AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರ್ಯಾಪ್ ಪ್ರಕರಣದಲ್ಲಿ ಶ್ರೀದೇವಿ ಮಗಳ ಪಾತ್ರ ಮಾಡಿದ್ದ ನಟಿಯ ಹೆಸರು; ಪಾಕ್ ಸೇನೆಗೆ ಹೀರೋಯಿನ್ ಸಹಾಯ

ಪಾಕಿಸ್ತಾನ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಆದಿಲ್ ರಾಜಾ ಅವರು ಪಾಕಿಸ್ತಾನದ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಸೋಲ್ಜರ್ ಸ್ಪೀಕ್ಸ್ ಹೆಸರಿನ ಯೂಟ್ಯೂಬ್ ಚಾನೆಲ್ ಅನ್ನು ಆದಿಲ್ ನಡೆಸುತ್ತಿದ್ದಾರೆ. 3 ಲಕ್ಷಕ್ಕೂ ಹೆಚ್ಚಿನ ಚಂದಾದಾರರು ಈ ಚಾನೆಲ್​​ಗೆ ಇದ್ದಾರೆ.

ಹನಿಟ್ರ್ಯಾಪ್ ಪ್ರಕರಣದಲ್ಲಿ ಶ್ರೀದೇವಿ ಮಗಳ ಪಾತ್ರ ಮಾಡಿದ್ದ ನಟಿಯ ಹೆಸರು; ಪಾಕ್ ಸೇನೆಗೆ ಹೀರೋಯಿನ್ ಸಹಾಯ
ಶ್ರೀದೇವಿ-ಸಾಜಲ್
TV9 Web
| Edited By: |

Updated on:Jan 05, 2023 | 11:44 AM

Share

ಬಾಲಿವುಡ್​ (Bollywood) ಸಿನಿಮಾಗಳಲ್ಲಿ ನಟಿಸಿದ್ದ ಪಾಕಿಸ್ತಾನದ ಹೀರೋಯಿನ್ ಸಾಜಲ್ ಅಲಿ (Sajal Ali) ವಿರುದ್ಧ ಈಗ ಗಂಭೀರ ಆರೋಪ ಒಂದು ಕೇಳಿ ಬಂದಿದೆ. ಪಾಕಿಸ್ತಾನದ ಸೇನೆ ನಡೆಸುವ ಹನಿಟ್ರ್ಯಾಪ್​​ಗಳಿಗೆ ಸಾಜಲ್ ಬಳಕೆ ಆಗುತ್ತಿದ್ದರು ಎಂಬ ಆರೋಪ ಮಾಡಲಾಗಿದೆ. ಸಾಜಲ್ ಮಾತ್ರವಲ್ಲದೆ ಇನ್ನೂ ಅನೇಕ ಪಾಕಿಸ್ತಾನಿ ಹೀರೋಯಿನ್​ಗಳು ಇದಕ್ಕೆ ಬಳಕೆ ಆಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಹೇಳಿಕೆ ಸಾಕಷ್ಟು ಸೆನ್ಸೇಷನ್​ ಸೃಷ್ಟಿ ಮಾಡಿದೆ. ಈ ಆರೋಪದ ಬೆನ್ನಲ್ಲೇ ಸಾಜಲ್ ಉತ್ತರಿಸಿದ್ದು, ಇದನ್ನು ಅಲ್ಲಗಳೆದಿದ್ದಾರೆ.

ಪಾಕಿಸ್ತಾನ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಆದಿಲ್ ರಾಜಾ ಅವರು ಪಾಕಿಸ್ತಾನದ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಸೋಲ್ಜರ್ ಸ್ಪೀಕ್ಸ್ ಹೆಸರಿನ ಯೂಟ್ಯೂಬ್ ಚಾನೆಲ್ ಅನ್ನು ಆದಿಲ್ ನಡೆಸುತ್ತಿದ್ದಾರೆ. 3 ಲಕ್ಷಕ್ಕೂ ಹೆಚ್ಚಿನ ಚಂದಾದಾರರು ಈ ಚಾನೆಲ್​​ಗೆ ಇದ್ದಾರೆ. ಇತ್ತೀಚೆಗೆ ವಿಡಿಯೋ ಒಂದನ್ನು ಅವರು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಸಾಜಲ್ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ ಆದಿಲ್. ‘ಸಾಜಲ್ ಸೇರಿ ಅನೇಕ ಹೀರೋಯಿನ್​​ಗಳು ಹನಿಟ್ರ್ಯಾಪ್​ಕೆ ಬಳಕೆ ಆಗುತ್ತಿದ್ದಾರೆ. ಪಾಕಿಸ್ತಾನ ಸೇನೆ ಇವರನ್ನು ಬಳಸಿಕೊಳ್ಳುತ್ತಿದೆ’ ಎಂದು ಆದಿಲ್ ಆರೋಪಿಸಿದ್ದಾರೆ.

ನಟಿಯ ಉತ್ತರ ಏನು?

ಸಾಜಲ್ ಅವರು ಆದಿಲ್ ಹೇಳಿಕೆಗೆ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ. ‘ನಮ್ಮ ದೇಶವು ನೈತಿಕವಾಗಿ ಕೊಳಕು ಸ್ಥಿತಿ ತಲುಪುತ್ತಿರುವುದು ತುಂಬಾ ದುಃಖಕರ ವಿಚಾರ. ಚಾರಿತ್ರ್ಯ ವಧೆ ಪಾಪದ ಕೆಟ್ಟ ರೂಪ’ ಎಂದು ಅವರು ಹೇಳಿದ್ದಾರೆ.

ಸಾಜಲ್ ಹಿನ್ನೆಲೆ

ಸಾಜಲ್ ಅವರು ಜನಿಸಿದ್ದು 1994ರಲ್ಲಿ. 2009ರಲ್ಲಿ ಜಿಯೋ ಟಿವಿಯಲ್ಲಿ ಪ್ರಸಾರ ಕಂಡ ಧಾರಾವಾಹಿ ಮೂಲಕ ಬಣ್ಣದ ಬದುಕು ಆರಂಭಿಸಿದರು. ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. 2017ರಲ್ಲಿ ರಿಲೀಸ್ ಆದ ರವಿ ಉದ್ಯಾವರ್ ನಿರ್ದೇಶನದ ‘ಮಾಮ್​’ ಚಿತ್ರದಲ್ಲಿ ಶ್ರೀದೇವಿ ಮಗಳ ಪಾತ್ರದಲ್ಲಿ ಸಾಜಲ್ ನಟಿಸಿದ್ದರು. ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಹಾಗೂ ಅಕ್ಷಯ್ ಖನ್ನಾ ಕೂಡ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Thu, 5 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು