AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಯಾಗಿ ಹಿಂದಿ ತಿಳಿಯದ ಸೈಫ್​ಗೆ ತಾಯಿ ಶರ್ಮಿಳಾ ಕ್ಲಾಸ್​; ವಿಡಿಯೋ ವೈರಲ್​

‘ಎಕ್ಸ್​ಕ್ಯೂಸ್​ ಮೀ.. ನೀನು ಹಿಂದಿ ನಟ. ಪುತ್ರ ಎಂಬ ಪದದ ಅರ್ಥ ನಿನಗೆ ಗೊತ್ತಿಲ್ಲವೇ’ ಎಂದು ಶರ್ಮಿಳಾ ಪ್ರಶ್ನಿಸಿದ್ದಾರೆ. ಜನಪ್ರಿಯ ಕಾರ್ಯಕ್ರಮದ ವೇದಿಕೆಯಲ್ಲಿ ಯಾವ ಮುಲಾಜೂ ಇಲ್ಲದೇ ಮಗನಿಗೆ ಅವರು ಪಾಠ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ಸೈಫ್ ಅಲಿ ಖಾನ್​ ಅವರನ್ನು ಜನರು ಟ್ರೋಲ್​ ಮಾಡುತ್ತಿದ್ದಾರೆ.

ಸರಿಯಾಗಿ ಹಿಂದಿ ತಿಳಿಯದ ಸೈಫ್​ಗೆ ತಾಯಿ ಶರ್ಮಿಳಾ ಕ್ಲಾಸ್​; ವಿಡಿಯೋ ವೈರಲ್​
ಸೈಫ್​ ಅಲಿ ಖಾನ್​, ಶರ್ಮಿಳಾ ಟ್ಯಾಗೋರ್​
ಮದನ್​ ಕುಮಾರ್​
|

Updated on:Dec 31, 2023 | 1:58 PM

Share

ಕರಣ್​ ಜೋಹರ್​ ನಡೆಸಿಕೊಡುವ ‘ಕಾಫಿ ವಿತ್​ ಕರಣ್​’ (Koffee With Karan) ಕಾರ್ಯಕ್ರಮಕ್ಕೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಪ್ರತಿ ಎಪಿಸೋಡ್​ನಲ್ಲಿ ಒಂದಲ್ಲ ಒಂದು ಕಾಂಟ್ರವರ್ಸಿ ಆಗುತ್ತದೆ. ಇತ್ತೀಚೆಗೆ ಈ ಶೋನಲ್ಲಿ ಭಾಗವಹಿಸಿದ್ದ ನಟ ಸೈಫ್​ ಅಲಿ ಖಾನ್​ (Saif Ali Khan) ಅವರು ಭಾರಿ ಟೀಕೆಗೆ ಒಳಗಾಗುತ್ತಿದ್ದಾರೆ. ಅವರಿಗೆ ಸರಿಯಾಗಿ ಹಿಂದಿ ಭಾಷೆಯ ಬಗ್ಗೆ ತಿಳಿವಳಿಕೆ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಆ ಕಾರಣಕ್ಕಾಗಿ ಸೈಫ್​ ಅಲಿ ಖಾನ್​ ಮಾತ್ರವಲ್ಲದೇ ಕರಣ್​ ಜೋಹರ್​ ಕೂಡ ಟ್ರೋಲ್​ ಆಗುತ್ತಿದ್ದಾರೆ. ಇಬ್ಬರಿಗೂ ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ (Sharmila Tagore) ಛಾಟಿ ಬೀಸಿದ್ದಾರೆ. ಆ ವಿಡಿಯೋ ವೈರಲ್​ ಆಗುತ್ತಿದೆ.

ಸೈಫ್​ ಅಲಿ ಖಾನ್​ ಮತ್ತು ಅವರ ತಾಯಿ ಶರ್ಮಿಳಾ ಟ್ಯಾಗೋರ್ ಜೊತೆಯಾಗಿ ‘ಕಾಫಿ ವಿತ್​ ಕರಣ್​’ ಶೋನಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಸೈಫ್​ ಜೊತೆ ತಮ್ಮ ಬಾಂಧವ್ಯ ಹೇಗಿದೆ ಎಂಬುದನ್ನು ತಿಳಿಸುವಾಗ ‘ಪುತ್ರ ಮೋಹ್​’ ಎಂಬ ಹಿಂದಿ ಪದವನ್ನು ಶರ್ಮಿಳಾ ಬಳಸಿದ್ದಾರೆ. ಇದರ ಅರ್ಥ ಏನು ಎಂಬುದು ಸೈಫ್​ ಮತ್ತು ಕರಣ್​ ಜೋಹರ್​ ಅವರಿಗೆ ತಿಳಿದಿಲ್ಲ! ಅದರಿಂದ ಶರ್ಮಿಳಾಗೆ ಅಚ್ಚರಿ ಆಗಿದೆ.

‘ಮೋಹ್​’ ಎಂಬುದನ್ನು ಬೆಂಗಾಲಿ ಪದ ಇರಬಹುದು ಎಂದು ಸೈಫ್​ ಊಹಿಸಿದ್ದಾರೆ. ಕರಣ್​ ಜೋಹರ್​ ಕೂಡ ಅದಕ್ಕೆ ಸಹಮತ ಸೂಚಿಸಿದ್ದಾರೆ. ‘ಎಕ್ಸ್​ಕ್ಯೂಸ್​ ಮೀ.. ನೀನು ಹಿಂದಿ ನಟ. ಪುತ್ರ ಎಂಬ ಪದದ ಅರ್ಥ ನಿನಗೆ ಗೊತ್ತಿಲ್ಲವೇ’ ಎಂದು ಶರ್ಮಿಳಾ ಖಡಕ್​ ಆಗಿ ಪ್ರಶ್ನಿಸಿದ್ದಾರೆ. ಈ ಜನಪ್ರಿಯ ಕಾರ್ಯಕ್ರಮದ ವೇದಿಕೆಯಲ್ಲಿ ಯಾವ ಮುಲಾಜೂ ಇಲ್ಲದೇ ಮಗನಿಗೆ ಅವರು ಪಾಠ ಮಾಡಿದ್ದಾರೆ. ಪುತ್ರ ಮೋಹ್​ ಎಂದರೆ ಮಗನ ಜೊತೆಗಿನ ಬಾಂಧವ್ಯ ಎಂದು ಅವರು ತಿಳಿಸಿ ಹೇಳಿದ್ದಾರೆ.

ಇದನ್ನೂ ಓದಿ: ತಾಯಿ ಎದುರಲ್ಲಿ ಹೆಂಡತಿ ಬಗ್ಗೆ ಪ್ರಶ್ನೆ ಕೇಳಿದ ಕರಣ್​ ಜೋಹರ್​; ಸೈಫ್​​ಗೆ ಮುಜುಗರ

ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುವ ಬಹುತೇಕರು ಇಂಗ್ಲಿಷ್​ ವ್ಯಾಮೋಹ ಹೊಂದಿದ್ದಾರೆ. ತಮಗೆ ಸರಿಯಾಗಿ ಹಿಂದಿ ಬರುವುದಿಲ್ಲ ಎಂಬುದನ್ನು ಅವರು ಕೂಲ್​ ಆಗಿ ಪರಿಗಣಿಸಿದ್ದಾರೆ. ಇಂಥ ನಟ-ನಟಿಯರು ಮತ್ತು ತಂತ್ರಜ್ಞರನ್ನು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ‘ಜೀವನ ಕಟ್ಟಿಕೊಳ್ಳಲು ಹಿಂದಿ ಚಿತ್ರರಂಗ ಬೇಕು. ಆದರೆ ನಿಮಗೆ ಸರಿಯಾಗಿ ಹಿಂದಿ ಕಲಿಯಲು ಮನಸ್ಸು ಇಲ್ಲ’ ಎಂದು ಜನರು ಛಾಟಿ ಬೀಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:32 pm, Sun, 31 December 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು