AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

Kareena Kapoor Khan: ಲಾಕ್​ಡೌನ್​ ಸಂದರ್ಭದಲ್ಲಿ ಕರೀನಾ ಕಪೂರ್​ ಮತ್ತು ಸೈಫ್​ ಅಲಿ ಖಾನ್​ ಪರಸ್ಪರ ಹೇರ್​ಕಟ್​ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸೈಫ್​ ಅಲಿ ಖಾನ್​ ಈಗ ವಿವರಿಸಿದ್ದಾರೆ.

‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​
ಸೈಫ್​ ಅಲಿ ಖಾನ್​, ಕರೀನಾ ಕಪೂರ್​ ಖಾನ್​
TV9 Web
| Updated By: Digi Tech Desk|

Updated on:Jul 27, 2021 | 10:38 AM

Share

ಬಾಲಿವುಡ್​ನ ಸ್ಟಾರ್​ ದಂಪತಿಗಳಾದ ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್ ಖಾನ್​ (Kareena Kapoor Khan) ಅವರು ಆಗಾಗ ಸುದ್ದಿ ಆಗುತ್ತ ಇರುತ್ತಾರೆ. ಅನೇಕ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಹಲವು ಪ್ರಾಜೆಕ್ಟ್​ಗಳಲ್ಲಿ ಇಬ್ಬರೂ ಬ್ಯುಸಿ ಆಗಿದ್ದಾರೆ. ಮಕ್ಕಳ ಪಾಲನೆಯ ಜೊತೆಗೆ ವೃತ್ತಿಜೀವನವನ್ನೂ ಸರಿದೂಗಿಸಿಕೊಂಡು ಸಾಗುತ್ತಿದ್ದಾರೆ ಕರೀನಾ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಸೈಫ್​ ಅಲಿ ಖಾನ್​ (Saif Ali Khan) ಅವರು ಕರೀನಾ ಕೇಶ ವಿನ್ಯಾಸದ ಬಗ್ಗೆ ಮಾತನಾಡಿದ್ದಾರೆ. ‘ಕರೀನಾ ಕೂದಲಿಗೆ ನಾನು ಕೈ ಹಾಕಿದರೆ ಆಕೆ ನನ್ನನ್ನು ಕೊಲೆ ಮಾಡುತ್ತಾಳೆ’ ಎಂದು ಸೈಫ್​ ಹೇಳಿದ್ದಾರೆ.

ಈ ವಿಷಯ ಪ್ರಸ್ತಾಪ ಆಗಲು ಕಾರಣ ಲಾಕ್​​ಡೌನ್​. ಹೌದು, ಕಳೆದ ವರ್ಷ ಕಠಿಣ ಲಾಕ್​ಡೌನ್​ ನಿಯಮಗಳು ಜಾರಿಯಾಗಿದ್ದಾಗ ಅನೇಕ ಸೆಲೆಬ್ರಿಟಿಗಳು ಮನೆಯಲ್ಲೇ ಹೇರ್​ಕಟ್​ ಮಾಡಿಕೊಂಡರು. ತಮ್ಮ ಸಂಗಾತಿಗೆ ಹೇರ್​ಕಟ್​ ಮಾಡಿದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಕರೀನಾ ಕಪೂರ್​ ಮತ್ತು ಸೈಫ್​ ಅಲಿ ಖಾನ್​ ವಿಚಾರದಲ್ಲಿ ಇದು ಸಾಧ್ಯವಾಗಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸೈಫ್​ ಅಲಿ ಖಾನ್​ ಈಗ ವಿವರಿಸಿದ್ದಾರೆ.

‘ಅವಳು ದೇಶದ ಆಸ್ತಿ. ಆಕೆಯ ಕೂದಲನ್ನು ನಾನು ಕತ್ತರಿಸಲು ಹೋದರೆ ತುಂಬ ಅನ್​ಪ್ರೊಫೆಷನಲ್​ ಆಗುತ್ತದೆ. ಆಕೆಯ ಕೂದಲಿಗೆ ನಾನು ಕೈ ಹಾಕಿದರೆ ಖಂಡಿತಾ ನನ್ನನ್ನು ಸಾಯಿಸುತ್ತಾಳೆ. ನಾವಿಬ್ಬರೂ ನಟಿನೆಯಲ್ಲಿ ಬ್ಯುಸಿ ಇದ್ದೇವೆ. ಆದ್ದರಿಂದ ಪರಸ್ಪರ ಕೂದಲಿನ ವಿಚಾರದಲ್ಲಿ ರಿಸ್ಕ್​ ತೆಗೆದುಕೊಳ್ಳೋಕೆ ಆಗಲ್ಲ’ ಎಂದು ಸೈಫ್​ ಅಲಿ ಖಾನ್​ ಹೇಳಿದ್ದಾರೆ.

2012ರಲ್ಲಿ ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್​ ಮದುವೆ ಆದರು. ತೈಮೂರ್​ ಅಲಿ ಖಾನ್​ ಮತ್ತು ಜೆ ಅಲಿ ಖಾನ್​ ಎಂಬಿಬ್ಬರು ಗಂಡು ಮಕ್ಕಳ ಪಾಲನೆಯಲ್ಲಿ ಈ ಜೋಡಿ ತೊಡಗಿಕೊಂಡಿದೆ. ಇತ್ತೀಚೆಗೆ ಕರೀನಾ ಅವರು ‘ಪ್ರಗ್ನೆನ್ಸಿ ಬೈಬಲ್​’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು. ಅದರಲ್ಲಿ ಅವರ ಪ್ರಗ್ನೆನ್ಸಿ ಅನುಭವವನ್ನು ಬರೆಯಲಾಗಿದೆ. ಆದರೆ ಪುಸ್ತಕದ ಶೀರ್ಷಿಕೆಯಲ್ಲಿ ಬೈಬಲ್ ಎಂಬ ಪದ ಬಳಕೆ ಮಾಡಿರುವುದಕ್ಕೆ ಕೆಲವರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಸಿನಿಮಾ ವಿಚಾರಕ್ಕೆ ಬರುವುದಾದರೆ ಆಮಿರ್​ ಖಾನ್​ ನಾಯಕತ್ವದ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಲ್ಲಿ ಕರೀನಾ ನಟಿಸಿದ್ದಾರೆ. ಆ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.

ಇದನ್ನೂ ಓದಿ:

Jeh: ಕರೀನಾ-ಸೈಫ್​ ಅಲಿ ಖಾನ್​ 2ನೇ ಪುತ್ರನಿಗೆ ನಾಮಕರಣ; ಏನು ಈ ಹೆಸರಿನ ಅರ್ಥ?

ಕರೀನಾ ಕಪೂರ್ ಖಾನ್ ಪುಸ್ತಕದ ಶೀರ್ಷಿಕೆ ವಿರುದ್ಧ ಕ್ರೈಸ್ತ ಸಮುದಾಯ ಗುಂಪೊಂದರಿಂದ ದೂರು ದಾಖಲು

Published On - 8:52 am, Tue, 27 July 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ