AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್ ಅಲಿ ಖಾನ್​ಗೆ ಚಾಕು ಇರಿದ ವ್ಯಕ್ತಿ ಅರೆಸ್ಟ್; 30 ಗಂಟೆಗಳ ಬಳಿಕ ಬಲೆಗೆ ಬಿದ್ದ ಆರೋಪಿ

Saif Ali Khan: ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ನಡೆದ ದರೋಡೆ ಮತ್ತು ಹಲ್ಲೆ ಪ್ರಕರಣದಲ್ಲಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸುಮಾರು 30 ಗಂಟೆಗಳ ಬಳಿಕ ಬಂಧನಕ್ಕೊಳಗಾದ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ. ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೈಫ್ ಅಲಿ ಖಾನ್​ಗೆ ಚಾಕು ಇರಿದ ವ್ಯಕ್ತಿ ಅರೆಸ್ಟ್; 30 ಗಂಟೆಗಳ ಬಳಿಕ ಬಲೆಗೆ ಬಿದ್ದ ಆರೋಪಿ
Saif Ali Khan (5)
ರಾಜೇಶ್ ದುಗ್ಗುಮನೆ
|

Updated on:Jan 17, 2025 | 2:16 PM

Share

ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಕಳ್ಳ ಈಗ ಬಂಧನಕ್ಕೆ ಒಳಗಾಗಿದ್ದಾನೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅತ್ತ ಸೈಫ್ ಅಲಿ ಖಾನ್ ಅವರು ಹಲ್ಲೆಗೆ ಒಳಗಾಗಿರುವುದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಅವರು ಚೇತರಿಸಿಕೊಳ್ಳುವ ಹಂತದಲ್ಲಿ ಇದ್ದಾರೆ.

ಸದ್ಯ ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದಾರೆ. ಅಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಮಾಡಿದರ ಹಿಂದಿನ ಉದ್ದೇಶ ಏನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಆತ ಏನಾದರೂ ಪ್ರಮುಖ ವಿಚಾರ ರಿವೀಲ್ ಮಾಡುತ್ತಾನೋ ಎನ್ನುವ ಕುತೂಹಲ ಮೂಡಿದೆ.

ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಫೋಟೋವನ್ನು ಮುಂಬೈ ಪೊಲೀಸರು ಬಹಿರಗಂಪಡಿಸಿದ್ದರು. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ. ಶಂಕಿತ ವ್ಯಕ್ತಿಯು ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದ. ಆತನ ಈಗ ತ್ವರಿತವಾಗಿ ಬಂಧಿಸಲಾಗಿದೆ.

ಸೈಫ್ ಅಲಿ ಖಾನ್ ಮನೆಯಲ್ಲಿ ಸರಿಯಾದ ಭದ್ರತೆ ಇರಲಿಲ್ಲ ಎನ್ನಲಾಗಿದೆ. ಫ್ಲ್ಯಾಟ್​ನ ಹೊರ ಭಾಗದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಿಲ್ಲ. ಹೀಗಾಗಿ, ಬಿಲ್ಡಿಂಗ್​ಗೆ ಯಾರು ಬರುತ್ತಾರೆ ಅಥವಾ ಹೋಗುತ್ತಾರೆ ಎಂದು ಹೇಳಲು ಸಾಧ್ಯ ಇರಲಿಲ್ಲ.  ಇನ್ನು, ಯಾರು ಬರುತ್ತಾರೆ ಹೋಗುತ್ತಾರೆ ಎಂಬುದನ್ನು ಬರೆದಿಡಲು ಅಲ್ಲಿ ಯಾವುದೇ ರಿಜಿಸ್ಟರ್ ಬುಕ್ ಕೂಡ ಇರಲಿಲ್ಲ. ಹೀಗಾಗಿ ಆತ ಎಮರ್ಜೆನ್ಸಿ ಎಕ್ಸಿಟ್​ನ ಮೆಟ್ಟಿಲು ಹತ್ತಿಯೇ ಸೈಫ್ ಮನೆಗೆ ಹೋಗಿದ್ದ. ‘ಇದು ಸೈಫ್ ಸ್ಥಾನದಲ್ಲಿ ಇರುವ ಇತರ ಸೆಲೆಬ್ರಿಟಿಗಳಿಗೂ ವೇಕಪ್ ಕಾಲ್’ ಎಂದು ಪೊಲೀಸರು ಹೇಳಿದ್ದಾರೆ.

ಏನಿದು ಘಟನೆ?

ಜನವರಿ 16ರ ಬೆಳಿಗ್ಗೆ 2.30ರ ಸುಮಾರಿಗೆ ಸೈಫ್ ಅಲಿ ಖಾನ್ ಫ್ಲ್ಯಾಟ್​ಗೆ ನುಗ್ಗಿದ ವ್ಯಕ್ತಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಹಣ ಕೊಡುವುದಿಲ್ಲ ಎಂದ ಬಳಿಕ ಸೈಫ್ ಮೇಲೆ ಆತ ಆರು ಬಾರಿ ಚಾಕು ಇರಿದಿದ್ದ. ಇದು ದೊಡ್ಡ ಮಟ್ಟದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:27 am, Fri, 17 January 25

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ