AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರ್ಯಾಪ್ ಪ್ರಕರಣದಲ್ಲಿ ಶ್ರೀದೇವಿ ಮಗಳ ಪಾತ್ರ ಮಾಡಿದ್ದ ನಟಿಯ ಹೆಸರು; ಪಾಕ್ ಸೇನೆಗೆ ಹೀರೋಯಿನ್ ಸಹಾಯ

ಪಾಕಿಸ್ತಾನ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಆದಿಲ್ ರಾಜಾ ಅವರು ಪಾಕಿಸ್ತಾನದ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಸೋಲ್ಜರ್ ಸ್ಪೀಕ್ಸ್ ಹೆಸರಿನ ಯೂಟ್ಯೂಬ್ ಚಾನೆಲ್ ಅನ್ನು ಆದಿಲ್ ನಡೆಸುತ್ತಿದ್ದಾರೆ. 3 ಲಕ್ಷಕ್ಕೂ ಹೆಚ್ಚಿನ ಚಂದಾದಾರರು ಈ ಚಾನೆಲ್​​ಗೆ ಇದ್ದಾರೆ.

ಹನಿಟ್ರ್ಯಾಪ್ ಪ್ರಕರಣದಲ್ಲಿ ಶ್ರೀದೇವಿ ಮಗಳ ಪಾತ್ರ ಮಾಡಿದ್ದ ನಟಿಯ ಹೆಸರು; ಪಾಕ್ ಸೇನೆಗೆ ಹೀರೋಯಿನ್ ಸಹಾಯ
ಶ್ರೀದೇವಿ-ಸಾಜಲ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 05, 2023 | 11:44 AM

ಬಾಲಿವುಡ್​ (Bollywood) ಸಿನಿಮಾಗಳಲ್ಲಿ ನಟಿಸಿದ್ದ ಪಾಕಿಸ್ತಾನದ ಹೀರೋಯಿನ್ ಸಾಜಲ್ ಅಲಿ (Sajal Ali) ವಿರುದ್ಧ ಈಗ ಗಂಭೀರ ಆರೋಪ ಒಂದು ಕೇಳಿ ಬಂದಿದೆ. ಪಾಕಿಸ್ತಾನದ ಸೇನೆ ನಡೆಸುವ ಹನಿಟ್ರ್ಯಾಪ್​​ಗಳಿಗೆ ಸಾಜಲ್ ಬಳಕೆ ಆಗುತ್ತಿದ್ದರು ಎಂಬ ಆರೋಪ ಮಾಡಲಾಗಿದೆ. ಸಾಜಲ್ ಮಾತ್ರವಲ್ಲದೆ ಇನ್ನೂ ಅನೇಕ ಪಾಕಿಸ್ತಾನಿ ಹೀರೋಯಿನ್​ಗಳು ಇದಕ್ಕೆ ಬಳಕೆ ಆಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಹೇಳಿಕೆ ಸಾಕಷ್ಟು ಸೆನ್ಸೇಷನ್​ ಸೃಷ್ಟಿ ಮಾಡಿದೆ. ಈ ಆರೋಪದ ಬೆನ್ನಲ್ಲೇ ಸಾಜಲ್ ಉತ್ತರಿಸಿದ್ದು, ಇದನ್ನು ಅಲ್ಲಗಳೆದಿದ್ದಾರೆ.

ಪಾಕಿಸ್ತಾನ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಆದಿಲ್ ರಾಜಾ ಅವರು ಪಾಕಿಸ್ತಾನದ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಸೋಲ್ಜರ್ ಸ್ಪೀಕ್ಸ್ ಹೆಸರಿನ ಯೂಟ್ಯೂಬ್ ಚಾನೆಲ್ ಅನ್ನು ಆದಿಲ್ ನಡೆಸುತ್ತಿದ್ದಾರೆ. 3 ಲಕ್ಷಕ್ಕೂ ಹೆಚ್ಚಿನ ಚಂದಾದಾರರು ಈ ಚಾನೆಲ್​​ಗೆ ಇದ್ದಾರೆ. ಇತ್ತೀಚೆಗೆ ವಿಡಿಯೋ ಒಂದನ್ನು ಅವರು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಸಾಜಲ್ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ ಆದಿಲ್. ‘ಸಾಜಲ್ ಸೇರಿ ಅನೇಕ ಹೀರೋಯಿನ್​​ಗಳು ಹನಿಟ್ರ್ಯಾಪ್​ಕೆ ಬಳಕೆ ಆಗುತ್ತಿದ್ದಾರೆ. ಪಾಕಿಸ್ತಾನ ಸೇನೆ ಇವರನ್ನು ಬಳಸಿಕೊಳ್ಳುತ್ತಿದೆ’ ಎಂದು ಆದಿಲ್ ಆರೋಪಿಸಿದ್ದಾರೆ.

ನಟಿಯ ಉತ್ತರ ಏನು?

ಸಾಜಲ್ ಅವರು ಆದಿಲ್ ಹೇಳಿಕೆಗೆ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ. ‘ನಮ್ಮ ದೇಶವು ನೈತಿಕವಾಗಿ ಕೊಳಕು ಸ್ಥಿತಿ ತಲುಪುತ್ತಿರುವುದು ತುಂಬಾ ದುಃಖಕರ ವಿಚಾರ. ಚಾರಿತ್ರ್ಯ ವಧೆ ಪಾಪದ ಕೆಟ್ಟ ರೂಪ’ ಎಂದು ಅವರು ಹೇಳಿದ್ದಾರೆ.

ಸಾಜಲ್ ಹಿನ್ನೆಲೆ

ಸಾಜಲ್ ಅವರು ಜನಿಸಿದ್ದು 1994ರಲ್ಲಿ. 2009ರಲ್ಲಿ ಜಿಯೋ ಟಿವಿಯಲ್ಲಿ ಪ್ರಸಾರ ಕಂಡ ಧಾರಾವಾಹಿ ಮೂಲಕ ಬಣ್ಣದ ಬದುಕು ಆರಂಭಿಸಿದರು. ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. 2017ರಲ್ಲಿ ರಿಲೀಸ್ ಆದ ರವಿ ಉದ್ಯಾವರ್ ನಿರ್ದೇಶನದ ‘ಮಾಮ್​’ ಚಿತ್ರದಲ್ಲಿ ಶ್ರೀದೇವಿ ಮಗಳ ಪಾತ್ರದಲ್ಲಿ ಸಾಜಲ್ ನಟಿಸಿದ್ದರು. ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಹಾಗೂ ಅಕ್ಷಯ್ ಖನ್ನಾ ಕೂಡ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Thu, 5 January 23

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು