AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

Kareena Kapoor Khan: ಲಾಕ್​ಡೌನ್​ ಸಂದರ್ಭದಲ್ಲಿ ಕರೀನಾ ಕಪೂರ್​ ಮತ್ತು ಸೈಫ್​ ಅಲಿ ಖಾನ್​ ಪರಸ್ಪರ ಹೇರ್​ಕಟ್​ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸೈಫ್​ ಅಲಿ ಖಾನ್​ ಈಗ ವಿವರಿಸಿದ್ದಾರೆ.

‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​
ಸೈಫ್​ ಅಲಿ ಖಾನ್​, ಕರೀನಾ ಕಪೂರ್​ ಖಾನ್​
TV9 Web
| Updated By: Digi Tech Desk|

Updated on:Jul 27, 2021 | 10:38 AM

Share

ಬಾಲಿವುಡ್​ನ ಸ್ಟಾರ್​ ದಂಪತಿಗಳಾದ ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್ ಖಾನ್​ (Kareena Kapoor Khan) ಅವರು ಆಗಾಗ ಸುದ್ದಿ ಆಗುತ್ತ ಇರುತ್ತಾರೆ. ಅನೇಕ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಹಲವು ಪ್ರಾಜೆಕ್ಟ್​ಗಳಲ್ಲಿ ಇಬ್ಬರೂ ಬ್ಯುಸಿ ಆಗಿದ್ದಾರೆ. ಮಕ್ಕಳ ಪಾಲನೆಯ ಜೊತೆಗೆ ವೃತ್ತಿಜೀವನವನ್ನೂ ಸರಿದೂಗಿಸಿಕೊಂಡು ಸಾಗುತ್ತಿದ್ದಾರೆ ಕರೀನಾ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಸೈಫ್​ ಅಲಿ ಖಾನ್​ (Saif Ali Khan) ಅವರು ಕರೀನಾ ಕೇಶ ವಿನ್ಯಾಸದ ಬಗ್ಗೆ ಮಾತನಾಡಿದ್ದಾರೆ. ‘ಕರೀನಾ ಕೂದಲಿಗೆ ನಾನು ಕೈ ಹಾಕಿದರೆ ಆಕೆ ನನ್ನನ್ನು ಕೊಲೆ ಮಾಡುತ್ತಾಳೆ’ ಎಂದು ಸೈಫ್​ ಹೇಳಿದ್ದಾರೆ.

ಈ ವಿಷಯ ಪ್ರಸ್ತಾಪ ಆಗಲು ಕಾರಣ ಲಾಕ್​​ಡೌನ್​. ಹೌದು, ಕಳೆದ ವರ್ಷ ಕಠಿಣ ಲಾಕ್​ಡೌನ್​ ನಿಯಮಗಳು ಜಾರಿಯಾಗಿದ್ದಾಗ ಅನೇಕ ಸೆಲೆಬ್ರಿಟಿಗಳು ಮನೆಯಲ್ಲೇ ಹೇರ್​ಕಟ್​ ಮಾಡಿಕೊಂಡರು. ತಮ್ಮ ಸಂಗಾತಿಗೆ ಹೇರ್​ಕಟ್​ ಮಾಡಿದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಕರೀನಾ ಕಪೂರ್​ ಮತ್ತು ಸೈಫ್​ ಅಲಿ ಖಾನ್​ ವಿಚಾರದಲ್ಲಿ ಇದು ಸಾಧ್ಯವಾಗಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸೈಫ್​ ಅಲಿ ಖಾನ್​ ಈಗ ವಿವರಿಸಿದ್ದಾರೆ.

‘ಅವಳು ದೇಶದ ಆಸ್ತಿ. ಆಕೆಯ ಕೂದಲನ್ನು ನಾನು ಕತ್ತರಿಸಲು ಹೋದರೆ ತುಂಬ ಅನ್​ಪ್ರೊಫೆಷನಲ್​ ಆಗುತ್ತದೆ. ಆಕೆಯ ಕೂದಲಿಗೆ ನಾನು ಕೈ ಹಾಕಿದರೆ ಖಂಡಿತಾ ನನ್ನನ್ನು ಸಾಯಿಸುತ್ತಾಳೆ. ನಾವಿಬ್ಬರೂ ನಟಿನೆಯಲ್ಲಿ ಬ್ಯುಸಿ ಇದ್ದೇವೆ. ಆದ್ದರಿಂದ ಪರಸ್ಪರ ಕೂದಲಿನ ವಿಚಾರದಲ್ಲಿ ರಿಸ್ಕ್​ ತೆಗೆದುಕೊಳ್ಳೋಕೆ ಆಗಲ್ಲ’ ಎಂದು ಸೈಫ್​ ಅಲಿ ಖಾನ್​ ಹೇಳಿದ್ದಾರೆ.

2012ರಲ್ಲಿ ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್​ ಮದುವೆ ಆದರು. ತೈಮೂರ್​ ಅಲಿ ಖಾನ್​ ಮತ್ತು ಜೆ ಅಲಿ ಖಾನ್​ ಎಂಬಿಬ್ಬರು ಗಂಡು ಮಕ್ಕಳ ಪಾಲನೆಯಲ್ಲಿ ಈ ಜೋಡಿ ತೊಡಗಿಕೊಂಡಿದೆ. ಇತ್ತೀಚೆಗೆ ಕರೀನಾ ಅವರು ‘ಪ್ರಗ್ನೆನ್ಸಿ ಬೈಬಲ್​’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು. ಅದರಲ್ಲಿ ಅವರ ಪ್ರಗ್ನೆನ್ಸಿ ಅನುಭವವನ್ನು ಬರೆಯಲಾಗಿದೆ. ಆದರೆ ಪುಸ್ತಕದ ಶೀರ್ಷಿಕೆಯಲ್ಲಿ ಬೈಬಲ್ ಎಂಬ ಪದ ಬಳಕೆ ಮಾಡಿರುವುದಕ್ಕೆ ಕೆಲವರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಸಿನಿಮಾ ವಿಚಾರಕ್ಕೆ ಬರುವುದಾದರೆ ಆಮಿರ್​ ಖಾನ್​ ನಾಯಕತ್ವದ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಲ್ಲಿ ಕರೀನಾ ನಟಿಸಿದ್ದಾರೆ. ಆ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.

ಇದನ್ನೂ ಓದಿ:

Jeh: ಕರೀನಾ-ಸೈಫ್​ ಅಲಿ ಖಾನ್​ 2ನೇ ಪುತ್ರನಿಗೆ ನಾಮಕರಣ; ಏನು ಈ ಹೆಸರಿನ ಅರ್ಥ?

ಕರೀನಾ ಕಪೂರ್ ಖಾನ್ ಪುಸ್ತಕದ ಶೀರ್ಷಿಕೆ ವಿರುದ್ಧ ಕ್ರೈಸ್ತ ಸಮುದಾಯ ಗುಂಪೊಂದರಿಂದ ದೂರು ದಾಖಲು

Published On - 8:52 am, Tue, 27 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ