AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾಮ್​ ವೆಂಕಿ’ ಫಸ್ಟ್​ ಲುಕ್ : ಸುಜಾತಾ ಮತ್ತು ವೆಂಕಟೇಶ್​ ಪಾತ್ರದಲ್ಲಿ ಕಾಜೋಲ್​ ಮತ್ತು ವಿಶಾಲ್​ ಜೇತ್ವಾ

ಸಲಾಮ್​ ವೆಂಕಿ ಚಿತ್ರದ ಟ್ರೇಲರ್​ ಸೋಮವಾರ (ನವೆಂಬರ್​ 14) ರಂದು ಬಿಡುಗಡೆಯಾಗಲಿದೆ.

‘ಸಲಾಮ್​ ವೆಂಕಿ' ಫಸ್ಟ್​ ಲುಕ್ : ಸುಜಾತಾ ಮತ್ತು ವೆಂಕಟೇಶ್​ ಪಾತ್ರದಲ್ಲಿ ಕಾಜೋಲ್​ ಮತ್ತು ವಿಶಾಲ್​ ಜೇತ್ವಾ
ಸಲಾಮ್​ ವೆಂಕಿ ಮೂವಿ ಫಸ್ಟ್​ ಲುಕ್​
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 11, 2022 | 11:23 AM

ಕಾಜೋಲ್​ (kajol) ಅವರ ಇತ್ತೀಚಿನ ಇನ್​ಸ್ಟಾಗ್ರಾಮ್​ ಪೋಸ್ಟ್​ ಪ್ರಕಾರ ಕಾಜೋಲ್​ ಮತ್ತು ವಿಶಾಲ್​ ಜೇತ್ವಾ ಅವರ ‘ಸಲಾಮ್​ ವೆಂಕಿ’(salaam venky)ಚಿತ್ರದ ಟ್ರೇಲರ್​ ನವೆಂಬರ್​ 14 ರಂದು ಬಿಡುಗಡೆಯಾಗಲಿದೆ. ಗುರುವಾರ ಕಾಜೋಲ್ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ‘ಏಕ್​ ಬಡಿ ಜಿಂದಗಿ ಕಾ ಬಡಾ ಸೆಲೆಬ್ರೇಶನ್​ ಪ್ರಾರಂಭವಾಗಲಿದೆ’ ಎಂದು ಬರೆಯುವ ಮೂಲಕ ಚಿತ್ರದ ಮೊದಲ ಪೋಸ್ಟರ್​ನ್ನು ಹಂಚಿಕೊಂಡಿದ್ದಾರೆ.ಚಿತ್ರದ ಮೊದಲ ಪೋಸ್ಟ್​ರ್​ನಲ್ಲಿ ಕಾಜೋಲ್​ ಕೆಂಪು ಸೀರೆ ಧರಿಸಿದ್ದು ಹಾಗೂ ವಿಶಾಲ್​ ವಿಲ್​ಚೇರ್​ನಲ್ಲಿ ಕುಳಿತಿದ್ದಾರೆ.

ಇನ್ನು ಈ ಸಿನಿಮಾವನ್ನು ನಟಿ ಮತ್ತು ನಿರ್ಮಾಪಕಿ ರೇವತಿ ಅವರು ನಿರ್ದೇಶನ ಮಾಡಿದ್ದು, ಸೂರಜ್​ ಸಿಂಗ್​, ಶ್ರದ್ಧಾ ಅಗರವಾಲ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ಡಿಸೆಂಬರ್ 9 ರಂದು ತೆರೆಯ ಮೇಲೆ ಬರಲು ಸಿದ್ಧವಾಗಿದೆ. ಸಿನಿಮಾವು ಮಹಿಳೆಯ ನೈಜ ಕಥೆಯನ್ನ ಆಧಾರಿಸಿದ್ದು, ಜೀವನದಲ್ಲಿ ಅವಳು ಎದುರಿಸುವ ಸವಾಲುಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ‘ಮಿತ್ರ’ ವನ್ನು ನಿರ್ದೇಶಿಸಿರುವ ರೇವತಿಯವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ‘ಸಲಾಮ್​ ವೆಂಕಿ’ ಚಿತ್ರದ ಅನೇಕ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ. ಇನ್ನು ದುರ್ಗಾ ಪೂಜೆಯ ಸಂದರ್ಭದಲ್ಲಿ ನಟಿ ಕಾಜೋಲ್​ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ನಿರ್ಮಾಪಕಿ ರೇವತಿಯವರೊಂದಿಗೆ ತಮ್ಮ ಸಿನಿಮಾಗೆ ಶುಭವಾಗಲಿ ಎಂದು ಆರ್ಶಿವಾದ ಪಡೆಯುತ್ತಿರುವ ವಿಡಿಯೋವನ್ನ ಹಂಚಿಕೊಂಡಿದ್ದರು.

View this post on Instagram

A post shared by Kajol Devgan (@kajol)

ಕಾಜೋಲ್​ ಅವರ ಈ ಹಿಂದೆ ನಟಿಸಿದ ತನ್ಹಾಜಿ ಚಿತ್ರವು ಬ್ಲಾಕ್​ ಬಸ್ಟರ್​ ಆಗಿ ಹೊರಹೊಮ್ಮಿತು, ಇದಾದ ಬಳಿಕ ಸಲಾಮ್​ ವೆಂಕಿ ಸಿನಿಮಾವೊಂದಿಗೆ ಬಂದಿದ್ದು ಗಲ್ಲಾ ಪೆಟ್ಟಗೆಯಲ್ಲಿ ಎಷ್ಟು ಗಳಿಕೆ ಮಾಡಬಹುದು ಎಂದು ಕಾದು ನೋಡಬೇಕಾಗಿದೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ