AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ಸೆಲ್ಫಿ ಕಾಟಕ್ಕೆ ಜಾರಿ ಬೀಳುವಂತಾದ ನಟ ಸೈಫ್​ ಅಲಿ ಖಾನ್​

ಸೈಫ್​ ಅಲಿ ಖಾನ್​ ಅಲ್ಲದೇ ಈ ಜಾಗದಲ್ಲಿ ಬೇರೆ ಯಾವುದಾದರೂ ಸೆಲೆಬ್ರಿಟಿ ಇದ್ದಿದ್ದರೆ ಕೋಪ ಮಾಡಿಕೊಳ್ಳುವ ಸಾಧ್ಯತೆ ಇತ್ತು. ಆದರೆ ಸೈಫ್ ಹಾಗೆ ಮಾಡಿಲ್ಲ. ಕೂಲ್​ ಆಗಿಯೇ ಅವರು ನಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಭಿಮಾನಿಯ ಸೆಲ್ಫಿ ಕಾಟಕ್ಕೆ ಜಾರಿ ಬೀಳುವಂತಾದ ನಟ ಸೈಫ್​ ಅಲಿ ಖಾನ್​
ಸೈಫ್​ ಅಲಿ ಖಾನ್​ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​
ಮದನ್​ ಕುಮಾರ್​
|

Updated on:Nov 07, 2023 | 7:57 PM

Share

ನಟ ಸೈಫ್​ ಅಲಿ ಖಾನ್​ (Saif Ali Khan) ಅವರಿಗೆ ಬಾಲಿವುಡ್​ನಲ್ಲಿ ಸಖತ್ ಬೇಡಿಕೆ ಇದೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ಕಾರಣಗಳಿಂದಲೂ ಸೈಫ್​ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಎಲ್ಲೆ ಹೋದರೂ ಕೂಡ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬೀಳುತ್ತಾರೆ. ಇದರಿಂದ ಕೆಲವೊಮ್ಮೆ ಅವರಿಗೆ ಕಿರಿಕಿರಿ ಉಂಟಾಗುತ್ತದೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಇಲ್ಲಿದೆ. ಸೈಫ್​ ಅಲಿ ಖಾನ್​ ಜೊತೆ ಸೆಲ್ಫಿ (Selfie) ತೆಗೆದುಕೊಳ್ಳಲು ಬಂದ ಓರ್ವ ವ್ಯಕ್ತಿಯಿಂದಾಗಿ ಅವರು ಜಾರಿ ಬೀಳಬಹುದಾದ ಸಂದರ್ಭ ಎದುರಾಗಿದೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಕಟ್ಟಡವೊಂದರ ಪಾರ್ಕಿಂಗ್​ ಜಾಗದಲ್ಲಿ ಸೈಫ್​ ಅಲಿ ಖಾನ್​ ನಡೆದುಕೊಂಡು ಬರುವಾಗ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳ ಮುಗಿಬಿದ್ದಿದ್ದಾರೆ. ಸೈಫ್​ ಜೊತೆ ಅವರ ಬಾಡಿ ಗಾರ್ಡ್ಸ್​ ಕೂಡ ಇದ್ದರು. ಹಾಗಿದ್ದರೂ ಕೂಡ ಸೆಲ್ಫಿ ಪಡೆಯಲು ಕೆಲವರು ನೂಕು ನುಗ್ಗಲು ಮಾಡಿದರು. ಮಾತನಾಡುತ್ತಲೇ ನಡೆದುಬರುವಾಗ ಒಬ್ಬ ಅಭಿಮಾನಿ ಅಡ್ಡ ಬಂದಿದ್ದಾನೆ. ಇದರಿಂದ ಸೈಫ್​ ಅಲಿ ಖಾನ್​ ಎಡವಿದ್ದಾರೆ. ಪುಣ್ಯಕ್ಕೆ ಅವರು ನೆಲದ ಮೇಲೆ ಬಿದ್ದಿಲ್ಲ. ‘ಹುಷಾರು..’ ಎಂದು ಹೇಳುತ್ತಲೇ ಅವರು ಮುಂದೆ ಸಾಗಿದ್ದಾರೆ.

ಇದನ್ನೂ ಓದಿ: ಚೆನ್ನೈನಲ್ಲಿ ಕಮಲ್​ ಹಾಸನ್​ ಬರ್ತ್​ಡೇ ಪಾರ್ಟಿಗೆ ಹಾಜರಿ ಹಾಕಿದ ಆಮಿರ್​ ಖಾನ್​, ಸೂರ್ಯ; ಫೋಟೋ ವೈರಲ್​

ಸೈಫ್​ ಅಲ್ಲದೇ ಈ ಜಾಗದಲ್ಲಿ ಬೇರೆ ಯಾವುದಾದರೂ ಸೆಲೆಬ್ರಿಟಿ ಇದ್ದಿದ್ದರೆ ಕೋಪ ಮಾಡಿಕೊಳ್ಳುವ ಸಾಧ್ಯತೆ ಇತ್ತು. ಆದರೆ ಸೈಫ್ ಹಾಗೆ ಮಾಡಿಲ್ಲ. ಕೂಲ್​ ಆಗಿಯೇ ಅವರು ನಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಸೆಲೆಬ್ರಿಟಿಗಳ ಜೊತೆ ಅಭಿಮಾನಿಗಳು ಹುಷಾರಾಗಿ ನಡೆದುಕೊಳ್ಳಬೇಕು. ಅವರಿಗೆ ಕಿರಿಕಿರಿ ಆಗುವಂತೆ ಮುಗಿಬೀಳಬಾರದು ಎಂದು ಅನೇಕರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಹಿಂದೆ ಕೂಡ ಇಂಥ ಘಟನೆಗಳು ಆಗಿದ್ದುಂಟು.

ಸಾಮಾನ್ಯವಾಗಿ ಸೈಫ್​ ಅಲಿ ಖಾನ್​ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಇಷ್ಟಪಡುವುದಿಲ್ಲ. ಪಾಪರಾಜಿಗಳು ಇದ್ದಾಗ ಅಲ್ಲಿಂದ ಬೇಗ ಅವರು ಕಾಲು ಕೀಳುತ್ತಾರೆ. ಅನಗತ್ಯ ತಲೆಬಿಸಿ ಬೇಡ ಎಂಬ ಕಾರಣಕ್ಕೆ ಅವರು ಸೋಶಿಯಲ್​ ಮೀಡಿಯಾ ಕೂಡ ಬಳಸುವುದಿಲ್ಲ. ಬಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ. ಈ ವರ್ಷ ತೆರೆಕಂಡ ‘ಆದಿಪುರುಷ್​’ ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ್ದರು. ಆದರೆ ಆ ಪಾತ್ರದ ವೇಷ-ಭೂಷಣ ಮತ್ತು ಡೈಲಾಗ್​ ಸೂಕ್ತವಾಗಿ ಇರಲಿಲ್ಲ ಎಂಬ ಕಾರಣಕ್ಕೆ ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:35 pm, Tue, 7 November 23

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್