Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ಗೆ ಹೆದರಿದ ಶಾರುಖ್? ಮುಂದಕ್ಕೆ ಹೋಗಲಿದೆ ‘ಡಂಕಿ’ ರಿಲೀಸ್

ಈ ಬಗ್ಗೆ ಟ್ರೇಡ್ ಅನಲಿಸ್ಟ್ ಮನೋಬಲ ವಿಜಯಬಾಲನ್ ಟ್ವೀಟ್ ಮಾಡಿದ್ದಾರೆ. ‘ಸಲಾರ್ vs ಡಂಕಿ ಸ್ಪರ್ಧೆ ಇಲ್ಲ. ಶಾರುಖ್ ಖಾನ್ ನಟನೆಯ ಡಂಕಿ ಸಿನಿಮಾ ಪೋಸ್ಟ್​ಪೋನ್ ಆಗೋ ಸಾಧ್ಯತೆ ಇದೆ’ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಕುತೂಹಲ ಹೆಚ್ಚಿದೆ.

ಪ್ರಶಾಂತ್​ ನೀಲ್​ಗೆ ಹೆದರಿದ ಶಾರುಖ್? ಮುಂದಕ್ಕೆ ಹೋಗಲಿದೆ ‘ಡಂಕಿ’ ರಿಲೀಸ್
ಶಾರುಖ್​-ಪ್ರಭಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 13, 2023 | 10:57 AM

‘ಡಂಕಿ’ Vs ‘ಸಲಾರ್’ ಬಗ್ಗೆ ಜೋರಾಗಿ ಚರ್ಚೆ ಆಗುತ್ತಿದೆ. ಡಿಸೆಂಬರ್ 22ರಂದು ಈ ಎರಡೂ ಸಿನಿಮಾಗಳು ರಿಲೀಸ್ ಆಗಲಿವೆ. ಈ ಎರಡೂ ಚಿತ್ರಗಳ ಪೈಕಿ ಗೆಲ್ಲೋದು ಯಾರು ಎನ್ನುವ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಮಧ್ಯೆ ‘ಡಂಕಿ’ ಸಿನಿಮಾದ (Dunki Movie) ರಿಲೀಸ್ ದಿನಾಂಕ 2024ಕ್ಕೆ ಪೋಸ್ಟ್​ಪೋನ್​ ಆಗಲಿದೆ ಎಂದು ವರದಿ ಆಗಿದೆ. ಈ ಮಾತು ಕೇಳಿ ಪ್ರಭಾಸ್ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ‘ಸಲಾರ್’ ಸಿನಿಮಾ ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ.

2018ರಲ್ಲಿ ಶಾರುಖ್ ಖಾನ್ ನಟನೆಯ ‘ಜೀರೋ’ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಒಟ್ಟಿಗೆ ರಿಲೀಸ್ ಆಯಿತು. ‘ಕೆಜಿಎಫ್’ ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಬಿಡುಗಡೆ ಆಗಿ ಮೆಚ್ಚುಗೆ ಪಡೆಯಿತು. 40+ ಕೋಟಿ ರೂಪಾಯಿ ಗಳಿಕೆ ಮಾಡಿ ಈ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ‘ಕೆಜಿಎಫ್’ ಎದುರು ‘ಜೀರೋ’ ಚಿತ್ರಕ್ಕೆ ಸೋಲಾಯಿತು. ಈಗ ಮತ್ತೊಮ್ಮೆ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಹಾಗೂ ಶಾರುಖ್ ಖಾನ್ ಮತ್ತೊಮ್ಮೆ ಮುಖಾಮುಖಿ ಆಗುತ್ತಿದ್ದಾರೆ.

ಈ ಬಗ್ಗೆ ಟ್ರೇಡ್ ಅನಲಿಸ್ಟ್ ಮನೋಬಲ ವಿಜಯಬಾಲನ್ ಟ್ವೀಟ್ ಮಾಡಿದ್ದಾರೆ. ‘ಸಲಾರ್ vs ಡಂಕಿ ಸ್ಪರ್ಧೆ ಇಲ್ಲ. ಶಾರುಖ್ ಖಾನ್ ನಟನೆಯ ಡಂಕಿ ಸಿನಿಮಾ ಪೋಸ್ಟ್​ಪೋನ್ ಆಗೋ ಸಾಧ್ಯತೆ ಇದೆ’ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಕುತೂಹಲ ಹೆಚ್ಚಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಈ ಎರಡೂ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿವೆ. ಇದರಿಂದ ಶಾರುಖ್ ಖಾನ್ ಅವರು ಫಾರ್ಮ್​​ಗೆ ಮರಳಿದ್ದಾರೆ. ಈಗ ‘ಡಂಕಿ’ ಸಿನಿಮಾ ಮೂಲಕ ಈ ವರ್ಷ ಹ್ಯಾಟ್ರಿಕ್ ಗೆಲುವು ಕಾಣುವ ಭರವಸೆಯಲ್ಲಿ ಅವರಿದ್ದಾರೆ. ಆದರೆ, ಇದು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:  ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?

‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಇದೆ. ತಾಪ್ಸಿ ಪನ್ನು ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು, ‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Fri, 13 October 23

ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ