ್ ಅವರು ಸದ್ಯ ಟೆನ್ಷನ್​ನಲ್ಲಿ ಇದ್ದಾರೆ. ಕುಟುಂಬಕ್ಕೆ ಈ ಪರಿಸ್ಥಿತಿ ಬಂದಿರುವುದರಿಂದ ಅವರು ಸಾಕಷ್ಟು ಆಘಾತದಲ್ಲಿ ಇದ್ದಾರೆ. ಅವರ ಕುಟುಂಬ ಕಷ್ಟದಲ್ಲಿ ಇದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ಖಾಸಗಿತನಕ್ಕೆ ಗೌರವ ನೀಡಿ ಎಂದು ಕೋರಿದ್ದಾರೆ. ಆದರೆ, ಇದನ್ನು ಯಾರೂ ಪಾಲಿಸುತ್ತಿಲ್ಲ.

ಕರೀನಾ ಮನೆಗೆ ಆಟಿಕೆ ತರುತ್ತಿರುವುದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋನ ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ‘ತೈಮೂರ್ ಹಾಗೂ ಜೇ ಅಲಿಗೆ ಹೊಸ ಆಟಿಕೆ’ ಎಂದು ವಿಡಿಯೋಗೆ ಕ್ಯಾಪ್ಶನ್ ನೀಡಲಾಗಿತ್ತು. ಇದು ಕರೀನಾ ಗಮನಕ್ಕೆ ಬಂದಿದೆ. ‘ಇದನ್ನು ಈಗಲೇ ನಿಲ್ಲಿಸಿ. ನಿಮಗೆ ಹೃದಯ ಇದೆಯೇ? ನಮ್ಮನ್ನು ಒಂಟಿಯಾಗಿ ಇರಲು ಬಿಡಿ’ ಎಂದು ಕರೀನಾ ಸಿಟ್ಟಲ್ಲಿ ಬರೆದುಕೊಂಡಿದ್ದರು. ಇದಕ್ಕೆ ನಮಸ್ಕರಿಸುತ್ತಿರುವ ಎಮೋಜಿ ಕೂಡ ಹಾಕಿದ್ದಾರೆ. ಆ ಬಳಿಕ ಏನನ್ನಿಸಿತೋ ಏನೋ ನಂತರ ಅದನ್ನು ಡಿಲೀಟ್ ಮಾಡಿದ್ದಾರೆ.

ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ಮಕ್ಕಳಾದ ತೈಮೂರ್ ಹಾಗೂ ಜೇ ಅಲಿ ಖಾನ್ ಇತ್ತೀಚೆಗೆ ಆಸ್ಪತ್ರೆಗೆ ಬಂದು ತಂದೆಯ ಆರೋಗ್ಯ ವಿಚಾರಿಸಿದ್ದರು. ಇವರ ಜೊತೆ ಸೈಫ್ ಸಹೋದರಿ ಸೋಹಾ ಅಲಿ ಖಾನ್ ಕೂಡ ಆಗಮಿಸಿದ್ದರು. ಸೈಫ್ ತಾಯಿ ಶರ್ಮಿಳಾ ಟಾಗೋರ್ ಕೂಡ ಇತ್ತೀಚೆಗೆ ಆಗಮಿಸಿ ಮಗನ ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ:  ಚಾಕು ಇರಿತದಿಂದ ಸೈಫ್ ಅಲಿ ಖಾನ್​ ಸ್ಥಿತಿ ಗಂಭೀರ; ನಟಿ ಕರೀನಾ ಕಪೂರ್ ಬಚಾವ್ ಆಗಿದ್ದು ಹೇಗೆ?

ಮೊಹಮದ್ ಶೈಫುಲ್ಲಾ ಇಸ್ಲಾಮ್ ಶಹಜಾದ್ ಎಂಬಾತ ಸೈಫ್ ಮೇಲೆ ದಾಳಿ ಮಾಡಿದವನು. ಅವನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆತ ದಾಳಿ ಮಾಡಿದ್ದನ್ನು ಒಪ್ಪಿಕೊಡಿದ್ದಾನೆ.

ಸೈಫ್ ಅಲಿ ಖಾನ್ ಅವರು ಚೇತರಿಕೆಯ ಹಂತದಲ್ಲಿ ಇದ್ದಾರೆ. ಶೀಘ್ರವೇ ಅವರು ನಟನೆಗೆ ಮರಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈಗಾಗಲೇ ಒಂದು ಆಪರೇಷನ್ ನಡೆಸಿದ್ದು, 35 ಲಕ್ಷ ರೂಪಾಯಿ ಬಿಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ