AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saif Ali Khan: ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಸೈಫ್ ಅಲಿ ಖಾನ್​ಗೆ​ ಚಾಕು ಇರಿತ; ಆರು ಕಡೆಗಳಲ್ಲಿ ಗಾಯ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ಮನೆಯಲ್ಲಿ ದರೋಡೆ ಯತ್ನ ನಡೆದಿದ್ದು, ಈ ವೇಳೆ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಕಳ್ಳರು ಮನೆಗೆ ನುಗ್ಗಿದಾಗ ಸೈಫ್ ಅವರು ಪ್ರತಿರೋಧಿಸಿದ್ದರಿಂದ ಘಟನೆ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Saif Ali Khan: ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಸೈಫ್ ಅಲಿ ಖಾನ್​ಗೆ​ ಚಾಕು ಇರಿತ; ಆರು ಕಡೆಗಳಲ್ಲಿ ಗಾಯ
ಸೈಫ್ ಅಲಿ ಖಾನ್
ರಾಜೇಶ್ ದುಗ್ಗುಮನೆ
|

Updated on:Jan 16, 2025 | 8:48 AM

Share

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ ಮಾಡಲಾಗಿದೆ. ಶ್ರೀಮಂತ ನಟ ಎಂಬ ಕಾರಣಕ್ಕೆ ಕೆಲವರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದರು. ಇಂದು (ಜನವರಿ 16) ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸದ್ಯ ಕಳ್ಳರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ.

ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ‘ಕಳ್ಳರು 2-3 ಬಾರಿ ಹಲ್ಲೆ ಮಾಡಿದ್ದಾರೆ. ನಾವು ಇದನ್ನು ತನಿಖೆ ನಡೆಸುತ್ತಿದ್ದೇವೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಕೂಡ ತನಿಖೆ ನಡೆಸುತ್ತಿದೆ. ಮುಂಜಾನೆ 3 ಗಂಟೆಗೆ ಸೈಫ್ ಅವರನ್ನು ಲೀವಾತಿ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ಆರು ಗಾಯಗಳಾಗಿದ್ದು, ಎರಡು ಕಡೆ ತುಂಬಾನೇ ಗಂಭೀರ ಗಾಯವಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್, ಶಾರುಖ್​ ಖಾನ್ ಮಾತ್ರವಲ್ಲ ಸೈಫ್ ಅಲಿ ಖಾನ್​ಗೂ ಬಂದಿತ್ತು ಬೆದರಿಕೆ

ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ತುಂಬಾನೇ ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಬೆನ್ನಿನ ಮೂಳೆಗೆ ತೊಂದರೆ ಆಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:28 am, Thu, 16 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ