AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್ ಅಲಿ ಖಾನ್ ಆಸ್ಪತ್ರೆ ಸೇರಿದ್ದು ಆಟೋದಲ್ಲಿ; ಸಹಾಯಕ್ಕೆ ಬಂದಿದ್ದು ಈ ವ್ಯಕ್ತಿ

ಸೈಫ್ ಅಲಿ ಖಾನ್ ಅವರು ಕಳ್ಳನ ದಾಳಿಯಿಂದ ಗಾಯಗೊಂಡಿದ್ದಾರೆ. ಕಳ್ಳನ ಚಾಕುವಿನಿಂದ ಆರು ಕಡೆ ಗಾಯಗೊಂಡ ಸೈಫ್ ಅವರನ್ನು ತಕ್ಷಣ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬೆನ್ನಿಗೆ ತೀವ್ರ ಗಾಯಗಳಾಗಿವೆ. ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಸೈಫ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಇಲ್ಲಿದೆ ವಿವರ.

ಸೈಫ್ ಅಲಿ ಖಾನ್ ಆಸ್ಪತ್ರೆ ಸೇರಿದ್ದು ಆಟೋದಲ್ಲಿ; ಸಹಾಯಕ್ಕೆ ಬಂದಿದ್ದು ಈ ವ್ಯಕ್ತಿ
ಸೈಫ್
Follow us
ರಾಜೇಶ್ ದುಗ್ಗುಮನೆ
|

Updated on:Jan 16, 2025 | 3:06 PM

ಸೈಫ್ ಅಲಿ ಖಾನ್ ಅವರು ಸ್ಟಾರ್ ಹೀರೋ. ಅವರ ಬಳಿ ಹಲವು ಐಷಾರಾಮಿ ಕಾರುಗಳು ಇವೆ. ಅವರು ಕಳ್ಳನು ಮಾಡಿದ ದಾಳಿಯಿಂದ ಸಾಕಷ್ಟು ತೊಂದರೆ ಅನುಭವಿಸಿದರು. ಕಳ್ಳ ಇರಿದ ಚಾಕುವಿನಿಂದ ಸಾಕಷ್ಟು ಕಡೆಗಳಲ್ಲಿ ಸೈಫ್​ಗೆ ಗಾಯಗಳಾಗಿವೆ. ಈ ವೇಳೆ ಸಹಾಯಕ್ಕೆ ಬಂದಿದ್ದು ಅವರ 23 ವರ್ಷದ ಮಗ ಇಬ್ರಾಹಿಮ್. ಸೈಫ್​ನ ಆಸ್ಪತ್ರೆಗೆ ಸೇರಿಸಿದ್ದು ಇವರೇ. ಅದು ಕೂಡ ಆಟೋದಲ್ಲಿ ಅನ್ನೋದು ವಿಶೇಷ.

ಬೆಳಿಗ್ಗೆ 2.30 ಸುಮಾರಿಗೆ ಮನೆಯಲ್ಲಿ ಗಲಾಟೆ ಕೇಳಿ ಸೈಫ್ ಅವರಿಗೆ ಎಚ್ಚರವಾಗಿದೆ. ಎದ್ದು ನೋಡಿದಾಗ ಸೈಫ್ ಅಲಿ ಖಾನ್​ಗೆ ಕಳ್ಳ ಕಾಣಿಸಿದ್ದಾನೆ. ಆತನ ತಡೆದಾಗ ಸೈಫ್ ಮೇಲೆ ಹಲ್ಲೆ ನಡೆದಿದೆ. ಈ ವೇಳೆ ಕತ್ತು, ಬೆನ್ನು ಸೇರಿ ಆರು ಕಡೆಗಳಲ್ಲಿ ಗಾಯಗಳಾಗಿವೆ. ಅದರಲ್ಲೂ ಬೆನ್ನಿನ ಭಾಗಕ್ಕೆ ಸೈಫ್​ಗೆ ತೀವ್ರವಾಗಿ ಗಾಯವಾಗಿತ್ತು. ಚಾಕುವಿನ ಚೂರು ಕೂಡ ಅವರ ಬೆನ್ನಿನಲ್ಲೇ ಉಳಿದುಕೊಂಡು ಬಿಟ್ಟಿತ್ತು.

ಇದನ್ನೂ ಓದಿ: ಸೈಫ್ ಅಲಿ ಖಾನ್​ನ ನೋಡಲು ಆಸ್ಪತ್ರೆಗೆ ಓಡೋಡಿ ಬಂದ ಶಾರುಖ್; ಧೈರ್ಯ ತುಂಬಿದ ದಕ್ಷಿಣದ ನಟರು

ರಕ್ತದ ಮಡುವಿನಲ್ಲಿ ತಂದೆಯನ್ನು ನೋಡಿದ ಇಬ್ರಾಹಿಂ ಶಾಕ್​ಗೆ ಒಳಗಾದರು. ತಕ್ಷಣ ಅವರು ಕಾರಿನಲ್ಲಿ ತಂದೆಯನ್ನು ಆಸ್ಪತ್ರೆಯಿಂದ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರು. ಆದರೆ, ಯಾವ ಕಾರುಗಳೂ ಸಿದ್ಧವಿರಲಿಲ್ಲ. ಈ ಕಾರಣಕ್ಕೆ ಮನೆಯ ಹೊರಕ್ಕೆ ತೆರಳಿ ಆಟೋನ ಕರೆದುಕೊಂಡು ಬಂದರು. ಆಟೋದಲ್ಲಿ ಸೈಫ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಕರೀನಾ ಕಪೂರ್ ಅವರು ಮನೆಯಲ್ಲಿ ಟೆನ್ಷನ್​ನಿಂದ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಎಷ್ಟು ದೂರ?

ಸೈಫ್ ಅಲಿ ಖಾನ್ ಅವರು ಸದ್ಗುರು ಶರಣ್ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದಾರೆ. ಅಲ್ಲಿಂದ ಲೀಲಾವತಿ ಆಸ್ಪತ್ರೆ ಕೇವಲ 1.6 ಕಿ.ಮೀ. ದೂರ. ಮುಂಜಾನೆ ಕೇವಲ 5 ನಿಮಿಷಗಳಲ್ಲಿ ಆಸ್ಪತ್ರೆ ತಲುಪಬಹುದು. ಸರಿಯಾದ ಸಮಯಕ್ಕೆ ಆಟೋ ಸಿಕ್ಕಿದ್ದರಿಂದ ಅವರು ಆಸ್ಪತ್ರೆ ಸೇರಲು ಸಹಕಾರಿ ಆಯಿತು. ಈಗ ಸೈಫ್ ಅವರಿಗೆ ಸರ್ಜರಿ ಪೂರ್ಣಗೊಂಡಿದ್ದು, ಅವರು ಚೇತರಿಕೆ ಕಾಣುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:57 pm, Thu, 16 January 25

ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ