AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ವಾನ್ಸ್ ಟಿಕೆಟ್ ಬುಕಿಂಗ್​ನಲ್ಲಿ ‘ಡಂಕಿ’ ಚಿತ್ರವನ್ನು ಹಿಂದಿಕ್ಕಿದ ‘ಸಲಾರ್’; ಎರಡನೇ ಟ್ರೇಲರ್​ಗೆ ಕೌಂಟ್​ಡೌನ್  

‘ಸಲಾರ್’ ಸಿನಿಮಾಗೆ ಈವರೆಗೆ 1,53, 705 ಟಿಕೆಗಟ್​ಗಳು ಮಾರಾಟ ಆಗಿವೆ. ತೆಲುಗು ಮಾತನಾಡುವ ಭಾಗದಲ್ಲಿ 84 ಸಾವಿರ, ಮಲಯಾಳಂ ಭಾಗದಲ್ಲಿ 42 ಸಾವಿರ, ಹಿಂದಿ ಭಾಗದಲ್ಲಿ 18 ಸಾವಿರ ಟಿಕೆಟ್ ಬುಕ್ ಆಗಿದೆ.

ಅಡ್ವಾನ್ಸ್ ಟಿಕೆಟ್ ಬುಕಿಂಗ್​ನಲ್ಲಿ ‘ಡಂಕಿ’ ಚಿತ್ರವನ್ನು ಹಿಂದಿಕ್ಕಿದ ‘ಸಲಾರ್’; ಎರಡನೇ ಟ್ರೇಲರ್​ಗೆ ಕೌಂಟ್​ಡೌನ್  
ಪ್ರಭಾಸ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Dec 18, 2023 | 12:47 PM

Share

ಈ ಬಾರಿಯ ಕ್ರಿಸ್​​ಮಸ್ ಸಂದರ್ಭದಲ್ಲಿ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕ್ಲ್ಯಾಶ್ ಏರ್ಪಡುತ್ತಿದೆ. ಶಾರುಖ್ ಖಾನ್ ನಟನೆಯ ‘ಡಂಕಿ’ (ಡಿಸೆಂಬರ್ 21) ಹಾಗೂ ಪ್ರಭಾಸ್ (Prabhas) ನಟನೆಯ ‘ಸಲಾರ್ (ಡಿಸೆಂಬರ್ 22) ಒಂದು ದಿನದ ಅಂತರದಲ್ಲಿ ರಿಲೀಸ್ ಆಗುತ್ತಿದೆ. ಈ ಸಿನಿಮಾಗಳು ಮೊದಲು ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈಗ ಅಡ್ವಾನ್ಸ್ ಬುಕಿಂಗ್ ಲೆಕ್ಕ ಸಿಕ್ಕಿದ್ದು, ‘ಡಂಕಿ’ ಚಿತ್ರವನ್ನು ‘ಸಲಾರ್’ ಹಿಂದಿಕ್ಕಿದೆ. ‘ಸಲಾರ್’ ಮಾಸ್ ಆಗಿರುವುದರಿಂದ ಜನರು ಈ ಚಿತ್ರದತ್ತ ಹೆಚ್ಚು ವಾಲುತ್ತಿದ್ದಾರೆ.

‘ಸಲಾರ್’ ಸಿನಿಮಾಗೆ ಈವರೆಗೆ 1,53, 705 ಟಿಕೆಗಟ್​ಗಳು ಮಾರಾಟ ಆಗಿವೆ. ತೆಲುಗು ಮಾತನಾಡುವ ಭಾಗದಲ್ಲಿ 84 ಸಾವಿರ, ಮಲಯಾಳಂ ಭಾಗದಲ್ಲಿ 42 ಸಾವಿರ, ಹಿಂದಿ ಭಾಗದಲ್ಲಿ 18 ಸಾವಿರ ಟಿಕೆಟ್ ಬುಕ್ ಆಗಿದೆ. ಕನ್ನಡ, ತಮಿಳು ಭಾಗದ ಲೆಕ್ಕಾಚಾರ ಇನ್ನಷ್ಟೇ ಸಿಗಬೇಕಿದೆ. ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎನ್ನುವ ಕುತೂಹಲ ಮೂಡಿದೆ.

‘ಡಂಕಿ’ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ಪಡೆದಿರುವ ರಾಜ್​ಕುಮಾರ್ ಹಿರಾನಿ ಅವರು ‘ಡಂಕಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್ ಖಾನ್, ತಾಪ್ಸಿ ಪನ್ನು, ವಿಕ್ಕಿ ಕೌಶಲ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ 1,44, 830 ಟಿಕೆಟ್​ಗಳು ಮಾರಾಟ ಆಗಿವೆ. ವಿದೇಶದಲ್ಲೂ ಈ ಚಿತ್ರಕ್ಕೆ ಅಬ್ಬರದ ಬುಕಿಂಗ್ ಆಗುತ್ತಿದೆ.

ಇದನ್ನೂ ಓದಿ: ‘ಡಂಕಿ’ ಕ್ರೇಜ್: ಶಾರುಖ್ ಖಾನ್ ಸಿನಿಮಾ ನೋಡಲು ವಿದೇಶದಿಂದ ಬರುತ್ತಿದ್ದಾರೆ ಅಭಿಮಾನಿಗಳು

ಶಾರುಖ್ ಖಾನ್ ಅವರು ಇತ್ತೀಚೆಗೆ ‘ಡಂಕಿ’ ಸಿನಿಮಾ ಪ್ರಮೋಷನ್​ಗೆ ದುಬೈಗೆ ತೆರಳಿದ್ದರು. ಅಲ್ಲಿ ಫ್ಯಾನ್ಸ್​ನ ಭೇಟಿ ಮಾಡಿದ್ದಾರೆ. ಶಾರುಖ್​ಗೆ ದುಬೈನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ‘ಸಲಾರ್’ ತಂಡದವರು ಕೂಡ ಸ್ಪರ್ಧೆಗೆ ಇಳಿದಿದ್ದಾರೆ. ಅವರು ಎರಡನೇ ಟ್ರೇಲರ್ ರಿಲೀಸ್ ಮಾಡಲು ರೆಡಿ ಆಗಿದ್ದಾರೆ. ಈ ಟ್ರೇಲರ್ ನೋಡಲು ಫ್ಯಾನ್ಸ್ ಕಾದಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಟ್ರೇಲರ್ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?