AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕು ಇರಿತದಿಂದ ಸೈಫ್ ಅಲಿ ಖಾನ್​ ಸ್ಥಿತಿ ಗಂಭೀರ; ನಟಿ ಕರೀನಾ ಕಪೂರ್ ಬಚಾವ್ ಆಗಿದ್ದು ಹೇಗೆ?

Kareena Kapoor: ಸೈಫ್ ಅಲಿ ಖಾನ್ ಅವರ ಮನೆಗೆ ದುಷ್ಕರ್ಮಿಗಳು ನುಗ್ಗಿ ಅವರಿಗೆ ಚಾಕು ಇರಿದಿದ್ದಾರೆ. ಆರು ಕಡೆ ಗಂಭೀರ ಗಾಯಗಳಾಗಿವೆ. ಆದರೆ ಕರೀನಾ ಕಪೂರ್ ಅವರು ಇದರಿಂದ ಬಚಾವ್ ಆಗಿದ್ದು ಹೇಗೆ? ಆ ಬಗ್ಗೆ ಮಾಹಿತಿ ಈ ಸ್ಟೋರಿಯಲ್ಲಿ ಇದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಚಾಕು ಇರಿತದಿಂದ ಸೈಫ್ ಅಲಿ ಖಾನ್​ ಸ್ಥಿತಿ ಗಂಭೀರ; ನಟಿ ಕರೀನಾ ಕಪೂರ್ ಬಚಾವ್ ಆಗಿದ್ದು ಹೇಗೆ?
ಕರೀನಾ-ಸೈಫ್
ರಾಜೇಶ್ ದುಗ್ಗುಮನೆ
|

Updated on: Jan 16, 2025 | 9:58 AM

Share

ಸೈಫ್ ಅಲಿ ಖಾನ್ ಮನೆ ಒಳಗೆ ನುಗ್ಗಿದ ದುಷ್ಕರ್ಮಿಗಳು ನಟನಿಗೆ ಚಾಕು ಇರಿದಿದ್ದಾರೆ. ಆರು ಕಡೆಗಳಲ್ಲಿ ಗಂಭೀರ ಗಾಯಗಳಾಗಿವೆ. ಹಾಗಾದರೆ ಈ ಪ್ರಕರಣದಲ್ಲಿ ಅವರ ಪತ್ನಿ ಕರೀನಾ ಕಪೂರ್ ಹೇಗೆ ಸೇವ್ ಆದರು? ಅವರಿಗೆ ಏನು ಆಗಿಲ್ಲ ಏಕೆ ಎಂಬ ಪ್ರಶ್ನೆ ಮೂಡೋದು ಸಹಜ. ಅದಕ್ಕೆ ಉತ್ತರ ಸಿಕ್ಕಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳು ಹರಿದಾಡಿವೆ.

ಸೈಫ್ ಅಲಿ ಖಾನ್ ಅವರು ಮಾತ್ರ ಮನೆಯಲ್ಲಿ ಇದ್ದರು. ಕರೀನಾ ಕಪೂರ್ ಅವರು ಬುಧವಾರ (ಜನವರಿ 15) ರಾತ್ರಿ ಕರೀಷ್ಮಾ ಕಪೂರ್, ಸೋನಂ ಕಪೂರ್, ರಿಯಾ ಕಪೂರ್ ಜೊತೆ ಪಾರ್ಟಿಗೆ ತೆರಳಿದ್ದರು. ಕರೀನಾ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪಾರ್ಟಿ ಮಾಡುತ್ತಿರುವ ಫೋಟೋ ಕೂಡ ಹಂಚಿಕೊಂಡಿದ್ದರು. ಇದಕ್ಕೆ ‘ಗರ್ಲ್ಸ್​ ನೈಟ್​ ಇನ್’ ಎಂದು ಕ್ಯಾಪ್ಶನ್ ನೀಡಿದ್ದರು.  ಹೀಗಾಗಿ ಹಲ್ಲೆ ನಡೆಯುವ ಸಂದರ್ಭದಲ್ಲಿ ಅವರು ಮನೆಯಲ್ಲಿ ಇರಲಿಲ್ಲ. ಇದರಿಂದ ಅವರು ಬಚಾವ್ ಆಗಿದ್ದಾರೆ. ಇಲ್ಲದಿದ್ದರೆ ಅವರೂ ಗಾಯಗೊಳ್ಳುತ್ತಿದ್ದರೇನೋ.

ಗುರುವಾರ (ಜನವರಿ 16) ಮುಂಜಾನೆ 3ರಿಂದ 4 ಗಂಟೆ ಸುಮಾರಿಗೆ ಈ ಕಳ್ಳತನದ ಪ್ರಯತ್ನ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸೈಫ್ ಅಲಿ ಖಾನ್ ಮನೆ ಹಾಗೂ ಸುತ್ತ ಮುತ್ತ ಇರುವ ಪ್ರದೇಶಗಳ ಸಿಸಿಟಿವಿ ದೃಶ್ಯವ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಗಂಭೀರ ಗಾಯ

ಸೈಫ್ ಅಲಿ ಖಾನ್ ಅವರಿಗೆ ಬರೋಬ್ಬರಿ 4 ಕಡೆಗಳಲ್ಲಿ ಗಾಯಗಳಾಗಿವೆ. ಅವರ ಪರಿಸ್ಥಿತಿ ಗಂಭಿರವಾಗಿದೆ ಎನ್ನಲಾಗಿದೆ. ಬೆನ್ನು ಮೂಳೆ ಸಮೀಪ ಆಳವಾದ ಗಾಯವಾಗಿದ್ದು, ಅವರಿಗೆ ಸರ್ಜರಿ ಮಾಡಲಾಗುತ್ತಿದೆ. ಅವರು ಬೇಗ ಚೇತಿಸಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಗಲಾಟೆ

ಕಳ್ಳರು ನುಗ್ಗಿದಾಗ ಮನೆಗೆಲೆಸದವರು ಅವರನ್ನು ಹಿಡಿಯುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಸೈಫ್ ಎಚ್ಚರಗೊಂಡಿದ್ದಾರೆ. ಕಳ್ಳರನ್ನು ತಡೆಯುವ ಪ್ರಯತ್ನ ಮಾಡಿದಾಗ ಸೈಫರ್ ಅವರಿಗೆ  ಹಲವು ಬಾರಿ ಚುಚ್ಚಲಾಗಿದೆ. ಈ ಪ್ರಕರಣದಲ್ಲಿ ತಾಳ್ಮೆ ಇಂದ ಇರುವಂತೆ ಕುಟುಂಬದವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಸೈಫ್ ಅಲಿ ಖಾನ್​ಗೆ​ ಚಾಕು ಇರಿತ; ಆರು ಕಡೆಗಳಲ್ಲಿ ಗಾಯ

ದೌಡು

ಕರೀನಾ ಕಪೂರ್ ಅವರು ವಿಚಾರ ತಿಳಿಯುತ್ತಿದ್ದಂತೆ ಆಗಮಿಸಿದ್ದಾರೆ. ಸೈಫ್ ಅವರನ್ನು ನೇರವಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ದಾಳಿಯ ಹಿಂದೆ ಬೇರೆ ಏನಾದರೂ ಉದ್ದೇಶ ಇದೆಯೇ ಎಂಬ ಪ್ರಶ್ನೆ ಪೊಲೀಸರಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ