ಸೈಫ್ ಅಲಿ ಖಾನ್​ಗೆ ಹಲವು ಗಂಟೆ ಸರ್ಜರಿ; ಆಪರಷೇನ್ ವೇಳೆ ನಟನ ದೇಹದಲ್ಲಿ ಸಿಕ್ಕಿದ್ದೇನು?

ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ನಸುಕಿನಲ್ಲಿ ನಡೆದ ದರೋಡೆಯಲ್ಲಿ ಅವರಿಗೆ ಚಾಕು ಇರಿತವಾಗಿದೆ. ಕಳ್ಳನನ್ನು ತಡೆಯುವ ಪ್ರಯತ್ನದಲ್ಲಿ ಈ ಘಟನೆ ನಡೆದಿದೆ. ಆರುಕ್ಕೂ ಹೆಚ್ಚು ಗಾಯಗಳಿಂದಾಗಿ ಅವರಿಗೆ ತಕ್ಷಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ, ಅದು ಯಶಸ್ವಿಯಾಗಿದೆ. ಅವರ ಆರೋಗ್ಯದ ಬಗ್ಗೆ ಇಲ್ಲಿದೆ ಮಾಹಿತಿ.

ಸೈಫ್ ಅಲಿ ಖಾನ್​ಗೆ ಹಲವು ಗಂಟೆ ಸರ್ಜರಿ; ಆಪರಷೇನ್ ವೇಳೆ ನಟನ ದೇಹದಲ್ಲಿ ಸಿಕ್ಕಿದ್ದೇನು?
ಸೈಫ್ ಅಲಿ ಖಾನ್
Edited By:

Updated on: Jan 22, 2025 | 8:07 AM

ಇಂದು (ಜನವರಿ 16) ನಸುಕಿನಲ್ಲಿ ಸೈಫ್ ಅಲಿ ಖಾನ್ ಅವರಿಗೆ ಚಾಕು ಇರಿತ ಆಗಿದೆ. ಮನೆಯಲ್ಲಿ ಅವರು ಮಲಗಿದ್ದ ವೇಳೆ ಕಳ್ಳರು ಬಂದಿದ್ದಾರೆ. ಕಳ್ಳತನ ತಡೆಯುವ ಪ್ರಯತ್ನ ಮಾಡಿದಾಗ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆದಿದೆ. ಸೈಫ್ ಅಲಿ ಖಾನ್ ಅವರ ಮೇಲೆ ಆರಕ್ಕೂ ಹೆಚ್ಚು ಕಡೆಗಳಲ್ಲಿ ಗಾಯಗಳಾಗಿವೆ. ಸದ್ಯ ಅವರ ಸ್ಥೀತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿ ಆಗಿದೆ.

ನಡೆದಿದ್ದೇನು?

ನಸುಕಿನ ಸಮಯದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಮನೆ ಒಳಗೆ ಕಳ್ಳ ಬಂದಿದ್ದಾನೆ. ಈತ ಬಂದಿದ್ದನ್ನು ತಿಳಿದ ಮನೆ ಕೆಲಸದವರು ಅವನನ್ನು ಹಿಡಿಯುವ ಪ್ರಯತ್ನ ಮಾಡಿದ್ದಾರೆ. ಈ ಗಲಾಟೆಯಿಂದ ಸೈಫ್ ಅಲಿ ಖಾನ್​ಗೆ ಎಚ್ಚರ ಆಗಿದ್ದು, ಅವರು ಆಗಮಿಸಿದ್ದಾರೆ. ಆಗ ತಡೆಯಲು ಹೋದ ಸೈಫ್ ಮೇಲೆ ಕಳ್ಳ ಹಲ್ಲೆ ಮಾಡಿದ್ದಾನೆ. ಈ ವೇಳೆ ಸೈಫ್​ಗೆ ಆರು ಕಡೆಗಳಲ್ಲಿ ಗಾಯಗಳಾಗಿವೆ. ಬೆನ್ನಿನ ಭಾಗದಲ್ಲಿ ತೀವ್ರ ಗಾಯವಾಗಿದೆ.

ಸರ್ಜರಿ ಯಶಸ್ವಿ

ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಸೈಫ್​ ಅಲಿಖಾನ್​ಗೆ ಸರ್ಜರಿ ಮಾಡಲಾಗಿದೆ. ಮುಂಜಾನೆ 5.30ಕ್ಕೆ ಸರ್ಜರಿ ಆರಂಭಿಸಲಾಗಿತ್ತು. ಹಲವು ಗಂಟೆಗಳ ಕಾಲ ಸರ್ಜರಿ ನಡೆಸಲಾಗಿದೆ. ಸರ್ಜರಿ ವೇಳೆ ಸೈಫ್​ ಅಲಿಖಾನ್​ ದೇಹದಲ್ಲಿ ಚಾಕುವಿನ ಚೂರು ಪತ್ತೆ ಆಗಿದೆ! ಹೌದು, ಕಳ್ಳ ಚಾಕು ಇರಿದಾಗ ಅದರ ತುಂಡು ಸೈಫ್ ದೇಹದಲ್ಲಿ ಉಳಿದುಕೊಂಡಿತ್ತು. ಅದನ್ನು ವೈದ್ಯರು ಹೊರತೆಗೆದಿದ್ದಾರೆ. ಸದ್ಯ ಸೈಫ್​​ಗೆ ಕಾಸ್ಮೆಟಿಕ್ ಸರ್ಜರಿ ನಡೆಸಲಾಗಿದೆ.

ಕೆಲಸದವರ ಮೇಲೆ ಅನುಮಾನ?

ಸೈಫ್ ಅಲಿ ಖಾನ್​ಗೆ ಚಾಕು ಇರಿತ ಪ್ರಕರಣದಲ್ಲಿ ಮನೆಯಲ್ಲಿ ಕೆಲಸದವರ ಮೇಲೆ ಅನುಮಾನ ಮೂಡಿದೆ. ಇವರ ಮನೆಗೆ ಎರಡು ಗೇಟ್​ಗಳಿವೆ. 4 ಜನ ಗಾರ್ಡ್​ಗಳು ಕೆಲಸ ಮಾಡುತ್ತಿದ್ದಾರೆ. ಆದಾಗ್ಯೂ ಕಳ್ಳ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ. ಮನೆಯಲ್ಲಿ ಇರುವ ಯಾರಾದರೂ ಸಹಾಯ ಮಾಡಿದರೇ ಎನ್ನುವ ಪ್ರಶ್ನೆಯೂ ಮೂಡಿದೆ. ಪ್ರಕರಣದ ತನಿಖೆಗೆ ಮುಂಬೈ ಪೊಲೀಸರು 7 ತಂಡ ರಚಿಸಿದ್ದಾರೆ. ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಚಾಕು ಇರಿತದಿಂದ ಸೈಫ್ ಅಲಿ ಖಾನ್​ ಸ್ಥಿತಿ ಗಂಭೀರ; ನಟಿ ಕರೀನಾ ಕಪೂರ್ ಬಚಾವ್ ಆಗಿದ್ದು ಹೇಗೆ?

ಕರೀನಾ ಬಚಾವ್

ದಾಳಿ ನಡೆಯುವ ವೇಳೆ ಕರೀನಾ ಕಪೂರ್ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಅವರು ಸೋನಂ ಕಪೂರ್ ಮೊದಲಾದವರ ಜೊತೆ ಪಾರ್ಟಿಗೆ ತೆರಳಿದ್ದರು. ಹೀಗಾಗಿ, ಅವರು ಹಲ್ಲೆಯಿಂದ ಬಚಾವ್ ಆಗಿದ್ದಾರೆ. ಇನ್ನು ಸೈಫ್ ಮಕ್ಕಳು ಸೇಫ್ ಆಗಿದ್ದಾರೆ. ಈಗಾಗಲೇ ಪ್ರಕರಣದಲ್ಲಿ ಓರ್ವನ ಬಂಧಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 10:57 am, Thu, 16 January 25

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us