AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ಸೆಲ್ಫಿ ಕಾಟಕ್ಕೆ ಜಾರಿ ಬೀಳುವಂತಾದ ನಟ ಸೈಫ್​ ಅಲಿ ಖಾನ್​

ಸೈಫ್​ ಅಲಿ ಖಾನ್​ ಅಲ್ಲದೇ ಈ ಜಾಗದಲ್ಲಿ ಬೇರೆ ಯಾವುದಾದರೂ ಸೆಲೆಬ್ರಿಟಿ ಇದ್ದಿದ್ದರೆ ಕೋಪ ಮಾಡಿಕೊಳ್ಳುವ ಸಾಧ್ಯತೆ ಇತ್ತು. ಆದರೆ ಸೈಫ್ ಹಾಗೆ ಮಾಡಿಲ್ಲ. ಕೂಲ್​ ಆಗಿಯೇ ಅವರು ನಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಭಿಮಾನಿಯ ಸೆಲ್ಫಿ ಕಾಟಕ್ಕೆ ಜಾರಿ ಬೀಳುವಂತಾದ ನಟ ಸೈಫ್​ ಅಲಿ ಖಾನ್​
ಸೈಫ್​ ಅಲಿ ಖಾನ್​ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​
ಮದನ್​ ಕುಮಾರ್​
|

Updated on:Nov 07, 2023 | 7:57 PM

Share

ನಟ ಸೈಫ್​ ಅಲಿ ಖಾನ್​ (Saif Ali Khan) ಅವರಿಗೆ ಬಾಲಿವುಡ್​ನಲ್ಲಿ ಸಖತ್ ಬೇಡಿಕೆ ಇದೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ಕಾರಣಗಳಿಂದಲೂ ಸೈಫ್​ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಎಲ್ಲೆ ಹೋದರೂ ಕೂಡ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬೀಳುತ್ತಾರೆ. ಇದರಿಂದ ಕೆಲವೊಮ್ಮೆ ಅವರಿಗೆ ಕಿರಿಕಿರಿ ಉಂಟಾಗುತ್ತದೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಇಲ್ಲಿದೆ. ಸೈಫ್​ ಅಲಿ ಖಾನ್​ ಜೊತೆ ಸೆಲ್ಫಿ (Selfie) ತೆಗೆದುಕೊಳ್ಳಲು ಬಂದ ಓರ್ವ ವ್ಯಕ್ತಿಯಿಂದಾಗಿ ಅವರು ಜಾರಿ ಬೀಳಬಹುದಾದ ಸಂದರ್ಭ ಎದುರಾಗಿದೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಕಟ್ಟಡವೊಂದರ ಪಾರ್ಕಿಂಗ್​ ಜಾಗದಲ್ಲಿ ಸೈಫ್​ ಅಲಿ ಖಾನ್​ ನಡೆದುಕೊಂಡು ಬರುವಾಗ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳ ಮುಗಿಬಿದ್ದಿದ್ದಾರೆ. ಸೈಫ್​ ಜೊತೆ ಅವರ ಬಾಡಿ ಗಾರ್ಡ್ಸ್​ ಕೂಡ ಇದ್ದರು. ಹಾಗಿದ್ದರೂ ಕೂಡ ಸೆಲ್ಫಿ ಪಡೆಯಲು ಕೆಲವರು ನೂಕು ನುಗ್ಗಲು ಮಾಡಿದರು. ಮಾತನಾಡುತ್ತಲೇ ನಡೆದುಬರುವಾಗ ಒಬ್ಬ ಅಭಿಮಾನಿ ಅಡ್ಡ ಬಂದಿದ್ದಾನೆ. ಇದರಿಂದ ಸೈಫ್​ ಅಲಿ ಖಾನ್​ ಎಡವಿದ್ದಾರೆ. ಪುಣ್ಯಕ್ಕೆ ಅವರು ನೆಲದ ಮೇಲೆ ಬಿದ್ದಿಲ್ಲ. ‘ಹುಷಾರು..’ ಎಂದು ಹೇಳುತ್ತಲೇ ಅವರು ಮುಂದೆ ಸಾಗಿದ್ದಾರೆ.

ಇದನ್ನೂ ಓದಿ: ಚೆನ್ನೈನಲ್ಲಿ ಕಮಲ್​ ಹಾಸನ್​ ಬರ್ತ್​ಡೇ ಪಾರ್ಟಿಗೆ ಹಾಜರಿ ಹಾಕಿದ ಆಮಿರ್​ ಖಾನ್​, ಸೂರ್ಯ; ಫೋಟೋ ವೈರಲ್​

ಸೈಫ್​ ಅಲ್ಲದೇ ಈ ಜಾಗದಲ್ಲಿ ಬೇರೆ ಯಾವುದಾದರೂ ಸೆಲೆಬ್ರಿಟಿ ಇದ್ದಿದ್ದರೆ ಕೋಪ ಮಾಡಿಕೊಳ್ಳುವ ಸಾಧ್ಯತೆ ಇತ್ತು. ಆದರೆ ಸೈಫ್ ಹಾಗೆ ಮಾಡಿಲ್ಲ. ಕೂಲ್​ ಆಗಿಯೇ ಅವರು ನಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಸೆಲೆಬ್ರಿಟಿಗಳ ಜೊತೆ ಅಭಿಮಾನಿಗಳು ಹುಷಾರಾಗಿ ನಡೆದುಕೊಳ್ಳಬೇಕು. ಅವರಿಗೆ ಕಿರಿಕಿರಿ ಆಗುವಂತೆ ಮುಗಿಬೀಳಬಾರದು ಎಂದು ಅನೇಕರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಹಿಂದೆ ಕೂಡ ಇಂಥ ಘಟನೆಗಳು ಆಗಿದ್ದುಂಟು.

ಸಾಮಾನ್ಯವಾಗಿ ಸೈಫ್​ ಅಲಿ ಖಾನ್​ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಇಷ್ಟಪಡುವುದಿಲ್ಲ. ಪಾಪರಾಜಿಗಳು ಇದ್ದಾಗ ಅಲ್ಲಿಂದ ಬೇಗ ಅವರು ಕಾಲು ಕೀಳುತ್ತಾರೆ. ಅನಗತ್ಯ ತಲೆಬಿಸಿ ಬೇಡ ಎಂಬ ಕಾರಣಕ್ಕೆ ಅವರು ಸೋಶಿಯಲ್​ ಮೀಡಿಯಾ ಕೂಡ ಬಳಸುವುದಿಲ್ಲ. ಬಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ. ಈ ವರ್ಷ ತೆರೆಕಂಡ ‘ಆದಿಪುರುಷ್​’ ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ್ದರು. ಆದರೆ ಆ ಪಾತ್ರದ ವೇಷ-ಭೂಷಣ ಮತ್ತು ಡೈಲಾಗ್​ ಸೂಕ್ತವಾಗಿ ಇರಲಿಲ್ಲ ಎಂಬ ಕಾರಣಕ್ಕೆ ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:35 pm, Tue, 7 November 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು