AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

Hridayam Hindi Remake: ಸೈಫ್​ ಅಲಿ ಖಾನ್​ ಅವರ ಇಡೀ ಕುಟುಂಬವೇ ಸಿನಿಮಾರಂಗದಲ್ಲಿ ಸಕ್ರಿಯವಾಗಿದೆ. ಸೈಫ್​ ಪುತ್ರ ಇಬ್ರಾಹಿಂ ಅಲಿ ಖಾನ್​ ಅವರ ಚೊಚ್ಚಲ ಸಿನಿಮಾ ಬಗ್ಗೆ ಹಲವು ಬಗೆಯ ಟಾಕ್​ ಸೃಷ್ಟಿ ಆಗಿದೆ.

‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
‘ಹೃದಯಂ’ ಪೋಸ್ಟರ್​, ಇಬ್ರಾಹಿಂ​ ಅಲಿ ಖಾನ್​
TV9 Web
| Edited By: |

Updated on:May 30, 2022 | 10:04 AM

Share

ದಕ್ಷಿಣ ಭಾರತದ ಸಿನಿಮಾಗಳನ್ನು ರಿಮೇಕ್​ ಮಾಡಿಕೊಂಡು ಬಾಲಿವುಡ್​ನ ಅನೇಕ ಹೀರೋಗಳು ಯಶಸ್ಸು ಕಂಡಿದ್ದಾರೆ. ಸೂಪರ್​ ಹಿಟ್​ ಚಿತ್ರಗಳ ರಿಮೇಕ್​ ಮೂಲಕವೇ ಬಿ-ಟೌನ್​ಗೆ ಕಾಲಿಟ್ಟ ಸ್ಟಾರ್​ ಕಿಡ್​ಗಳೂ ಇದ್ದಾರೆ. ಈಗ ನಟ ಸೈಫ್​ ಅಲಿ ಖಾನ್​  (Saif Ali Khan) ಅವರ ಪುತ್ರ ಇಬ್ರಾಹಿಂ ಅಲಿ ಖಾನ್​ ಅವರನ್ನು ಲಾಂಚ್​ ಮಾಡಲು ಸಿದ್ಧತೆಗಳು ನಡೆಯುತ್ತಿವೆ. ಮೊದಲ ಪ್ರಾಜೆಕ್ಟ್​ ಆಯ್ಕೆ ಸೂಕ್ತವಾಗಿದ್ದರೆ ಅರ್ಧ ಗೆದ್ದಂತೆಯೇ ಸರಿ. ಹಾಗಾಗಿ ಅವರು ಒಳ್ಳೆಯ ಸಿನಿಮಾ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ. ಅವರು ಕೂಡ ರಿಮೇಕ್​ ಮೂಲಕ ಪ್ರೇಕ್ಷಕರ ಎದುರು ಬರುವ ಸಾಧ್ಯತೆ ದಟ್ಟವಾಗಿದೆ. ಇತ್ತೀಚೆಗೆ ಬಿಡುಗಡೆ ಆಗಿರುವ ಮಲಯಾಳಂನ ‘ಹೃದಯಂ’ (Hridayam) ಸಿನಿಮಾಗೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ. ಅದೇ ಚಿತ್ರ ಈಗ ಹಿಂದಿಯಲ್ಲಿ ರಿಮೇಕ್​ ಆಗುತ್ತಿದೆ. ಆ ಚಿತ್ರದಲ್ಲಿ ಇಬ್ರಾಹಿಂ ಅಲಿ ಖಾನ್ (Ibrahim Ali Khan)​ ನಟಿಸುವ ಸಾಧ್ಯತೆ ಇದೆ ಎಂದು ‘ಬಾಲಿವುಡ್​ ಹಂಗಾಮ’ ವರದಿ ಮಾಡಿದೆ. ಈ ಸಿನಿಮಾವನ್ನು ಖ್ಯಾತ ನಿರ್ಮಾಪಕ ಕರಣ್​ ಜೋಹರ್​ ಅವರು ನಿರ್ಮಾಣ ಮಾಡಲಿದ್ದಾರೆ. ಈ ಸುದ್ದಿ ಕೇಳಿ ಇಬ್ರಾಹಿಂ ಅಲಿ ಖಾನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ.

ಸೈಫ್​ ಅಲಿ ಖಾನ್​ ಅವರ ಇಡೀ ಕುಟುಂಬವೇ ಸಿನಿಮಾರಂಗದಲ್ಲಿ ಸಕ್ರಿಯವಾಗಿದೆ. ಸೈಫ್​ ಪುತ್ರಿ ಸಾರಾ ಅಲಿ ಖಾನ್​ ಅವರು ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇಬ್ರಾಹಿಂ ಅಲಿ ಖಾನ್​ ಅವರ ಚೊಚ್ಚಲ ಸಿನಿಮಾ ಬಗ್ಗೆ ಹಲವು ಬಗೆಯ ಟಾಕ್​ ಸೃಷ್ಟಿ ಆಗಿದೆ. ಅವರ ಇಮೇಜ್​ಗೆ ಸೂಕ್ತ ಆಗುವ ರೀತಿಯಲ್ಲಿ ‘ಹೃದಯಂ’ ಚಿತ್ರದ ಕಥೆ ಇದೆ ಎಂಬುದು ನಿರ್ಮಾಪಕರ ಲೆಕ್ಕಾಚಾರ. ಹಾಗಾಗಿ ಅದರ ಹಿಂದಿ ರಿಮೇಕ್​ನಲ್ಲಿ ಇಬ್ರಾಹಿಂ ಅಲಿ ಖಾನ್​ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಭಿಕ್ಷುಕರಿಗೆ 1 ರೂಪಾಯಿಯೂ ಕೊಡದೇ ಮುಂದೆ ಸಾಗಿದ ಸೈಫ್​ ಮಗ ಇಬ್ರಾಹಿಂ ಅಲಿ ಖಾನ್; ವಿಡಿಯೋ ವೈರಲ್​

ಇದನ್ನೂ ಓದಿ
Image
ಭಿಕ್ಷುಕರಿಗೆ 1 ರೂಪಾಯಿಯೂ ಕೊಡದೇ ಮುಂದೆ ಸಾಗಿದ ಸೈಫ್​ ಮಗ ಇಬ್ರಾಹಿಂ ಅಲಿ ಖಾನ್; ವಿಡಿಯೋ ವೈರಲ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
‘ಕರೀನಾ ಸಿಕ್ಕಾಪಟ್ಟೆ ಡೇಂಜರ್’ ಎಂದು ಸೈಫ್​ಗೆ ಹಿತೋಪದೇಶ ನೀಡಿದ್ದ ಅಕ್ಷಯ್; ಇಲ್ಲಿದೆ ಕರೀನಾ- ಸೈಫ್ ಪ್ರೇಮ ಪುರಾಣ!
Image
ಶಿವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸಾರಾ ಅಲಿ ಖಾನ್​; ಸೈಫ್​ ಪುತ್ರಿಯ ಫೋಟೋ ವೈರಲ್​

ಬಾಲಿವುಡ್​ನಲ್ಲಿ ನೆಪೋಟಿಸಂ ಇದೆ ಎಂಬುದು ಹಲವರ ವಾದ. ಫಿಲ್ಮಿ ಕುಟುಂಬದ ಮಕ್ಕಳಿಗೆ ಬಹುಬೇಗನೆ ಅವಕಾಶ ಸಿಗುತ್ತವೆ. ಸ್ಟಾರ್​ ನಟ-ನಟಿಯರ ಮಕ್ಕಳನ್ನು ಲಾಂಚ್​ ಮಾಡುವಲ್ಲಿ ಕರಣ್​ ಜೋಹರ್​ ಫೇಮಸ್​. ಅವರ ಬಗ್ಗೆ ಅನೇಕರು ಟೀಕೆ ಮಾಡಿದ್ದುಂಟು. ಆದರೆ ಅದಕ್ಕೆಲ್ಲ ಅವರು ತಲೆ ಕೆಡಿಸಿಕೊಂಡಿಲ್ಲ. ಈಗ ಅವರು ಸೈಫ್​ ಅಲಿ ಖಾನ್​ ಪುತ್ರನನ್ನು ಹಿಂದಿ ಚಿತ್ರರಂಗಕ್ಕೆ ಪರಿಚಯಿಸುವ ತಯಾರಿ ನಡೆಸಿದ್ದಾರೆ.

ಇದನ್ನೂ ಓದಿ: ಸೈಫ್ ಮಗನನ್ನು ಕಂಡು ​ಶಾರುಖ್ ಪುತ್ರ ಅಂತ ಕರೆದ ಫ್ಯಾನ್ಸ್​​; ಇಬ್ರಾಹಿಂ ಅಲಿ ಖಾನ್​ ಪ್ರತಿಕ್ರಿಯೆ ಹೇಗಿತ್ತು?

ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಇಬ್ರಾಹಿಂ ಅಲಿ ಖಾನ್​ ಆಗಾಗ ಸುದ್ದಿ ಆಗುತ್ತಾರೆ. ಅವರ ಖಾಸಗಿ ಜೀವನದ ವಿಷಯಗಳು ಕೂಡ ಹೆಚ್ಚು ಹೈಲೈಟ್​ ಆಗುತ್ತಿವೆ. ಇತ್ತೀಚೆಗೆ ಅವರು ಮುಂಬೈನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಜಾಸ್ತಿ ಆಗಿದೆ. ನಟಿ ಪಲಕ್​ ತಿವಾರಿ ಜೊತೆ ಅವರ ಸುತ್ತಾಟ ಹೆಚ್ಚಾಗಿದೆ. ಅವರ ಕೆಲವು ವಿಡಿಯೋಗಳು ಕೂಡ ವೈರಲ್​ ಆಗುತ್ತಿವೆ. ಈ ಜೋಡಿಯ ಮಧ್ಯೆ ಏನೋ ನಡೆಯುತ್ತಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:56 am, Mon, 30 May 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ