AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಜತೆ ನಟಿಸ್ತೀರಾ ಅಂತ ಕೇಳಿದ್ದಕ್ಕೆ ಅಸಲಿ ವಿಚಾರ ಬಾಯ್ಬಿಟ್ಟ ಸಾಕ್ಷಿ ತನ್ವರ್​

ಸಾಕ್ಷಿ ತನ್ವರ್​ ಅವರು ಹಿಂದಿ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅನೇಕ ಸೀರಿಯಲ್​ಗಳಲ್ಲಿ ಅಭಿನಯಿಸಿ ಅವರು ಖ್ಯಾತಿ ಪಡೆದಿದ್ದಾರೆ. 2016ರಲ್ಲಿ ತೆರೆಕಂಡ ‘ದಂಗಲ್​’ ಚಿತ್ರದಲ್ಲಿ ಅವರು ಆಮಿರ್​ ಖಾನ್​ಗೆ ಜೋಡಿಯಾಗಿದ್ದರು. ಈಗ ಯಶ್​ಗೆ ಜೋಡಿ ಆಗಲಿದ್ದಾರೆ ಎಂದು ಇತ್ತೀಚೆಗೆ ಗಾಸಿಪ್​ ಹಬ್ಬಿಸಿತ್ತು. ಅದಕ್ಕೆ ಸ್ವತಃ ಸಾಕ್ಷಿ ತನ್ವರ್​ ಅವರು ಈಗ ಪ್ರತಿಕ್ರಿಯೆ ನೀಡಿದ್ದಾರೆ.

ಯಶ್​ ಜತೆ ನಟಿಸ್ತೀರಾ ಅಂತ ಕೇಳಿದ್ದಕ್ಕೆ ಅಸಲಿ ವಿಚಾರ ಬಾಯ್ಬಿಟ್ಟ ಸಾಕ್ಷಿ ತನ್ವರ್​
ಸಾಕ್ಷಿ ತನ್ವರ್​, ಯಶ್​
ಮದನ್​ ಕುಮಾರ್​
|

Updated on: Mar 29, 2024 | 6:33 PM

Share

ನಟಿ ಸಾಕ್ಷಿ ತನ್ವರ್​ (Sakshi Tanwar) ಅವರ ಬಗ್ಗೆ ಇತ್ತೀಚಿನ ದಿನಗಳಲ್ಲಿ ಕೆಲವು ಗಾಸಿಪ್​ಗಳು (Gossip) ಹರಿದಾಡಿದ್ದವು. ಅವರಿಗೆ ಒಂದು ಬಂಪರ್​ ಆಫರ್​ ಸಿಕ್ಕಿದೆ ಎಂದು ಹೇಳಲಾಗಿತ್ತು. ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಮಿಂಚುತ್ತಿರುವ ‘ರಾಕಿಂಗ್​ ಸ್ಟಾರ್​’ ಯಶ್​ ಜೊತೆ ಅವರು ನಟಿಸಲಿದ್ದಾರೆ ಎಂಬ ಗಾಳಿಸುದ್ದಿ ಹಬ್ಬಿತ್ತು. ಈ ವಿಚಾರ ಕೇಳಿದ ಬಳಿಕ ಯಶ್​ ಅಭಿಮಾನಿಗಳ ವಲಯದಲ್ಲಿ ಚರ್ಚೆ ಜೋರಾಗಿತ್ತು. ಯಶ್​ (Yash) ಅವರಿಗೆ ಈಗ 38 ವರ್ಷ ವಯಸ್ಸು. ಅವರಿಗೆ ಜೋಡಿಯಾಗಿ ನಟಿಸುತ್ತಾರೆ ಎಂದು ಹೇಳಲಾಗುತ್ತಿರುವ ನಟಿ ಸಾಕ್ಷಿ ತನ್ವರ್​ ಅವರಿಗೆ ಈಗ 52 ವರ್ಷ ವಯಸ್ಸು. ಹಾಗಾಗಿ ಇಬ್ಬರ ಜೋಡಿ ಚೆನ್ನಾಗಿ ಇರುವುದಿಲ್ಲ ಎಂದು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಶುರುವಾಗಿತ್ತು.

ಅಷ್ಟಕ್ಕೂ ಯಶ್​ ಮತ್ತು ಸಾಕ್ಷಿ ತನ್ವರ್​ ಅವರನ್ನು ಜೋಡಿಯಾಗಿಸಲು ಪ್ರಯತ್ನಿಸಿದ್ದು ಯಾರು? ವರದಿಗಳ ಪ್ರಕಾರ ಬಾಲಿವುಡ್​ನ ‘ರಾಮಾಯಣ’ ಸಿನಿಮಾದಲ್ಲಿ ಇಂಥದ್ದೊಂದು ಕಾಂಬಿನೇಷನ್​ ಇರಲಿದೆ ಎಂದು ಹೇಳಲಾಗಿತ್ತು. ಯಶ್​ ಅವರು ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡುತ್ತಾರೆ ಎಂಬ ಗುಸುಗುಸು ಮೊದಲಿನಿಂದಲೂ ಕೇಳಿಬರುತ್ತಲೇ ಇದೆ. ರಾವಣನ ಪತ್ನಿ ಮಂಡೋದರಿ ಪಾತ್ರಕ್ಕೆ ಸಾಕ್ಷಿ ತನ್ವರ್​ ಅವರಿಗೆ ಅಫರ್​ ನೀಡಲಾಗಿದೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದರು. ಅದಕ್ಕೆ ಈಗ ಸ್ವತಃ ಸಾಕ್ಷಿ ತನ್ವರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಪದೇ ಪದೇ ಪ್ರಶ್ನೆ ಕೇಳಿದವರಿಗೆ ಯಶ್​ ಉತ್ತರ; ಝಲಕ್ ತೋರಿಸಿದ ರಾಕಿ ಭಾಯ್​

ಹಿಂದಿ ಕಿರುತೆರೆಯಲ್ಲಿ ಸಾಕ್ಷಿ ತನ್ವರ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಸೀರಿಯಲ್​ಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ. 2016ರಲ್ಲಿ ಬಂದ ‘ದಂಗಲ್​’ ಸಿನಿಮಾದಲ್ಲಿ ಅವರು ಆಮಿರ್​ ಖಾನ್​ಗೆ ಜೋಡಿಯಾಗಿದ್ದರು. ಆ ಸಿನಿಮಾಗೆ ನಿರ್ದೇಶನ ಮಾಡಿದ್ದ ನಿತೇಶ್​ ತಿವಾರಿ ಅವರೇ ಈಗ ರಾಮಾಯಣ ಚಿತ್ರಕ್ಕೆ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. ಹಾಗಾಗಿ ನಿತೇಶ್​ ತಿವಾರಿ ಅವರು ಸಾಕ್ಷಿ ತನ್ವರ್​ಗೆ ಆಫರ್​ ನೀಡಿರಬಹುದು ಎನ್ನಲಾಗಿತ್ತು. ಆದರೆ ಆ ಗಾಸಿಪ್​ ಅನ್ನು ಸಾಕ್ಷಿ ತನ್ವರ್​ ಅವರು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: ಯಶ್​ ಸಹೋದರಿ ಪಾತ್ರದಲ್ಲಿ ಕರೀನಾ ಕಪೂರ್​? ‘ಟಾಕ್ಸಿಕ್​’ ಚಿತ್ರದ ಬಗ್ಗೆ ಬಿಗ್ ನ್ಯೂಸ್​

‘ಮಂಡೋದರಿಯ ಪಾತ್ರಕ್ಕೆ ಯಾರೂ ಕೂಡ ನನ್ನನ್ನು ಬಂದು ಕೇಳಿಲ್ಲ’ ಎಂದು ಸಾಕ್ಷಿ ತನ್ವರ್​ ಹೇಳಿದ್ದಾರೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ. ಆ ಮೂಲಕ ಅವರು ಎಲ್ಲ ಗಾಸಿಪ್​ಗಳಿಗೆ ಪೂರ್ಣವಿರಾಮ ಹಾಕಿದ್ದಾರೆ. ರಾಮಾಯಣ ಸಿನಿಮಾದಲ್ಲಿ ಶ್ರೀರಾಮನಾಗಿ ರಣಬೀರ್​ ಕಪೂರ್​ ನಟಿಸಲಿದ್ದಾರೆ. ಸೀತೆಯಾಗಿ ಸಾಯಿ ಪಲ್ಲವಿ ಅಭಿನಯಿಸುತ್ತಾರೆ ಎನ್ನಲಾಗಿದೆ. ಆದರೆ ಪಾತ್ರವರ್ಗದ ಬಗ್ಗೆ ಚಿತ್ರತಂಡದವರು ಏನನ್ನೂ ಅಧಿಕೃತಗೊಳಿಸಿಲ್ಲ. ಆದಷ್ಟು ಬೇಗ ಈ ಬಗ್ಗೆ ಘೋಷಣೆ ಆಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?