AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆ ಬಳಿಕ ಮೊದಲ ಬಾರಿಗೆ ಈವೆಂಟ್​ಗೆ ಬಂದ ಸೈಫ್ ಅಲಿ ಖಾನ್; ಕಾಣಿಸ್ತಿದೆ ಗಾಯದ ಗುರುತು

ಸೈಫ್ ಅಲಿ ಖಾನ್ ಅವರು ಇತ್ತೀಚೆಗೆ ದರೋಡೆ ಮತ್ತು ಹಲ್ಲೆಯನ್ನು ಎದುರಿಸಿದ ನಂತರ ತ್ವರಿತ ಚೇತರಿಕೆಯನ್ನು ತೋರಿಸಿದ್ದಾರೆ. ಆಸ್ಪತ್ರೆಯಿಂದ ಚೇತರಿಸಿಕೊಂಡು, ಅವರು ಮುಂಬೈನಲ್ಲಿ ನಡೆದ ನೆಟ್‌ಫ್ಲಿಕ್ಸ್ ಈವೆಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಚರ್ಚೆಯಾಗಿದೆ. ಸೈಫ್ ಅವರ ಚೇತರಿಕೆ ಅನೇಕರನ್ನು ಆಶ್ಚರ್ಯಗೊಳಿಸಿದೆ.

ಹಲ್ಲೆ ಬಳಿಕ ಮೊದಲ ಬಾರಿಗೆ ಈವೆಂಟ್​ಗೆ ಬಂದ ಸೈಫ್ ಅಲಿ ಖಾನ್; ಕಾಣಿಸ್ತಿದೆ ಗಾಯದ ಗುರುತು
ಸೈಫ್
ರಾಜೇಶ್ ದುಗ್ಗುಮನೆ
|

Updated on: Feb 04, 2025 | 2:15 PM

Share

ಸೈಫ್ ಅಲಿ ಖಾನ್ ಅವರು ಇತ್ತೀಚೆಗೆ ಸಾಕಷ್ಟು ತೊಂದರೆ ಅನುಭವಿಸಿದ್ದರು. ಅವರ ಬಾಂದ್ರಾದ ಮನೆಗೆ ಬಂದ ಕಳ್ಳ ಸೈಫ್ ಮೇಲೆ ದಾಳಿ ಮಾಡಿದ್ದು ಅಲ್ಲದೆ, ಚಾಕುವಿನಿಂದ ಹಲ್ಲೆ ಮಾಡಿದ್ದ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದಾರೆ. ಕೆಲವೇ ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಫಿಟ್ ಆಗಿ ಬಂದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಅವರು ಈವೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದು, ಇದರ ವಿಡಿಯೋ ವೈರಲ್ ಆಗಿದೆ.

ಇತ್ತೀಚೆಗೆ ‘ನೆಟ್​ಫ್ಲಿಕ್ಸ್’ ಮುಂಬೈನಲ್ಲಿ ಗ್ರ್ಯಾಂಡ್ ಈವೆಂಟ್ ಒಂದನ್ನು ಮಾಡಿದೆ. ಇದಕ್ಕೆ ಸೈಫ್ ಅಲಿ ಖಾನ್ ಅವರಿಗೂ ಆಹ್ವಾನ ಇತ್ತು. ‘ಜೆವೆಲ್ ಥೀಫ್: ದಿ ಹೇಸ್ಟ್ ಬಿಗಿನ್ಸ್’ ಸಿನಿಮಾದಲ್ಲಿ ಜೈದೀಪ್ ಅಹ್ಲಾವತ್ ಜೊತೆ ಸೈಫ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಕಾಣಲಿದೆ. ಇದಕ್ಕಾಗಿ ಸೈಫ್ ಅವರು ಈವೆಂಟ್​ಗೆ ಆಗಮಿಸಿದ್ದರು.

ಲೀಲಾವತಿ ಆಸ್ಪತ್ರೆಯವರು ನೀಡಿದ ಮಾಹಿತಿ ಪ್ರಕಾರ ಸೈಫ್ ಅಲಿ ಖಾನ್ ಅವರಿಗೆ ಕೈ, ಕತ್ತು ಹಾಗೂ ಬೆನ್ನಿನ ಭಾಗದಲ್ಲಿ ಗಾಯಗಳಾಗಿವೆ. ನೆಟ್​ಫ್ಲಿಕ್ಸ್​ ಈವೆಂಟ್​ನಲ್ಲಿ ಸೈಫ್ ಅವರ ಕತ್ತಿನ ಭಾಗದಲ್ಲಿ ಗಾಯ ಕಾಣಿಸಿದೆ. ಈ ಫೋಟೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ.

ಇದನ್ನೂ ಓದಿ: ಸೈಫ್ ಅಲಿ ಖಾನ್ ಕೇಸ್​ನಲ್ಲಿ ಬಂಧನಕ್ಕೆ ಒಳಗಾದ ವ್ಯಕ್ತಿ ವಿರುದ್ಧ ಸಿಕ್ತು ದೊಡ್ಡ ಸಾಕ್ಷಿ

ಸೈಫ್ ಅಲಿ ಖಾನ್ ಅವರು ಈವೆಂಟ್​​ನಲ್ಲಿ ಫಿಟ್ ಆ್ಯಂಡ್ ಫೈನ್ ಆಗಿ ಕಾಣಿಸಿಕೊಂಡಿದ್ದಾರೆ. 20 ದಿನಗಳ ಹಿಂದೆ ಸೈಫ್ ಆಸ್ಪತ್ರೆಯಲ್ಲಿ ದಾಖಲಾಗಿದೆ ಸರ್ಜರಿ ಮಾಡಿಸಿಕೊಳ್ಳುತ್ತಿದ್ದರು ಎಂದು ಯಾರೊಬ್ಬರೂ ಹೇಳಲು ಸಾಧ್ಯವಿಲ್ಲ. ಅಷ್ಟರ ಮಟ್ಟಿಗೆ ಅವರು ಫಿಟ್ ಆಗಿ ಜೈಲಿನಿಂದ ಹೊರ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?