AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajol: ಮದುವೆ ಬಳಿಕ 2 ತಿಂಗಳಲ್ಲಿ 8 ಕೆಜಿ ತೂಕ ಜಾಸ್ತಿ ಆಗಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಕಾಜೋಲ್​

Kajol | Salaam Venky: 1999ರ ಫೆಬ್ರವರಿ 24ರಂದು ಕಾಜೋಲ್​ ಮತ್ತು ಅಜಯ್​ ದೇವಗನ್​ ಅವರ ಮದುವೆ ಆಯಿತು. ಮದುವೆ ಬಳಿಕ ಕೇವಲ 2 ತಿಂಗಳಲ್ಲಿ 8 ಕೆಜಿ ದೇಹದ ತೂಕ ಹೆಚ್ಚಾಗಿದ್ದರ ಬಗ್ಗೆ ಕಾಜೋಲ್​ ಈಗ ಮಾತಾಡಿದ್ದಾರೆ.

Kajol: ಮದುವೆ ಬಳಿಕ 2 ತಿಂಗಳಲ್ಲಿ 8 ಕೆಜಿ ತೂಕ ಜಾಸ್ತಿ ಆಗಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಕಾಜೋಲ್​
ಕಾಜೋಲ್
TV9 Web
| Edited By: |

Updated on: Dec 07, 2022 | 1:31 PM

Share

ಮದುವೆ ನಂತರ ನಟಿಯರ ಬದುಕು ಬದಲಾಗುತ್ತದೆ. ಆದ್ಯತೆಗಳು, ಆಯ್ಕೆಗಳ ಜೊತೆಗೆ ದಿನಚರಿ ಕೂಡ ಚೇಂಜ್​ ಆಗುತ್ತದೆ. ತಮ್ಮ ಬದುಕಿನಲ್ಲಿ ಆದ ಬದಲಾವಣೆ ಕುರಿತು ನಟಿ ಕಾಜೋಲ್ (Kajol)​ ಅವರು ಈಗ ಹೇಳಿಕೊಂಡಿದ್ದಾರೆ. ಮದುವೆ ನಂತರವೂ ಅವರು ಸಿನಿಮಾಗಳಿಂದ ದೂರ ಉಳಿಯಲಿಲ್ಲ. ಇಂದಿಗೂ ಕಾಜೋಲ್​ ಬೇಡಿಕೆ ಉಳಿಸಿಕೊಂಡಿದ್ದಾರೆ. ವಯಸ್ಸಿಗೆ ಒಪ್ಪುವಂತಹ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾ ಇದ್ದಾರೆ. ಅಲ್ಲದೇ, ಪತಿ ಅಜಯ್​ ದೇವಗನ್​ ಅವರ ವೃತ್ತಿಜೀವನಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಅಜಯ್​ ದೇವಗನ್​ (Ajay Devgn) ಜೊತೆ ಮದುವೆ ಆದ ನಂತರದ ಎರಡು ತಿಂಗಳಲ್ಲಿ ಕಾಜೋಲ್​ ಅವರ ದೇಹದ ತೂಕ ಬರೋಬ್ಬರಿ 8 ಕೆಜಿ ಹೆಚ್ಚಾಗಿತ್ತು. ಅದಕ್ಕೆ ಕಾರಣ ಏನು ಎಂಬುದನ್ನು ಅವರೀಗ ವಿವರಿಸಿದ್ದಾರೆ.

1999ರ ಫೆಬ್ರವರಿ 24ರಂದು ಕಾಜೋಲ್​ ಮತ್ತು ಅಜಯ್​ ದೇವಗನ್​ ಅವರ ಮದುವೆ ಆಯಿತು. ತುಂಬ ಸರಳವಾಗಿ ವಿವಾಹ ಸಮಾರಂಭ ನಡೆಯಿತು. ಮದುವೆ ಬಳಿಕ ಕಾಜೋಲ್​ ಅವರ ಆಹಾರ ಪದ್ಧತಿ ಬದಲಾಯಿತು. ಪ್ರತಿ ದಿನ ಅವರು ಬಗೆಬಗೆಯ ಪರೋಟ ತಿನ್ನಲು ಶುರು ಮಾಡಿದರು. 2 ತಿಂಗಳಲ್ಲಿ 8 ಕೆಜಿ ದೇಹದ ತೂಕ ಹೆಚ್ಚಾಗಲು ಅದೇ ಕಾರಣ ಎಂದು ಕಾಜೋಲ್​ ಹೇಳಿದ್ದಾರೆ.

‘ಪ್ರತಿ ದಿನ ನಮ್ಮ ಡೈನಿಂಗ್​ ಟೇಬಲ್​ ಮೇಲೆ ಬಗೆಬಗೆಯ ಪರೋಟ ಇರುತ್ತಿತ್ತು. ಗೋಬಿ ಪರೋಟ, ಪನೀರ್​ ಪರೋಟ, ಆಲು ಪರೋಟ. ಅದರ ಜೊತೆಗೆ ಬೆಣ್ಣೆ ಕೂಡ ಇರುತ್ತಿತ್ತು. ಆ ಸಮಯದಲ್ಲಿ ಹೇಗೆ ಡಯೆಟ್​ ಮಾಡಬೇಕು ಎಂಬುದು ಸಹ ನನಗೆ ತಿಳಿದಿರಲಿಲ್ಲ’ ಎಂದು ಕಾಜೋಲ್​ ಹೇಳಿದ್ದಾರೆ. ಆಹಾರಪ್ರಿಯೆ ಆಗಿರುವ ಅವರು ಮನೆಯಲ್ಲಿ ಈಗಲೂ ಬಗೆಬಗೆಯ ಅಡುಗೆ ಮಾಡುತ್ತಾರೆ.

ಇದನ್ನೂ ಓದಿ
Image
Kajol: ಮಾಸ್ಕ್​ ತೆಗೆಯಬೇಕು ಎಂದು ಜಯಾ ಬಚ್ಚನ್​ಗೆ ಒತ್ತಾಯ ಮಾಡಿದ ಕಾಜೋಲ್​; ನೆಟ್ಟಿಗರ​ ಪ್ರತಿಕ್ರಿಯೆ ಏನು?
Image
Kajol: ಒಟಿಟಿ ಎಂಟ್ರಿ ಬಗ್ಗೆ ಕಡೆಗೂ ನಿಜ ಒಪ್ಪಿಕೊಂಡ ನಟಿ ಕಾಜೋಲ್​; ಹೆಚ್ಚಿತು ಫ್ಯಾನ್ಸ್​ ನಿರೀಕ್ಷೆ
Image
ಆಸ್ಕರ್ ಸಮಿತಿಯಲ್ಲಿ ಭಾರತದ ಇಬ್ಬರಿಗೆ ಸ್ಥಾನ; ಸೂರ್ಯ, ಕಾಜೋಲ್​ಗೆ ಸಿಕ್ತು ವಿಶೇಷ ಗೌರವ
Image
ಈ ಕೆಟ್ಟ ಚಟ ಬಿಡೋಕೆ ತುಂಬಾನೇ ಪ್ರಯತ್ನಿಸುತ್ತಿದ್ದಾರೆ ನಟಿ ಕಾಜೋಲ್​

ಇದನ್ನೂ ಓದಿ: Kajol: ಮಾಸ್ಕ್​ ತೆಗೆಯಬೇಕು ಎಂದು ಜಯಾ ಬಚ್ಚನ್​ಗೆ ಒತ್ತಾಯ ಮಾಡಿದ ಕಾಜೋಲ್​; ನೆಟ್ಟಿಗರ​ ಪ್ರತಿಕ್ರಿಯೆ ಏನು?

ಸಿನಿಮಾಗಳ ಆಯ್ಕೆಯಲ್ಲಿ ಕಾಜೋಲ್​ ಅವರು ತುಂಬ ಚ್ಯೂಸಿ ಆಗಿದ್ದಾರೆ. ತಮಗೆ ಇಷ್ಟ ಆಗುವಂತಹ ಸ್ಕ್ರಿಪ್ಟ್​ಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಅವರನ್ನು ಮತ್ತೆ ಮತ್ತೆ ಪರದೆ ಮೇಲೆ ನೋಡಲು ಅಭಿಮಾನಿಗಳು ಬಯಸುತ್ತಿದ್ದಾರೆ. ಕಾಜೋಲ್​ ನಟಿಸಿರುವ ಹೊಸ ಸಿನಿಮಾ ‘ಸಲಾಂ ವೆಂಕಿ’ ಈ ವಾರ (ಡಿ.9) ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Kajol: ಒಟಿಟಿ ಜಗತ್ತಿಗೆ ನಟಿ ಕಾಜೋಲ್​ ಎಂಟ್ರಿ; ಪ್ರತಿ ಎಪಿಸೋಡ್​ಗೆ ಪಡೆಯುವ ಸಂಭಾವನೆ ಇಷ್ಟೊಂದಾ?

‘ಸಲಾಂ ವೆಂಕಿ’ ಚಿತ್ರಕ್ಕೆ ರೇವತಿ ನಿರ್ದೇಶನ ಮಾಡಿದ್ದಾರೆ. ಕಾಜೋಲ್​ ಜೊತೆ ವಿಶಾಲ್​ ಜೇತ್ವಾ ನಟಿಸಿದ್ದಾರೆ. ವ್ಹೀಲ್​ ಚೇರ್​ನಲ್ಲಿ ಇರುವ ಮಗನಿಗಾಗಿ ಕಷ್ಟಪಡುವ ತಾಯಿಯ ಪಾತ್ರವನ್ನು ಕಾಜೋಲ್​ ಮಾಡಿದ್ದಾರೆ. ಆಮಿರ್ ಖಾನ್​ ಅವರು ಅತಿಥಿ ಪಾತ್ರದಲ್ಲಿ ನಟಿಸಿರುವುದು ವಿಶೇಷ. ಚಿತ್ರದ ಟ್ರೇಲರ್​ ನೋಡಿದ ಸಿನಿಪ್ರಿಯರು ಮೆಚ್ಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ