AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್ ಅಲಿ ಖಾನ್ ಆಸ್ಪತ್ರೆ ಸೇರಿದ್ದು ಆಟೋದಲ್ಲಿ; ಸಹಾಯಕ್ಕೆ ಬಂದಿದ್ದು ಈ ವ್ಯಕ್ತಿ

ಸೈಫ್ ಅಲಿ ಖಾನ್ ಅವರು ಕಳ್ಳನ ದಾಳಿಯಿಂದ ಗಾಯಗೊಂಡಿದ್ದಾರೆ. ಕಳ್ಳನ ಚಾಕುವಿನಿಂದ ಆರು ಕಡೆ ಗಾಯಗೊಂಡ ಸೈಫ್ ಅವರನ್ನು ತಕ್ಷಣ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬೆನ್ನಿಗೆ ತೀವ್ರ ಗಾಯಗಳಾಗಿವೆ. ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಸೈಫ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಇಲ್ಲಿದೆ ವಿವರ.

ಸೈಫ್ ಅಲಿ ಖಾನ್ ಆಸ್ಪತ್ರೆ ಸೇರಿದ್ದು ಆಟೋದಲ್ಲಿ; ಸಹಾಯಕ್ಕೆ ಬಂದಿದ್ದು ಈ ವ್ಯಕ್ತಿ
ಸೈಫ್
ರಾಜೇಶ್ ದುಗ್ಗುಮನೆ
|

Updated on:Jan 16, 2025 | 3:06 PM

Share

ಸೈಫ್ ಅಲಿ ಖಾನ್ ಅವರು ಸ್ಟಾರ್ ಹೀರೋ. ಅವರ ಬಳಿ ಹಲವು ಐಷಾರಾಮಿ ಕಾರುಗಳು ಇವೆ. ಅವರು ಕಳ್ಳನು ಮಾಡಿದ ದಾಳಿಯಿಂದ ಸಾಕಷ್ಟು ತೊಂದರೆ ಅನುಭವಿಸಿದರು. ಕಳ್ಳ ಇರಿದ ಚಾಕುವಿನಿಂದ ಸಾಕಷ್ಟು ಕಡೆಗಳಲ್ಲಿ ಸೈಫ್​ಗೆ ಗಾಯಗಳಾಗಿವೆ. ಈ ವೇಳೆ ಸಹಾಯಕ್ಕೆ ಬಂದಿದ್ದು ಅವರ 23 ವರ್ಷದ ಮಗ ಇಬ್ರಾಹಿಮ್. ಸೈಫ್​ನ ಆಸ್ಪತ್ರೆಗೆ ಸೇರಿಸಿದ್ದು ಇವರೇ. ಅದು ಕೂಡ ಆಟೋದಲ್ಲಿ ಅನ್ನೋದು ವಿಶೇಷ.

ಬೆಳಿಗ್ಗೆ 2.30 ಸುಮಾರಿಗೆ ಮನೆಯಲ್ಲಿ ಗಲಾಟೆ ಕೇಳಿ ಸೈಫ್ ಅವರಿಗೆ ಎಚ್ಚರವಾಗಿದೆ. ಎದ್ದು ನೋಡಿದಾಗ ಸೈಫ್ ಅಲಿ ಖಾನ್​ಗೆ ಕಳ್ಳ ಕಾಣಿಸಿದ್ದಾನೆ. ಆತನ ತಡೆದಾಗ ಸೈಫ್ ಮೇಲೆ ಹಲ್ಲೆ ನಡೆದಿದೆ. ಈ ವೇಳೆ ಕತ್ತು, ಬೆನ್ನು ಸೇರಿ ಆರು ಕಡೆಗಳಲ್ಲಿ ಗಾಯಗಳಾಗಿವೆ. ಅದರಲ್ಲೂ ಬೆನ್ನಿನ ಭಾಗಕ್ಕೆ ಸೈಫ್​ಗೆ ತೀವ್ರವಾಗಿ ಗಾಯವಾಗಿತ್ತು. ಚಾಕುವಿನ ಚೂರು ಕೂಡ ಅವರ ಬೆನ್ನಿನಲ್ಲೇ ಉಳಿದುಕೊಂಡು ಬಿಟ್ಟಿತ್ತು.

ಇದನ್ನೂ ಓದಿ: ಸೈಫ್ ಅಲಿ ಖಾನ್​ನ ನೋಡಲು ಆಸ್ಪತ್ರೆಗೆ ಓಡೋಡಿ ಬಂದ ಶಾರುಖ್; ಧೈರ್ಯ ತುಂಬಿದ ದಕ್ಷಿಣದ ನಟರು

ರಕ್ತದ ಮಡುವಿನಲ್ಲಿ ತಂದೆಯನ್ನು ನೋಡಿದ ಇಬ್ರಾಹಿಂ ಶಾಕ್​ಗೆ ಒಳಗಾದರು. ತಕ್ಷಣ ಅವರು ಕಾರಿನಲ್ಲಿ ತಂದೆಯನ್ನು ಆಸ್ಪತ್ರೆಯಿಂದ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರು. ಆದರೆ, ಯಾವ ಕಾರುಗಳೂ ಸಿದ್ಧವಿರಲಿಲ್ಲ. ಈ ಕಾರಣಕ್ಕೆ ಮನೆಯ ಹೊರಕ್ಕೆ ತೆರಳಿ ಆಟೋನ ಕರೆದುಕೊಂಡು ಬಂದರು. ಆಟೋದಲ್ಲಿ ಸೈಫ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಕರೀನಾ ಕಪೂರ್ ಅವರು ಮನೆಯಲ್ಲಿ ಟೆನ್ಷನ್​ನಿಂದ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಎಷ್ಟು ದೂರ?

ಸೈಫ್ ಅಲಿ ಖಾನ್ ಅವರು ಸದ್ಗುರು ಶರಣ್ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದಾರೆ. ಅಲ್ಲಿಂದ ಲೀಲಾವತಿ ಆಸ್ಪತ್ರೆ ಕೇವಲ 1.6 ಕಿ.ಮೀ. ದೂರ. ಮುಂಜಾನೆ ಕೇವಲ 5 ನಿಮಿಷಗಳಲ್ಲಿ ಆಸ್ಪತ್ರೆ ತಲುಪಬಹುದು. ಸರಿಯಾದ ಸಮಯಕ್ಕೆ ಆಟೋ ಸಿಕ್ಕಿದ್ದರಿಂದ ಅವರು ಆಸ್ಪತ್ರೆ ಸೇರಲು ಸಹಕಾರಿ ಆಯಿತು. ಈಗ ಸೈಫ್ ಅವರಿಗೆ ಸರ್ಜರಿ ಪೂರ್ಣಗೊಂಡಿದ್ದು, ಅವರು ಚೇತರಿಕೆ ಕಾಣುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:57 pm, Thu, 16 January 25

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್