AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

Kareena Kapoor Khan: ಲಾಕ್​ಡೌನ್​ ಸಂದರ್ಭದಲ್ಲಿ ಕರೀನಾ ಕಪೂರ್​ ಮತ್ತು ಸೈಫ್​ ಅಲಿ ಖಾನ್​ ಪರಸ್ಪರ ಹೇರ್​ಕಟ್​ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸೈಫ್​ ಅಲಿ ಖಾನ್​ ಈಗ ವಿವರಿಸಿದ್ದಾರೆ.

‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​
ಸೈಫ್​ ಅಲಿ ಖಾನ್​, ಕರೀನಾ ಕಪೂರ್​ ಖಾನ್​
Follow us
TV9 Web
| Updated By: Digi Tech Desk

Updated on:Jul 27, 2021 | 10:38 AM

ಬಾಲಿವುಡ್​ನ ಸ್ಟಾರ್​ ದಂಪತಿಗಳಾದ ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್ ಖಾನ್​ (Kareena Kapoor Khan) ಅವರು ಆಗಾಗ ಸುದ್ದಿ ಆಗುತ್ತ ಇರುತ್ತಾರೆ. ಅನೇಕ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಹಲವು ಪ್ರಾಜೆಕ್ಟ್​ಗಳಲ್ಲಿ ಇಬ್ಬರೂ ಬ್ಯುಸಿ ಆಗಿದ್ದಾರೆ. ಮಕ್ಕಳ ಪಾಲನೆಯ ಜೊತೆಗೆ ವೃತ್ತಿಜೀವನವನ್ನೂ ಸರಿದೂಗಿಸಿಕೊಂಡು ಸಾಗುತ್ತಿದ್ದಾರೆ ಕರೀನಾ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಸೈಫ್​ ಅಲಿ ಖಾನ್​ (Saif Ali Khan) ಅವರು ಕರೀನಾ ಕೇಶ ವಿನ್ಯಾಸದ ಬಗ್ಗೆ ಮಾತನಾಡಿದ್ದಾರೆ. ‘ಕರೀನಾ ಕೂದಲಿಗೆ ನಾನು ಕೈ ಹಾಕಿದರೆ ಆಕೆ ನನ್ನನ್ನು ಕೊಲೆ ಮಾಡುತ್ತಾಳೆ’ ಎಂದು ಸೈಫ್​ ಹೇಳಿದ್ದಾರೆ.

ಈ ವಿಷಯ ಪ್ರಸ್ತಾಪ ಆಗಲು ಕಾರಣ ಲಾಕ್​​ಡೌನ್​. ಹೌದು, ಕಳೆದ ವರ್ಷ ಕಠಿಣ ಲಾಕ್​ಡೌನ್​ ನಿಯಮಗಳು ಜಾರಿಯಾಗಿದ್ದಾಗ ಅನೇಕ ಸೆಲೆಬ್ರಿಟಿಗಳು ಮನೆಯಲ್ಲೇ ಹೇರ್​ಕಟ್​ ಮಾಡಿಕೊಂಡರು. ತಮ್ಮ ಸಂಗಾತಿಗೆ ಹೇರ್​ಕಟ್​ ಮಾಡಿದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಕರೀನಾ ಕಪೂರ್​ ಮತ್ತು ಸೈಫ್​ ಅಲಿ ಖಾನ್​ ವಿಚಾರದಲ್ಲಿ ಇದು ಸಾಧ್ಯವಾಗಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸೈಫ್​ ಅಲಿ ಖಾನ್​ ಈಗ ವಿವರಿಸಿದ್ದಾರೆ.

‘ಅವಳು ದೇಶದ ಆಸ್ತಿ. ಆಕೆಯ ಕೂದಲನ್ನು ನಾನು ಕತ್ತರಿಸಲು ಹೋದರೆ ತುಂಬ ಅನ್​ಪ್ರೊಫೆಷನಲ್​ ಆಗುತ್ತದೆ. ಆಕೆಯ ಕೂದಲಿಗೆ ನಾನು ಕೈ ಹಾಕಿದರೆ ಖಂಡಿತಾ ನನ್ನನ್ನು ಸಾಯಿಸುತ್ತಾಳೆ. ನಾವಿಬ್ಬರೂ ನಟಿನೆಯಲ್ಲಿ ಬ್ಯುಸಿ ಇದ್ದೇವೆ. ಆದ್ದರಿಂದ ಪರಸ್ಪರ ಕೂದಲಿನ ವಿಚಾರದಲ್ಲಿ ರಿಸ್ಕ್​ ತೆಗೆದುಕೊಳ್ಳೋಕೆ ಆಗಲ್ಲ’ ಎಂದು ಸೈಫ್​ ಅಲಿ ಖಾನ್​ ಹೇಳಿದ್ದಾರೆ.

2012ರಲ್ಲಿ ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್​ ಮದುವೆ ಆದರು. ತೈಮೂರ್​ ಅಲಿ ಖಾನ್​ ಮತ್ತು ಜೆ ಅಲಿ ಖಾನ್​ ಎಂಬಿಬ್ಬರು ಗಂಡು ಮಕ್ಕಳ ಪಾಲನೆಯಲ್ಲಿ ಈ ಜೋಡಿ ತೊಡಗಿಕೊಂಡಿದೆ. ಇತ್ತೀಚೆಗೆ ಕರೀನಾ ಅವರು ‘ಪ್ರಗ್ನೆನ್ಸಿ ಬೈಬಲ್​’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು. ಅದರಲ್ಲಿ ಅವರ ಪ್ರಗ್ನೆನ್ಸಿ ಅನುಭವವನ್ನು ಬರೆಯಲಾಗಿದೆ. ಆದರೆ ಪುಸ್ತಕದ ಶೀರ್ಷಿಕೆಯಲ್ಲಿ ಬೈಬಲ್ ಎಂಬ ಪದ ಬಳಕೆ ಮಾಡಿರುವುದಕ್ಕೆ ಕೆಲವರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಸಿನಿಮಾ ವಿಚಾರಕ್ಕೆ ಬರುವುದಾದರೆ ಆಮಿರ್​ ಖಾನ್​ ನಾಯಕತ್ವದ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಲ್ಲಿ ಕರೀನಾ ನಟಿಸಿದ್ದಾರೆ. ಆ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.

ಇದನ್ನೂ ಓದಿ:

Jeh: ಕರೀನಾ-ಸೈಫ್​ ಅಲಿ ಖಾನ್​ 2ನೇ ಪುತ್ರನಿಗೆ ನಾಮಕರಣ; ಏನು ಈ ಹೆಸರಿನ ಅರ್ಥ?

ಕರೀನಾ ಕಪೂರ್ ಖಾನ್ ಪುಸ್ತಕದ ಶೀರ್ಷಿಕೆ ವಿರುದ್ಧ ಕ್ರೈಸ್ತ ಸಮುದಾಯ ಗುಂಪೊಂದರಿಂದ ದೂರು ದಾಖಲು

Published On - 8:52 am, Tue, 27 July 21

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ